Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Babu: ರಾಜಕೀಯ ಸೋಲಿನಿಂದ ಕಂಗೆಟ್ಟು ಸೀದಾ ಆಟೋ ಹತ್ತಿ ಹೊರಟ ಕೋಟಿ ಧಣಿ ಬಾಬು

ಕೆಜಿಎಫ್ ಬಾಬು ಸೋಲು ಎಂದು ತಿಳಿಯುತ್ತಿದ್ದಂತೆ ಮಹಾರಾಣಿ ಎಣಿಕೆ ಕೇಂದ್ರದಿಂದ ಹೊರ ಬಂದು ಆಟೋ ಹತ್ತಿ ಹೊರಟು ಹೋದ್ರು. ತಮ್ಮ ಐಷಾರಾಮಿ ಕಾರು ಬೇರೆಡೆ ಬಿಟ್ಟಿದ್ದ ಕಾರಣ ಆಟೋ ಹತ್ತಿ ಹೊರಟಿದ್ದಾರೆ.

KGF Babu: ರಾಜಕೀಯ ಸೋಲಿನಿಂದ ಕಂಗೆಟ್ಟು ಸೀದಾ ಆಟೋ ಹತ್ತಿ ಹೊರಟ ಕೋಟಿ ಧಣಿ ಬಾಬು
ಕೆಜಿಎಫ್ ಬಾಬು
Follow us
TV9 Web
| Updated By: ಆಯೇಷಾ ಬಾನು

Updated on: Dec 14, 2021 | 1:23 PM

ಬೆಂಗಳೂರು: ಬೆಂಗಳೂರು ನಗರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಸೋಲುಂಡಿದ್ದಾರೆ. ತಮ್ಮ ಸೋಲು ಸಮೀಪಿಸುತ್ತಿದ್ದಂತೆ ಕೋಟಿ ಒಡೆಯ ಕೆಜಿಎಫ್ ಬಾಬು ಆಟೋ ಹತ್ತಿ ಮನೆ ಕಡೆ ಹೊರಟ್ರು.

ಕಾಂಗ್ರೆಸ್‌ ಪಕ್ಷದಲ್ಲಿ ಶ್ರೀಮಂತ ರಾಜಕಾರಣಿಗಳು ಎಂದರೆ ನನಪಾಗುವುದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಎಂಟಿಬಿ ನಾಗರಾಜ್ ಆದ್ರೆ ಇವರನ್ನೂ ಮೀರಿಸಿದ ರಾಜಕಾರಣಿಯಾಗಿ ಕೋಲಾರದ ಶ್ರೀಮಂತ ಅಭ್ಯರ್ಥಿಯಾಗಿ ಬೆಂಗಳೂರು ನಗರ ಕ್ಷೇತ್ರದಿಂದ ಕೆಜಿಎಫ್ ಬಾಬು ಕಣಕ್ಕೆ ಇಳಿದಿದ್ದರು. ಆದ್ರೆ ಇವರ ಶ್ರೀಮಂತಿಕೆ ಚುನಾವಣೆಯಲ್ಲಿ ಕೈ ಹಿಡಿದಿಲ್ಲ. ಕೋಟಿ ಒಡೆಯನಾದರೂ ಗೆಲುವು ಮಾತ್ರ ಅವರನ್ನು ತಪ್ಪಿಕೊಳ್ಳಲಿಲ್ಲ. ವಿಪರ್ಯಾಸವೆಂದರೆ ಕೆಜಿಎಫ್ ಬಾಬು ಸೋಲು ಎಂದು ತಿಳಿಯುತ್ತಿದ್ದಂತೆ ಮಹಾರಾಣಿ ಎಣಿಕೆ ಕೇಂದ್ರದಿಂದ ಹೊರ ಬಂದು ಆಟೋ ಹತ್ತಿ ಹೊರಟು ಹೋದ್ರು. ತಮ್ಮ ಐಷಾರಾಮಿ ಕಾರು ಬೇರೆಡೆ ಬಿಟ್ಟಿದ್ದ ಕಾರಣ ಆಟೋ ಹತ್ತಿ ಹೊರಟಿದ್ದಾರೆ. ರಾಜಕೀಯಕ್ಕೆ ಬಂದಾಗಿನಿಂದ ದುಃಖದ ದಿನಗಳನ್ನೇ ಎಣಿಸುತ್ತಿರುವ ಬಾಬು ಅವರಿಗೆ ಮತ್ತೊಂದು ದುಃಖ ಆವರಿಸಿದೆ.

‘ಕೆಜಿಎಫ್‌ ಬಾಬು’ ಎಂದೇ ಪ್ರಸಿದ್ಧಿ ಪಡೆದಿರುವ ಯೂಸೂಫ್‌ ಷರೀಫ್‌ ಬರೋಬ್ಬರಿ 1,743 ಕೋಟಿ ರೂ. ಆಸ್ತಿಯ ಒಡೆಯ. ಇಲ್ಲಿಯವರೆಗೆ ರಾಜ್ಯದ ಚುನಾವಣೆಯ ಇತಿಹಾಸದಲ್ಲಿ ಹೊಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್‌ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದರು. 2019 ರಲ್ಲಿ ನಡೆದ ಉಪಚುನಾವಣೆಯ ವೇಳೆ ಎಂಟಿಬಿ 1200 ಕೋಟಿ ರೂ. ಆಸ್ತಿ ಘೋಷಿಸಿದ್ದರು. ಎಂಟಿಬಿ ಹೆಸರಿನಲ್ಲಿದ್ದ ʼಶ್ರೀಮಂತ ಅಭ್ಯರ್ಥಿʼ ದಾಖಲೆಯನ್ನು ಯೂಸುಫ್‌ ಷರೀಫ್‌ ತಮ್ಮ ಹೆಸರಿಗೆ ಬದಲಾಯಿಸಿಕೊಂಡಿದ್ದರು. ಆದರೆ ಶ್ರೀಮಂತ ವ್ಯಕ್ತಿ ಇಂದು ಸೋಲು ಅನುಭವಿಸಿ ಆಟೋ ಹತ್ತಿ ಹೊರಟಿದ್ದಾರೆ.

ಇದನ್ನೂ ಓದಿ: MLC Election Result: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಎದುರು ಸೋಲುಂಡ ಕೋಟಿಗಳ ಧನಿಕ ಕಾಂಗ್ರೆಸ್​ ಅಭ್ಯರ್ಥಿ ಕೆಜಿಎಫ್ ಬಾಬು

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ