AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಬಂದು ಹೋದವರಿಗೆ ಮತ್ತೊಂದು ಸಮಸ್ಯೆ; ಕೂದಲು ಉದುರುವಿಕೆಗೆ ದಂಗಾದ ಜನತೆ

ಕೊವಿಡ್ ಬಂದು ಹೋದವರಿಗೆ ಬೋಳು ಮಂಡೆಯಾಗುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಇಎಸ್ಐ ಆಸ್ಪತ್ರೆಗಳು ಸೇರಿದಂತೆ, ನಗರದ ಚರ್ಮ ರೋಗ ತಜ್ಞರ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ತಲೆ ಕೂದಲು ಉದುರುವ ಸಮಸ್ಯೆ ಹೇಳಿಕೊಂಡು ಜನರು ಆಗಮಿಸುತ್ತಿದ್ದಾರೆ.

ಕೊವಿಡ್ ಬಂದು ಹೋದವರಿಗೆ ಮತ್ತೊಂದು ಸಮಸ್ಯೆ; ಕೂದಲು ಉದುರುವಿಕೆಗೆ ದಂಗಾದ ಜನತೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 29, 2021 | 9:46 AM

Share

ಬೆಂಗಳೂರು: ಕೊವಿಡ್ ಬಂದು ಹೋದವರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಕೊವಿಡ್​ನಿಂದ ಚೇತರಿಸಿಕೊಂಡ 3 ರಿಂದ 4 ತಿಂಗಳ ಬಳಿಕ ತಲೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದೆ. ದಿನೇ ದಿನೇ ತಲೆ ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಬಗ್ಗೆ ತಜ್ಞ ವೈದ್ಯರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶಗಳ ಕೊರತೆ, ಮಾನಸಿಕ ಹಾಗೂ ದೈಹಿಕ ಒತ್ತಡ ಇದಕ್ಕೆ ಕಾರಣವಾಗಿದೆ. ಅಲ್ಲದೆ ಅತಿಯಾದ ಔಷಧಿ ಬಳಕೆಯಿಂದ ಕೂದಲು ಉದುರುವಿಕೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಕೊವಿಡ್ ಬಂದು ಹೋದವರಿಗೆ ಬೋಳು ಮಂಡೆಯಾಗುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಇಎಸ್ಐ ಆಸ್ಪತ್ರೆಗಳು ಸೇರಿದಂತೆ, ನಗರದ ಚರ್ಮ ರೋಗ ತಜ್ಞರ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ತಲೆ ಕೂದಲು ಉದುರುವ ಸಮಸ್ಯೆ ಹೇಳಿಕೊಂಡು ಜನರು ಆಗಮಿಸುತ್ತಿದ್ದಾರೆ. ಕೊವಿಡ್ ಬಂದು ಹೋದ ಶೇ.60 ರಷ್ಟು ಜನರಿಗೆ ಈ ಸಮಸ್ಯೆ ಎದುರಾಗಿದೆ. ಅದರಲ್ಲೂ ಮಹಿಳೆಯರಲ್ಲೇ ಹೆಚ್ಚಾಗಿ ಈ ಸಮಸ್ಯೆ ಕಂಡು ಬರುತ್ತಿದೆ.

ಮಾನಸಿಕ ಒತ್ತಡ ಉಂಟಾದಾಗ ಕೂದಲು ಉದುರುವ ಸಮಸ್ಯೆ ಕಾಡುವುದು ಮಾಮೂಲಿ. ಅನಗತ್ಯ ಚಿಂತೆಯಿಂದ ಮಾನಸಿಕ ಸ್ಥಿತಿ ಹದಗೆಡುತ್ತದೆ. ವಿಪರೀತ ಟೆನ್ಷನ್​ನಿಂದ ದೇಹದ ಸ್ಥಿತಿ ದುರ್ಬಗೊಳ್ಳುತ್ತದೆ. ಅದರಲ್ಲಿಯೂ ಕೊವಿಡ್​-19 ಸಾಂಕ್ರಾಮಿಕ ರೋಗ ಜನರಿಗೆ ಹೆಚ್ಚು ಮಾನಸಿಕ ಒತ್ತಡವನ್ನು ತಂದು ಬಿಟ್ಟಿತು. ಇದರಿಂದ ಜನರು ಹೆಚ್ಚು ಗೊಂದಲಕ್ಕೀಡಾದರು ಹಾಗೂ ದೀರ್ಘಕಾಲಿಕ ಕೊವಿಡ್​ ಬಳಿಕವೂ ಸಹ ಕೂದಲುದುರುವ ಸಮಸ್ಯೆ ಕಾಡತೊಡಗಿತು.

ಇದನ್ನೂ ಓದಿ: ಭಾರತದಲ್ಲಿ ಕೊವಿಡ್‌ಗೆ 50 ಲಕ್ಷ ಜನ ಬಲಿ, ಆದ್ರೆ 100 ಕೋಟಿ ಡೋಸ್ ನೀಡಿದ್ದಕ್ಕೆ ಸಂಭ್ರಮಿಸುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

National Doctor’s Day 2021: ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊವಿಡ್​ ಸಮಯದಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು ಎದುರಿಸಿದ ಕೆಲವು ಸಮಸ್ಯೆಗಳು

Published On - 9:37 am, Fri, 29 October 21

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ