AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ಕೊಟ್ಟ ಮದ್ಯಪ್ರಿಯರು, ವ್ಯಾಪಾರದಲ್ಲಿ ಭಾರೀ ಕುಸಿತ

ಫೆಬ್ರವರಿ ಒಂದರಿಂದ ರಾಜ್ಯ ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕ ಹತ್ತರಷ್ಟು ಏರಿಕೆ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿತ್ತು. ಆದರೆ ಕಳೆದ ಹದಿನಾಲ್ಕೇ ದಿನಗಳಲ್ಲಿ ಮದ್ಯಪ್ರಿಯರು ಅಬಕಾರಿ ಇಲಾಖೆಯ ಲೆಕ್ಕಚಾರವನ್ನೆ ತಲೆಕೆಳಗಾಗುವಂತೆ ಮಾಡಿದ್ದಾರೆ. ಹದಿನಾಲ್ಕೇ ದಿನಗಳಲ್ಲಿ ಬಿಯರ್ ವ್ಯಾಪಾರ ಕುಸಿತ ಕಂಡಿದೆ.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ಕೊಟ್ಟ ಮದ್ಯಪ್ರಿಯರು, ವ್ಯಾಪಾರದಲ್ಲಿ ಭಾರೀ ಕುಸಿತ
ಮದ್ಯಪಾನ ಆರೋಗ್ಯಕ್ಕೆ ಹಾನಿಕರ
Kiran Surya
| Updated By: ಆಯೇಷಾ ಬಾನು|

Updated on:Feb 17, 2024 | 7:06 AM

Share

ಬೆಂಗಳೂರು, ಫೆ.17: ಪದೆ ಪದೇ ಬಿಯರ್ (Beer) ಬೆಲೆ ಏರಿಕೆ ಮಾಡ್ತಿರುವ ಸರ್ಕಾರಕ್ಕೆ (Karnataka Government) ಮದ್ಯಪ್ರಿಯರು ಶಾಕ್ ಕೊಟ್ಟಿದ್ದಾರೆ. ಜನವರಿಯಲ್ಲಿ ಬಾರಿ ಮಾರಾಟವಾಗಿದ್ದ ಬಿಯರ್, ದರ ಏರಿಕೆಯಾಗ್ತಿದ್ದಂತೆ ಮಾರಾಟ ಕುಸಿತವಾಗಿದೆ. ಕಳೆದ 14 ದಿನದಲ್ಲಿ ಬಿಯರ್ ಮಾರಾಟದ ಲೆಕ್ಕಚಾರ ತಲೆಕೆಳಗಾಗಿದೆ. ಕಳೆದ ವರ್ಷ ಫೆಬ್ರವರಿ ಒಂದರಿಂದ 14ರ ವರೆಗೆ 14.35 ಲಕ್ಷ ಕೇಸ್ ಬಿಯರ್ ಸೇಲ್ ಆಗಿತ್ತು. ಆದರೆ ಈ ವರ್ಷ ಕೇವಲ 13.34 ಲಕ್ಷ ಕೇಸ್ ಬಿಯರ್ ಮಾರಾಟವಾಗಿದೆ. ದರ ಏರಿಕೆಯಿಂದ ಬರೊಬ್ಬರಿ 1 ಲಕ್ಷ ಕೇಸ್ ಮಾರಾಟ ಕುಸಿತವಾಗಿದೆ.

ಬಿಯರ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಗೆ ಶಾಕ್ ನೀಡಿದ ಮದ್ಯಪ್ರಿಯರು

ಜನವರಿಯಲ್ಲಿ 14 ದಿನಕ್ಕೆ 17 ಲಕ್ಷ ಕೇಸ್ ಬಿಯರ್ ಮಾರಾಟವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಜನವರಿಯಲ್ಲಿ 15 ಪರ್ಸೆಂಟ್ ಏರಿಕೆಯಾಗಿತ್ತು. ಈ ತಿಂಗಳು ಕೂಡ ಭರ್ಜರಿ ಮಾರಾಟದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಮದ್ಯಪ್ರಿಯರು ಶಾಕ್ ನೀಡಿದ್ದಾರೆ. ಆದರೆ ಕಳೆದ 14 ದಿನದಲ್ಲಿ ಮಾರಾಟ ಕಮ್ಮಿಯಾದ್ರೂ ಆದಾಯದಲ್ಲಿ ಮಾತ್ರ ಏರಿಕೆ ಆಗಿದೆ. ಕಳೆದ ವರ್ಷ 14 ದಿನದಲ್ಲಿ 1200 ಕೋಟಿ ಆದಾಯ ಬಂದ್ರೆ. ಈ ವರ್ಷ 1400 ಕೋಟಿ ಆದಾಯ ಸಂಗ್ರವಾಗಿ, 200 ಕೋಟಿ ಅಧಿಕವಾಗಿದೆ. ದರ ಏರಿಕೆಯಿಂದ ಮಾತ್ರ ಹೆಚ್ಚುವರಿ ಆದಾಯ ಸಂಗ್ರಹವಾಗಿದೆ ಮಾರಾಟದಿಂದಲ್ಲ ಎಂದು ಬೆಂಗಳೂರು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಕರುಣಾಕರ ಹೆಗಡೆ ತಿಳಿಸಿದ್ದಾರೆ.

ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದಾಗ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ವು. ಮೂರನೇ ಬಾರಿ ಅಂದರೆ ಫೆಬ್ರವರಿ 1 ರಿಂದ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 10 ರಷ್ಟು ಏರಿಕೆ ಮಾಡಿತ್ತು. ಇದರಿಂದ ಆರೇಳು ತಿಂಗಳ ಅವಧಿಯಲ್ಲಿ ಬಿಯರ್‌ ಬೆಲೆ ಸುಮಾರು ವಿವಿಧ ಬಾಟೆಲ್ ಮೇಲೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಈ ವರ್ಷ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ₹36 ಸಾವಿರ ಕೋಟಿ ಆದಾಯ ಸಂಗ್ರಹದ ಟಾರ್ಗೆಟ್ ನೀಡಿದೆ.

ಇದನ್ನೂ ಓದಿ: ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ

ಈಗಾಗಲೇ 10 ತಿಂಗಳಿಗೆ ಬರೊಬ್ಬರಿ ₹28,000 ಕೋಟಿ ಆದಾಯ ಸಂಗ್ರಹವಾಗಿದೆ. ಇನ್ನೂ ಎರಡು ತಿಂಗಳಿನಲ್ಲಿ ಟಾರ್ಗೆಟ್ ರೀಚ್ ಆಗಲು 8 ಸಾವಿರಕ್ಕೂ ಅಧಿಕ ಆದಾಯ ಸಂಗ್ರಹವಾಗಬೇಕು. ಆದರೆ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಗೆ ಮಾಡಿದ್ದಕ್ಕೆ ಮದ್ಯಪ್ರಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ. ಮತ್ತು ದರ ಏರಿಕೆ ನಂತರ ಬಿಯರ್ ಸೇವಿಸುವುದನ್ನೆ ನಿಲ್ಲಿಸಿದ್ದೀವಿ ಎಂದು ಮದ್ಯಪ್ರಿಯರೊಬ್ಬರು ತಿಳಿಸಿದರು.

ಒಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಐದು ಗ್ಯಾರೆಂಟಿಗಳಿಗಾಗಿ ಪದೇ ಪದೇ ಅಬಕಾರಿ ಸುಂಕವನ್ನು ಹೆಚ್ಚಿಸುವ ಮೂಲಕ ಹಣ ಹೊಂದಿಸಲು ಮುಂದಾಗಿದೆ. ಆದರೆ ಇದರಿಂದ ಮದ್ಯಪ್ರಿಯರು ದಿನೇ ದಿನೇ ಮದ್ಯವನ್ನು ಸೇವಿಸುವುದನ್ನು ನಿಧಾನವಾಗಿ ಕಡಿಮೆ ಮಾಡ್ತಿದ್ದಾರೆ ಅನ್ಸುತ್ತೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:03 am, Sat, 17 February 24

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ