AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ಕೊಟ್ಟ ಮದ್ಯಪ್ರಿಯರು, ವ್ಯಾಪಾರದಲ್ಲಿ ಭಾರೀ ಕುಸಿತ

ಫೆಬ್ರವರಿ ಒಂದರಿಂದ ರಾಜ್ಯ ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕ ಹತ್ತರಷ್ಟು ಏರಿಕೆ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿತ್ತು. ಆದರೆ ಕಳೆದ ಹದಿನಾಲ್ಕೇ ದಿನಗಳಲ್ಲಿ ಮದ್ಯಪ್ರಿಯರು ಅಬಕಾರಿ ಇಲಾಖೆಯ ಲೆಕ್ಕಚಾರವನ್ನೆ ತಲೆಕೆಳಗಾಗುವಂತೆ ಮಾಡಿದ್ದಾರೆ. ಹದಿನಾಲ್ಕೇ ದಿನಗಳಲ್ಲಿ ಬಿಯರ್ ವ್ಯಾಪಾರ ಕುಸಿತ ಕಂಡಿದೆ.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ಕೊಟ್ಟ ಮದ್ಯಪ್ರಿಯರು, ವ್ಯಾಪಾರದಲ್ಲಿ ಭಾರೀ ಕುಸಿತ
ಮದ್ಯಪಾನ ಆರೋಗ್ಯಕ್ಕೆ ಹಾನಿಕರ
ಕಿರಣ್​ ಸೂರ್ಯ
| Edited By: |

Updated on:Feb 17, 2024 | 7:06 AM

Share

ಬೆಂಗಳೂರು, ಫೆ.17: ಪದೆ ಪದೇ ಬಿಯರ್ (Beer) ಬೆಲೆ ಏರಿಕೆ ಮಾಡ್ತಿರುವ ಸರ್ಕಾರಕ್ಕೆ (Karnataka Government) ಮದ್ಯಪ್ರಿಯರು ಶಾಕ್ ಕೊಟ್ಟಿದ್ದಾರೆ. ಜನವರಿಯಲ್ಲಿ ಬಾರಿ ಮಾರಾಟವಾಗಿದ್ದ ಬಿಯರ್, ದರ ಏರಿಕೆಯಾಗ್ತಿದ್ದಂತೆ ಮಾರಾಟ ಕುಸಿತವಾಗಿದೆ. ಕಳೆದ 14 ದಿನದಲ್ಲಿ ಬಿಯರ್ ಮಾರಾಟದ ಲೆಕ್ಕಚಾರ ತಲೆಕೆಳಗಾಗಿದೆ. ಕಳೆದ ವರ್ಷ ಫೆಬ್ರವರಿ ಒಂದರಿಂದ 14ರ ವರೆಗೆ 14.35 ಲಕ್ಷ ಕೇಸ್ ಬಿಯರ್ ಸೇಲ್ ಆಗಿತ್ತು. ಆದರೆ ಈ ವರ್ಷ ಕೇವಲ 13.34 ಲಕ್ಷ ಕೇಸ್ ಬಿಯರ್ ಮಾರಾಟವಾಗಿದೆ. ದರ ಏರಿಕೆಯಿಂದ ಬರೊಬ್ಬರಿ 1 ಲಕ್ಷ ಕೇಸ್ ಮಾರಾಟ ಕುಸಿತವಾಗಿದೆ.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ನೀಡಿದ ಮದ್ಯಪ್ರಿಯರು

ಜನವರಿಯಲ್ಲಿ 14 ದಿನಕ್ಕೆ 17 ಲಕ್ಷ ಕೇಸ್ ಬಿಯರ್ ಮಾರಾಟವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಜನವರಿಯಲ್ಲಿ 15 ಪರ್ಸೆಂಟ್ ಏರಿಕೆಯಾಗಿತ್ತು. ಈ ತಿಂಗಳು ಕೂಡ ಭರ್ಜರಿ ಮಾರಾಟದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಮದ್ಯಪ್ರಿಯರು ಶಾಕ್ ನೀಡಿದ್ದಾರೆ. ಆದರೆ ಕಳೆದ 14 ದಿನದಲ್ಲಿ ಮಾರಾಟ ಕಮ್ಮಿಯಾದ್ರೂ ಆದಾಯದಲ್ಲಿ ಮಾತ್ರ ಏರಿಕೆ ಆಗಿದೆ. ಕಳೆದ ವರ್ಷ 14 ದಿನದಲ್ಲಿ 1200 ಕೋಟಿ ಆದಾಯ ಬಂದ್ರೆ. ಈ ವರ್ಷ 1400 ಕೋಟಿ ಆದಾಯ ಸಂಗ್ರವಾಗಿ, 200 ಕೋಟಿ ಅಧಿಕವಾಗಿದೆ. ದರ ಏರಿಕೆಯಿಂದ ಮಾತ್ರ ಹೆಚ್ಚುವರಿ ಆದಾಯ ಸಂಗ್ರಹವಾಗಿದೆ ಮಾರಾಟದಿಂದಲ್ಲ ಎಂದು ಬೆಂಗಳೂರು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಕರುಣಾಕರ ಹೆಗಡೆ ತಿಳಿಸಿದ್ದಾರೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದಾಗ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ವು. ಮೂರನೇ ಬಾರಿ ಅಂದರೆ ಫೆಬ್ರವರಿ 1 ರಿಂದ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 10 ರಷ್ಟು ಏರಿಕೆ ಮಾಡಿತ್ತು. ಇದರಿಂದ ಆರೇಳು ತಿಂಗಳ ಅವಧಿಯಲ್ಲಿ ಬಿಯರ್‌ ಬೆಲೆ ಸುಮಾರು ವಿವಿಧ ಬಾಟೆಲ್ ಮೇಲೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಈ ವರ್ಷ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ₹36 ಸಾವಿರ ಕೋಟಿ ಆದಾಯ ಸಂಗ್ರಹದ ಟಾರ್ಗೆಟ್ ನೀಡಿದೆ.

ಇದನ್ನೂ ಓದಿ: ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ

ಈಗಾಗಲೇ 10 ತಿಂಗಳಿಗೆ ಬರೊಬ್ಬರಿ ₹28,000 ಕೋಟಿ ಆದಾಯ ಸಂಗ್ರಹವಾಗಿದೆ. ಇನ್ನೂ ಎರಡು ತಿಂಗಳಿನಲ್ಲಿ ಟಾರ್ಗೆಟ್ ರೀಚ್ ಆಗಲು 8 ಸಾವಿರಕ್ಕೂ ಅಧಿಕ ಆದಾಯ ಸಂಗ್ರಹವಾಗಬೇಕು. ಆದರೆ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಗೆ ಮಾಡಿದ್ದಕ್ಕೆ ಮದ್ಯಪ್ರಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ. ಮತ್ತು ದರ ಏರಿಕೆ ನಂತರ ಬಿಯರ್ ಸೇವಿಸುವುದನ್ನೆ ನಿಲ್ಲಿಸಿದ್ದೀವಿ ಎಂದು ಮದ್ಯಪ್ರಿಯರೊಬ್ಬರು ತಿಳಿಸಿದರು.

ಒಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಐದು ಗ್ಯಾರೆಂಟಿಗಳಿಗಾಗಿ ಪದೇ ಪದೇ ಅಬಕಾರಿ ಸುಂಕವನ್ನು ಹೆಚ್ಚಿಸುವ ಮೂಲಕ ಹಣ ಹೊಂದಿಸಲು ಮುಂದಾಗಿದೆ. ಆದರೆ ಇದರಿಂದ ಮದ್ಯಪ್ರಿಯರು ದಿನೇ ದಿನೇ ಮದ್ಯವನ್ನು ಸೇವಿಸುವುದನ್ನು ನಿಧಾನವಾಗಿ ಕಡಿಮೆ ಮಾಡ್ತಿದ್ದಾರೆ ಅನ್ಸುತ್ತೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:03 am, Sat, 17 February 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್