AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ಕೊಟ್ಟ ಮದ್ಯಪ್ರಿಯರು, ವ್ಯಾಪಾರದಲ್ಲಿ ಭಾರೀ ಕುಸಿತ

ಫೆಬ್ರವರಿ ಒಂದರಿಂದ ರಾಜ್ಯ ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕ ಹತ್ತರಷ್ಟು ಏರಿಕೆ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿತ್ತು. ಆದರೆ ಕಳೆದ ಹದಿನಾಲ್ಕೇ ದಿನಗಳಲ್ಲಿ ಮದ್ಯಪ್ರಿಯರು ಅಬಕಾರಿ ಇಲಾಖೆಯ ಲೆಕ್ಕಚಾರವನ್ನೆ ತಲೆಕೆಳಗಾಗುವಂತೆ ಮಾಡಿದ್ದಾರೆ. ಹದಿನಾಲ್ಕೇ ದಿನಗಳಲ್ಲಿ ಬಿಯರ್ ವ್ಯಾಪಾರ ಕುಸಿತ ಕಂಡಿದೆ.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ಕೊಟ್ಟ ಮದ್ಯಪ್ರಿಯರು, ವ್ಯಾಪಾರದಲ್ಲಿ ಭಾರೀ ಕುಸಿತ
ಮದ್ಯಪಾನ ಆರೋಗ್ಯಕ್ಕೆ ಹಾನಿಕರ
Kiran Surya
| Edited By: |

Updated on:Feb 17, 2024 | 7:06 AM

Share

ಬೆಂಗಳೂರು, ಫೆ.17: ಪದೆ ಪದೇ ಬಿಯರ್ (Beer) ಬೆಲೆ ಏರಿಕೆ ಮಾಡ್ತಿರುವ ಸರ್ಕಾರಕ್ಕೆ (Karnataka Government) ಮದ್ಯಪ್ರಿಯರು ಶಾಕ್ ಕೊಟ್ಟಿದ್ದಾರೆ. ಜನವರಿಯಲ್ಲಿ ಬಾರಿ ಮಾರಾಟವಾಗಿದ್ದ ಬಿಯರ್, ದರ ಏರಿಕೆಯಾಗ್ತಿದ್ದಂತೆ ಮಾರಾಟ ಕುಸಿತವಾಗಿದೆ. ಕಳೆದ 14 ದಿನದಲ್ಲಿ ಬಿಯರ್ ಮಾರಾಟದ ಲೆಕ್ಕಚಾರ ತಲೆಕೆಳಗಾಗಿದೆ. ಕಳೆದ ವರ್ಷ ಫೆಬ್ರವರಿ ಒಂದರಿಂದ 14ರ ವರೆಗೆ 14.35 ಲಕ್ಷ ಕೇಸ್ ಬಿಯರ್ ಸೇಲ್ ಆಗಿತ್ತು. ಆದರೆ ಈ ವರ್ಷ ಕೇವಲ 13.34 ಲಕ್ಷ ಕೇಸ್ ಬಿಯರ್ ಮಾರಾಟವಾಗಿದೆ. ದರ ಏರಿಕೆಯಿಂದ ಬರೊಬ್ಬರಿ 1 ಲಕ್ಷ ಕೇಸ್ ಮಾರಾಟ ಕುಸಿತವಾಗಿದೆ.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ನೀಡಿದ ಮದ್ಯಪ್ರಿಯರು

ಜನವರಿಯಲ್ಲಿ 14 ದಿನಕ್ಕೆ 17 ಲಕ್ಷ ಕೇಸ್ ಬಿಯರ್ ಮಾರಾಟವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಜನವರಿಯಲ್ಲಿ 15 ಪರ್ಸೆಂಟ್ ಏರಿಕೆಯಾಗಿತ್ತು. ಈ ತಿಂಗಳು ಕೂಡ ಭರ್ಜರಿ ಮಾರಾಟದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಮದ್ಯಪ್ರಿಯರು ಶಾಕ್ ನೀಡಿದ್ದಾರೆ. ಆದರೆ ಕಳೆದ 14 ದಿನದಲ್ಲಿ ಮಾರಾಟ ಕಮ್ಮಿಯಾದ್ರೂ ಆದಾಯದಲ್ಲಿ ಮಾತ್ರ ಏರಿಕೆ ಆಗಿದೆ. ಕಳೆದ ವರ್ಷ 14 ದಿನದಲ್ಲಿ 1200 ಕೋಟಿ ಆದಾಯ ಬಂದ್ರೆ. ಈ ವರ್ಷ 1400 ಕೋಟಿ ಆದಾಯ ಸಂಗ್ರವಾಗಿ, 200 ಕೋಟಿ ಅಧಿಕವಾಗಿದೆ. ದರ ಏರಿಕೆಯಿಂದ ಮಾತ್ರ ಹೆಚ್ಚುವರಿ ಆದಾಯ ಸಂಗ್ರಹವಾಗಿದೆ ಮಾರಾಟದಿಂದಲ್ಲ ಎಂದು ಬೆಂಗಳೂರು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಕರುಣಾಕರ ಹೆಗಡೆ ತಿಳಿಸಿದ್ದಾರೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದಾಗ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ವು. ಮೂರನೇ ಬಾರಿ ಅಂದರೆ ಫೆಬ್ರವರಿ 1 ರಿಂದ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 10 ರಷ್ಟು ಏರಿಕೆ ಮಾಡಿತ್ತು. ಇದರಿಂದ ಆರೇಳು ತಿಂಗಳ ಅವಧಿಯಲ್ಲಿ ಬಿಯರ್‌ ಬೆಲೆ ಸುಮಾರು ವಿವಿಧ ಬಾಟೆಲ್ ಮೇಲೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಈ ವರ್ಷ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ₹36 ಸಾವಿರ ಕೋಟಿ ಆದಾಯ ಸಂಗ್ರಹದ ಟಾರ್ಗೆಟ್ ನೀಡಿದೆ.

ಇದನ್ನೂ ಓದಿ: ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ

ಈಗಾಗಲೇ 10 ತಿಂಗಳಿಗೆ ಬರೊಬ್ಬರಿ ₹28,000 ಕೋಟಿ ಆದಾಯ ಸಂಗ್ರಹವಾಗಿದೆ. ಇನ್ನೂ ಎರಡು ತಿಂಗಳಿನಲ್ಲಿ ಟಾರ್ಗೆಟ್ ರೀಚ್ ಆಗಲು 8 ಸಾವಿರಕ್ಕೂ ಅಧಿಕ ಆದಾಯ ಸಂಗ್ರಹವಾಗಬೇಕು. ಆದರೆ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಗೆ ಮಾಡಿದ್ದಕ್ಕೆ ಮದ್ಯಪ್ರಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ. ಮತ್ತು ದರ ಏರಿಕೆ ನಂತರ ಬಿಯರ್ ಸೇವಿಸುವುದನ್ನೆ ನಿಲ್ಲಿಸಿದ್ದೀವಿ ಎಂದು ಮದ್ಯಪ್ರಿಯರೊಬ್ಬರು ತಿಳಿಸಿದರು.

ಒಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಐದು ಗ್ಯಾರೆಂಟಿಗಳಿಗಾಗಿ ಪದೇ ಪದೇ ಅಬಕಾರಿ ಸುಂಕವನ್ನು ಹೆಚ್ಚಿಸುವ ಮೂಲಕ ಹಣ ಹೊಂದಿಸಲು ಮುಂದಾಗಿದೆ. ಆದರೆ ಇದರಿಂದ ಮದ್ಯಪ್ರಿಯರು ದಿನೇ ದಿನೇ ಮದ್ಯವನ್ನು ಸೇವಿಸುವುದನ್ನು ನಿಧಾನವಾಗಿ ಕಡಿಮೆ ಮಾಡ್ತಿದ್ದಾರೆ ಅನ್ಸುತ್ತೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:03 am, Sat, 17 February 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ