ಜೈಲಿಗೆ ಹೋಗಿ ಬಂದ್ರೂ ಕಳ್ಳತನ ಬಿಡದ ಅಸಾಮಿ; 18 ಲಕ್ಷ ರೂ. ಮೌಲ್ಯದ ವಾಹನಗಳನ್ನ ಕದ್ದು ಸಿಕ್ಕಿಬಿದ್ದ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಂತೆ ಇದೀಗ ಜೈಲಿಗೆ ಹೋಗಿ ಬಂದಿದ್ದ ಅಸಾಮಿಯೊಬ್ಬ, ಮತ್ತೆ 18 ಲಕ್ಷ ರೂ. ಮೌಲ್ಯದ 1 ಟೆಂಪೋ, 3 ಆಟೋ, 3 ಬೈಕ್​ಗಳನ್ನ ಕದ್ದು ಬೆಂಗಳೂರಿನ ವಿವಿಪುರಂ ಪೊಲೀಸರ(VV Puram Police) ಕೈಗೆ ಸಿಕ್ಕಿಬಿದ್ದಿದ್ದಾನೆ.

ಜೈಲಿಗೆ ಹೋಗಿ ಬಂದ್ರೂ ಕಳ್ಳತನ ಬಿಡದ ಅಸಾಮಿ; 18 ಲಕ್ಷ ರೂ. ಮೌಲ್ಯದ ವಾಹನಗಳನ್ನ ಕದ್ದು ಸಿಕ್ಕಿಬಿದ್ದ
ಕಳ್ಳತನ ಆರೋಪಿ
Follow us
|

Updated on:Jun 28, 2024 | 6:26 PM

ಬೆಂಗಳೂರು, ಜೂ.28: ಜೈಲಿಗೆ ಹೋಗಿ ಬಂದರೂ ಕಳ್ಳತನ ಬಿಡದ ಅಸಾಮಿಯೊಬ್ಬ ಮತ್ತೆ ಕದ್ದು ಬೆಂಗಳೂರಿನ ವಿವಿಪುರಂ ಪೊಲೀಸರ(VV Puram Police) ಕೈಗೆ ಸಿಕ್ಕಿಬಿದ್ದಿದ್ದಾನೆ. ಅಭಿಷೇಕ್​ ಅಲಿಯಾಸ್​ ಮಿಲ್ಕಿ ಬಂಧಿತ ವ್ಯಕ್ತಿ. ಇತ ಈ ಹಿಂದೆ ಬೈಕ್​ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ. ಆದರೂ ಬುದ್ದಿ ಕಲಿಯದ ಖದೀಮ, ಮತ್ತೆ ತನ್ನ ಕಳ್ಳತನ ವೃತ್ತಿಯನ್ನ ಬಿಡದ ಅಭಿಷೇಕ್​, ವಾರದ ಹಿಂದೆ ವಿವಿಪುರಂ ಠಾಣಾ ವ್ಯಾಪ್ತಿಯಲ್ಲಿ ಟೆಂಪೋ ಕದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ.

ಜಯನಗರ, ವಿಜಯನಗರ, ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಕಳುವು

ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ್ದ ವೇಳೆ ಕಳ್ಳತನದ ಬಗ್ಗೆ ಬಾಯ್ಬಿಟ್ಟಿದ್ದ ಆರೋಪಿ ಅಭಿಷೇಕ್​, ತಾನೂ ಜಯನಗರ, ವಿಜಯನಗರ, ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಕಳುವು ಮಾಡಿದ್ದಾಗಿ ಹೇಳಿದ್ದ. 18 ಲಕ್ಷ ರೂ. ಮೌಲ್ಯದ 1 ಟೆಂಪೋ, 3 ಆಟೋ, 3 ಬೈಕ್​ಗಳನ್ನ ಕದ್ದಿದ್ದ. ಆ ವಾಹನಗಳನ್ನು ಮಾರಲು ನ್ಯಾಷನಲ್​ ಕಾಲೇಜಿನ ಮೆಟ್ರೋ ಸ್ಟೇಷನ್​ ರಸ್ತೆಯಲ್ಲಿ ನಿಲ್ಲಿಸಿದ್ದ. ಬಳಿಕ ಪೊಲೀಸರ ವಿಚಾರಣೆ ವೇಳೆ ಕಳ್ಳತನದ ಬಗ್ಗೆ ಆರೋಪಿ ಮಿಲ್ಕಿ ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿ:ಬೆಂಗಳೂರು: ಹಂದಿಗಳನ್ನೂ ಬಿಡದ ಕಳ್ಳರು; ಎರಡೇ ತಿಂಗಳಲ್ಲಿ 300 ಕ್ಕೂ ಹೆಚ್ಚು ಸಾಕು ಹಂದಿ ಕಳ್ಳತನ

ನೆಲಮಂಗಲದಲ್ಲಿ ಹಣದ ಜೊತೆ ಬೈಕ್ ಎಗರಿಸಿದ ಖದೀಮ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲದಲ್ಲಿ ಹಣದ ಜೊತೆ ಇದ್ದ ಬೈಕ್​ನ್ನೂ ಕಳ್ಳತನ ಮಾಡಿದ ಘಟನೆ ನಡೆದಿದೆ.  ನೆಲಮಂಗಲದ ಅಡೆಪೇಟೆ ಉಮೇಶ್​ ಎಂಬುವವರಿಗೆ ಸೇರಿದ ದ್ವಿಚಕ್ರ ವಾಹನ ಇದಾಗಿದ್ದು, ಡಿಕ್ಕಿಯಲ್ಲಿದ್ದ 20 ಸಾವಿರ ಹಣವನ್ನು ಕದ್ದು ದುಷ್ಕರ್ಮಿ ಪರಾರಿಯಾಗಿದ್ದಾನೆ. ಕಳ್ಳನ ಕೈಚಳಕ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:19 pm, Fri, 28 June 24

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು