AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Babu: ರಾಜಕೀಯ ಸೋಲಿನಿಂದ ಕಂಗೆಟ್ಟು ಸೀದಾ ಆಟೋ ಹತ್ತಿ ಹೊರಟ ಕೋಟಿ ಧಣಿ ಬಾಬು

ಕೆಜಿಎಫ್ ಬಾಬು ಸೋಲು ಎಂದು ತಿಳಿಯುತ್ತಿದ್ದಂತೆ ಮಹಾರಾಣಿ ಎಣಿಕೆ ಕೇಂದ್ರದಿಂದ ಹೊರ ಬಂದು ಆಟೋ ಹತ್ತಿ ಹೊರಟು ಹೋದ್ರು. ತಮ್ಮ ಐಷಾರಾಮಿ ಕಾರು ಬೇರೆಡೆ ಬಿಟ್ಟಿದ್ದ ಕಾರಣ ಆಟೋ ಹತ್ತಿ ಹೊರಟಿದ್ದಾರೆ.

KGF Babu: ರಾಜಕೀಯ ಸೋಲಿನಿಂದ ಕಂಗೆಟ್ಟು ಸೀದಾ ಆಟೋ ಹತ್ತಿ ಹೊರಟ ಕೋಟಿ ಧಣಿ ಬಾಬು
ಕೆಜಿಎಫ್ ಬಾಬು
TV9 Web
| Edited By: |

Updated on: Dec 14, 2021 | 1:23 PM

Share

ಬೆಂಗಳೂರು: ಬೆಂಗಳೂರು ನಗರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಸೋಲುಂಡಿದ್ದಾರೆ. ತಮ್ಮ ಸೋಲು ಸಮೀಪಿಸುತ್ತಿದ್ದಂತೆ ಕೋಟಿ ಒಡೆಯ ಕೆಜಿಎಫ್ ಬಾಬು ಆಟೋ ಹತ್ತಿ ಮನೆ ಕಡೆ ಹೊರಟ್ರು.

ಕಾಂಗ್ರೆಸ್‌ ಪಕ್ಷದಲ್ಲಿ ಶ್ರೀಮಂತ ರಾಜಕಾರಣಿಗಳು ಎಂದರೆ ನನಪಾಗುವುದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಎಂಟಿಬಿ ನಾಗರಾಜ್ ಆದ್ರೆ ಇವರನ್ನೂ ಮೀರಿಸಿದ ರಾಜಕಾರಣಿಯಾಗಿ ಕೋಲಾರದ ಶ್ರೀಮಂತ ಅಭ್ಯರ್ಥಿಯಾಗಿ ಬೆಂಗಳೂರು ನಗರ ಕ್ಷೇತ್ರದಿಂದ ಕೆಜಿಎಫ್ ಬಾಬು ಕಣಕ್ಕೆ ಇಳಿದಿದ್ದರು. ಆದ್ರೆ ಇವರ ಶ್ರೀಮಂತಿಕೆ ಚುನಾವಣೆಯಲ್ಲಿ ಕೈ ಹಿಡಿದಿಲ್ಲ. ಕೋಟಿ ಒಡೆಯನಾದರೂ ಗೆಲುವು ಮಾತ್ರ ಅವರನ್ನು ತಪ್ಪಿಕೊಳ್ಳಲಿಲ್ಲ. ವಿಪರ್ಯಾಸವೆಂದರೆ ಕೆಜಿಎಫ್ ಬಾಬು ಸೋಲು ಎಂದು ತಿಳಿಯುತ್ತಿದ್ದಂತೆ ಮಹಾರಾಣಿ ಎಣಿಕೆ ಕೇಂದ್ರದಿಂದ ಹೊರ ಬಂದು ಆಟೋ ಹತ್ತಿ ಹೊರಟು ಹೋದ್ರು. ತಮ್ಮ ಐಷಾರಾಮಿ ಕಾರು ಬೇರೆಡೆ ಬಿಟ್ಟಿದ್ದ ಕಾರಣ ಆಟೋ ಹತ್ತಿ ಹೊರಟಿದ್ದಾರೆ. ರಾಜಕೀಯಕ್ಕೆ ಬಂದಾಗಿನಿಂದ ದುಃಖದ ದಿನಗಳನ್ನೇ ಎಣಿಸುತ್ತಿರುವ ಬಾಬು ಅವರಿಗೆ ಮತ್ತೊಂದು ದುಃಖ ಆವರಿಸಿದೆ.

‘ಕೆಜಿಎಫ್‌ ಬಾಬು’ ಎಂದೇ ಪ್ರಸಿದ್ಧಿ ಪಡೆದಿರುವ ಯೂಸೂಫ್‌ ಷರೀಫ್‌ ಬರೋಬ್ಬರಿ 1,743 ಕೋಟಿ ರೂ. ಆಸ್ತಿಯ ಒಡೆಯ. ಇಲ್ಲಿಯವರೆಗೆ ರಾಜ್ಯದ ಚುನಾವಣೆಯ ಇತಿಹಾಸದಲ್ಲಿ ಹೊಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್‌ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದರು. 2019 ರಲ್ಲಿ ನಡೆದ ಉಪಚುನಾವಣೆಯ ವೇಳೆ ಎಂಟಿಬಿ 1200 ಕೋಟಿ ರೂ. ಆಸ್ತಿ ಘೋಷಿಸಿದ್ದರು. ಎಂಟಿಬಿ ಹೆಸರಿನಲ್ಲಿದ್ದ ʼಶ್ರೀಮಂತ ಅಭ್ಯರ್ಥಿʼ ದಾಖಲೆಯನ್ನು ಯೂಸುಫ್‌ ಷರೀಫ್‌ ತಮ್ಮ ಹೆಸರಿಗೆ ಬದಲಾಯಿಸಿಕೊಂಡಿದ್ದರು. ಆದರೆ ಶ್ರೀಮಂತ ವ್ಯಕ್ತಿ ಇಂದು ಸೋಲು ಅನುಭವಿಸಿ ಆಟೋ ಹತ್ತಿ ಹೊರಟಿದ್ದಾರೆ.

ಇದನ್ನೂ ಓದಿ: MLC Election Result: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಎದುರು ಸೋಲುಂಡ ಕೋಟಿಗಳ ಧನಿಕ ಕಾಂಗ್ರೆಸ್​ ಅಭ್ಯರ್ಥಿ ಕೆಜಿಎಫ್ ಬಾಬು

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್