ಇತ್ತೀಚೆಗೆ ಯುವಕರಿಗೆ ಹೆಚ್ಚು ಹೃದಯಾಘಾತ; ಇದಕ್ಕೆ ಕಾರಣ ಏನು? ವೈದ್ಯರು ಹೇಳಿದ್ದಿಷ್ಟು

ದಸರಾ ಹಬ್ಬ ಸಂಭ್ರಮ ಅಂತಾ ಹಬ್ಬದ ಜೋಶ್ ನಲ್ಲಿ ಮೈಮರೆತು ಸಕತ್ ಕುಣಿತಾ, ಅಣ್ಣಮ್ಮನ ಸ್ಟೆಪ್ಸ್, ನೃತ್ಯ ಗಾರ್ಬಾ ಕುಣಿತಾ, ಓಡಾಟ ಮಾಡುವ ಮುನ್ನ ಅಲರ್ಟ್. ಹೃದಯದ ಆರೋಗ್ಯದ ಬಗ್ಗೆ ತಿಳಿಯದೇ ಹೃದಯದ ಹಿಸ್ಟರಿ ಅರಿಯದೇ ಹಿಂದೆ ಮುಂದೆ ನೋಡದೇ ಅತಿಯಾದ ದೈಹಿಕ ಒತ್ತಡ ಬೀಳುವ ಡ್ಯಾನ್ಸ್ ನಿಮ್ಮ ಜೀವ ತಗೆಯಬಹುದು ಎಚ್ಚರ ಅಂತಿದ್ದಾರೆ ತಜ್ಞ ವೈದ್ಯರು.

ಇತ್ತೀಚೆಗೆ ಯುವಕರಿಗೆ ಹೆಚ್ಚು ಹೃದಯಾಘಾತ; ಇದಕ್ಕೆ ಕಾರಣ ಏನು? ವೈದ್ಯರು ಹೇಳಿದ್ದಿಷ್ಟು
ಹೃದಯImage Credit source: iStock
Follow us
| Updated By: ಆಯೇಷಾ ಬಾನು

Updated on:Oct 24, 2023 | 7:36 AM

ಬೆಂಗಳೂರು, ಅ.24: ಜನರ ಜೀವ ಹಿಂಡುವ ಹೆಮ್ಮಾರಿ ಕೊರೊನಾ (Coronavirus) ಬಂದಾಗಿನಿಂದ ಜನರಿಗೆ ಒಂದಲ್ಲ ಒಂದು ಖಾಯಿಲೆಗಳು ಶುರುವಾಗಿದೆ. ಒಂದಲ್ಲ ಒಂದು ಚಿತ್ರವಿಚಿತ್ರ ಆರೋಗ್ಯ ಸಮಸ್ಯೆಯಿಂದ ಕಂಗೆಟ್ಟಿದ್ದಾರೆ. ಕೆಲವರಿಗೆ ಹೃದಯಘಾತ ಸಂಭವಿಸುತ್ತಿದ್ದರೆ, ಹಲವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅತಿಯಾದ ಆಯಾಸ ದೈಹಿಕ ಒತ್ತಡವೂ ಯುವಕರಲ್ಲಿ ಹೃದಯಘಾತಕ್ಕೆ (Heart Attack) ಕಾರಣವಾಗ್ತೀರೊದು ಆತಂಕ್ಕೆ ಕಾರಣವಾಗಿದೆ.

ಗುಜರಾತ್​ನಲ್ಲಿ ಗಾರ್ಬಾ ನೃತ್ಯ ಮಾಡುವ ವೇಳೆ 10 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಸದ್ಯ ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮೊದಲೇ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳು, ಹೃದಯ ಸಮಸ್ಯೆಗಳ ಬಗ್ಗೆ ತಿಳವಳಿಕೆ ಹಾಗೂ ಅವರ ಈ ಹಿಂದಿನ ಹೃದಯಸಂಬಂಧಿ ಸಮಸ್ಯೆಗಳ ಹಿಸ್ಟರಿ ಇಲ್ಲದೇ ಇರುವುದೇ ಹೃದಯಘಾತಕ್ಕೆ ಕಾರಣವಾಗಿದೆ. ಜೊತೆಗೆ ದೀರ್ಘ ಉಪವಾಸ, ಅನಾರೋಗ್ಯಕರ ಆಹಾರ ಹಾಗೆಯೇ ಈಗಾಗಲೇ ಹೃದಯ ಸಂಬಂಧಿ ಕಾಯಿಲೆ ಹೊಂದಿರುವ ಕುರಿತು ತಿಳಿವಳಿಕೆ ಇಲ್ಲದಿರುವುದೇ ಈ ಸಾವಿಗೆ ಕಾರಣವಾಗಿದೆ. ಗುಜರಾತನಲ್ಲಿ ಗಾರ್ಬ್ ನೃತ್ಯದಿಂದ ಒಂದೇ ದಿನದಲ್ಲಿ 10 ಜನರಲ್ಲಿ ಹೃದಯಘಾತದಿಂದ ಸಾವು ಪ್ರಕರಣ ಹಿನ್ನಲೆ ವೈದ್ಯರು ಜನರಿಗೆ ಎಚ್ಚರಿಕೆಯಿಂದ ಇರಲು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಕೊವಿಡ್ ಬಳಿಕ ರಾಜ್ಯದಲ್ಲಿ ಹೆಚ್ಚಾಗಿ ಹೃದಯಘಾತ ಕಂಡು ಬರ್ತಿದೆ. ಅದರಲ್ಲೂ ಅತಿಯಾದ ದೈಹಿಕ ವ್ಯಾಯಾಮ ಕುಣಿತಾ ಸ್ಟೆಪ್ಸ್ ಯಾವತ್ತು ಡ್ಯಾನ್ಸ್ ಮಾಡದವರು ಅತಿಯಾಗಿ ಕುಣಿತ, ಹಬ್ಬದ ಜೋಶ್​ನಲ್ಲಿ ಇತರದ ಚಟುವಟಿಕೆಗಳಲ್ಲಿ ಮುಂದಾಗುವ ವೇಳೆ ಹೃದಯ ಸ್ತಂಭನದ ಸಾಧ್ಯತೆ ಹೆಚ್ಚಾಗಿ ಇರುತ್ತೆ ಎಂದು ಹೃದಯ ತಜ್ಞ, ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್​ನಲ್ಲಿ ಗಾರ್ಬಾ ನೃತ್ಯದ ವೇಳೆ 10 ಮಂದಿ ಹೃದಯಾಘಾತದಿಂದ ಸಾವು, ವೈದ್ಯರು ಕೊಟ್ಟ ಕಾರಣಗಳಿವು

ಸದ್ಯ ಕಳೆದ 10 ವರ್ಷಗಳಲ್ಲಿ ಯುವ ಸಮುದಾಯದಲ್ಲಿ ಹೃದಯಾಘಾತದ ಪ್ರಮಾಣ ಶೇ.22ರಷ್ಟು ಹೆಚ್ಚಾಗಿದೆ. ಸಮೀಕ್ಷೆಯ ಪ್ರಕಾರ, ಹೃದಯ ವೈಫಲ್ಯದಿಂದ ಬಳಲುತ್ತಿರುವ 75% ಬೆಂಗಳೂರಿಗರ ಪೈಕಿ 60% ಹೃದಯ ವೈಫಲ್ಯದ ರೋಗಿಗಳು ಅನಿಯಂತ್ರಿತ ಮಧುಮೇಹದಿಂದ ಬಳಲುತ್ತಿದ್ದಾರೆ. ಅವರಲ್ಲಿ ಸುಮಾರು 50% ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದುಬಂದಿದೆ. ಹೀಗಾಗಿ ಯುವಕರು ಅತಿಯಾದ ದೈಹಿಕ ಒತ್ತಡ ಬೀಳುವ ಡ್ಯಾನ್ಸ್ ಕುಣಿತ ಮಾಡುವ ಮುನ್ನ ಎಚ್ಚರ ಇರಲಿ ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಾಮಾನ್ಯವಾಗಿ ಹಿರಿಯರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಹೃದಯಾಘಾತವು ಈಗ ಯುವಕರು, ಮಕ್ಕಳಲ್ಲಿ ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಯುವಕರು ಹೃದಯದ ಆರೋಗ್ಯ ಅಥವಾ ಹಿಸ್ಟರಿ ಅರಿಯದೇ ಅತಿಯಾದ ದೈಹಿಕ ಚಟುವಟಿಕೆಯಲ್ಲಿ ಭಾಗಿಯಾಗುವ ಮುನ್ನ ಎಚ್ಚರ ವಹಿಸಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:17 am, Tue, 24 October 23

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ