AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್‌ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ, ದೂರು ದಾಖಲು

ಹೈಕೋರ್ಟ್‌ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಸ್‌ಎಟಿ) ವಿಡಿಯೋ ಕಾನ್ಫರೆನ್ಸ್‌ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಈ ಬಗ್ಗೆ ಐಟಿ ಕಾಯ್ದೆ ಸೆಕ್ಷನ್ 67, 67a ಅಡಿ ಪ್ರಕರಣ ದಾಖಲಾಗಿದೆ. ಅಶ್ಲೀಲ ವಿಡಿಯೋ ಪ್ರದರ್ಶಿಸಿದ ಕಿಡಿಗೇಡಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೈಕೋರ್ಟ್‌ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ, ದೂರು ದಾಖಲು
ನ್ಯಾಯಾಲಯ
TV9 Web
| Updated By: ಆಯೇಷಾ ಬಾನು|

Updated on: Dec 13, 2023 | 6:58 AM

Share

ಬೆಂಗಳೂರು, ಡಿ.13: ವಾರದ ಹಿಂದೆ ಕರ್ನಾಟಕ ಹೈಕೋರ್ಟ್ (Karnataka High Court)​ ವಿಡಿಯೋ ಕಾನ್ಫರೆನ್ಸ್ ಕಲಾಪದ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಘಟನೆ ಮರುಕಳಿಸಿದೆ. ಹೈಕೋರ್ಟ್‌ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಸ್‌ಎಟಿ) ವಿಡಿಯೋ ಕಾನ್ಫರೆನ್ಸ್‌ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ.

ಕೆಎಸ್‌ಎಟಿ ಕಲಾಪ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶಿಸಿ ದುಷ್ಕೃತ್ಯ ಎಸಗಲಾಗಿದೆ. ಘಟನೆ ಬಗ್ಗೆ ಕೆಎಸ್‌ಎಟಿಯ ಅಧಿಕಾರಿ ಬೆಂಗಳೂರಿನ ಸೆಂಟ್ರಲ್ ಸೆನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ ವೇಳೆ ಲಾಗಿನ್ ಆಗಿ ಆಕ್ಷೇಪಾರ್ಹ ವಿಡಿಯೋ ಪ್ರದರ್ಶನ ಮಾಡಿದ ಅನಾಮಧೇಯ ವ್ಯಕ್ಯಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಅಧಿಕಾರಿಗಳು ಆನ್‌ಲೈನ್ ಕಲಾಪ ಸ್ಥಗಿತಗೊಳಿಸಿದರು. ಈ ಬಗ್ಗೆ ಐಟಿ ಕಾಯ್ದೆ ಸೆಕ್ಷನ್ 67, 67a ಅಡಿ ಪ್ರಕರಣ ದಾಖಲಾಗಿದೆ. ಅಶ್ಲೀಲ ವಿಡಿಯೋ ಪ್ರದರ್ಶಿಸಿದ ಕಿಡಿಗೇಡಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ: ಅಪರಿಚಿತ ವ್ಯಕ್ತಿಗಳ ವಿರುದ್ಧ FIR ದಾಖಲು

ಹೈಕೋರ್ಟ್​ನಲ್ಲೂ ನಡೆದಿತ್ತು ಇದೇ ರೀತಿಯ ಘಟನೆ

ಇನ್ನು ವಾರದ ಹಿಂದಷ್ಟೇ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಲಾಗಿತ್ತು. ಆಗ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್​ ಎಂಬುವವರು ದೂರು ನೀಡಿದ್ದರು. ನ್ಯಾಯಾಲಯದ ಕಲಾಪಕ್ಕೆ‌ ಅಡ್ಡಿಪಡಿಸಿದ ಹಿನ್ನೆಲೆ ಐ.ಟಿ. ಕಾಯ್ದೆ ಸೆ. 67, 67(A) ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.

ವಿಡಿಯೋ ಕಾನ್ಫರೆನ್ಸ್ ನಿರ್ಬಂಧ

ಹೈಕೋರ್ಟ್ ಘಟನೆ ನಡೆಯುತ್ತಿದ್ದಂತೆ ಕರ್ನಾಟಕ ಹೈಕೋರ್ಟ್‌ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿನ ಕೋರ್ಟ್‌ಗಳ ವಿಡಿಯೋ ಕಾನ್ಫರೆನ್ಸ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ಅನ್ನು ನಿರ್ಬಂಧಿಸಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ