AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಬಂದ್ಮೇಲೆ ಬಿಜೆಪಿಯವರು ಯಾರೂ ತಪ್ಪೇ ಮಾಡಿಲ್ವಾ? ಬಿಜೆಪಿ ವಿರುದ್ಧ ಜಮೀರ್​ ಅಹ್ಮದ್​ ಖಾನ್ ಕಿಡಿ

ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ದಿಢೀರ್ ರಸ್ತೆ ತಡೆದು ಪ್ರತಿಭಟನೆಗೆ ಮುಂದಾದ ಶಾಸಕ ಜಮೀರ್ ಖಾನ್​ನನ್ನು ಪೊಲೀಸರು ವಶಕ್ಕೆ ಪಡೆದರು.

ಮೋದಿ ಬಂದ್ಮೇಲೆ ಬಿಜೆಪಿಯವರು ಯಾರೂ ತಪ್ಪೇ ಮಾಡಿಲ್ವಾ? ಬಿಜೆಪಿ ವಿರುದ್ಧ ಜಮೀರ್​ ಅಹ್ಮದ್​ ಖಾನ್ ಕಿಡಿ
ಜಮೀರ್​ ಅಹ್ಮದ್​ ಖಾನ್
TV9 Web
| Edited By: |

Updated on:Jun 22, 2022 | 1:52 PM

Share

ಬೆಂಗಳೂರು: ನಮ್ಮ ನಾಯಕರನ್ನು ಟಾರ್ಗೆಟ್ (Target) ಮಾಡಿ ವಿಚಾರಣೆ ಮಾಡುತ್ತಿದ್ದಾರೆ. ಮೋದಿ ಬಂದ್ಮೇಲೆ ಬಿಜೆಪಿಯವರು ಯಾರೂ ತಪ್ಪೇ ಮಾಡಿಲ್ವಾ ಎಂದು ನಗರದಲ್ಲಿ ರಾಹುಲ್ ಗಾಂಧಿ ವಿಚಾರವಾಗಿ ಜಮೀರ್​ ಅಹ್ಮದ್​ ಖಾನ್ ಬಿಜೆಪಿ ವಿರುದ್ಧ ಕಿಡಿಕಾರಿದರು. ಬಿಜೆಪಿಯವರು ಯಾರೂ ತಪ್ಪೇ ಮಾಡಿಲ್ವಾ? ಡಿ.ಕೆ.ಶಿವಕುಮಾರ್, ಜಾರ್ಜ್, ನನ್ನ ಮೇಲೆ ED ದಾಳಿ ಆಯ್ತು. ಕಾಂಗ್ರೆಸ್​ ಪಕ್ಷದವರ ಮೇಲೆ ಮಾತ್ರ ಯಾಕೆ ಇಡಿ ದಾಳಿ? ನಾವು ಮನೆ ಕಟ್ಟೋದೇ ತಪ್ಪಾ ಎಂದು ಜಮೀರ್​ ಅಹ್ಮದ್ ಪ್ರಶ್ನಿಸಿದರು. ಮನೆ ಕಟ್ಟಿದ್ದನ್ನೂ ಬಿಜೆಪಿಯವರಿಗೆ ಸಹಿಸಿಕೊಳ್ಳೋದಕ್ಕಾಗಲ್ವಾ? ಅಷ್ಟರ ಮಟ್ಟಿಗೆ ಬಿಜೆಪಿಯವರು ನಮ್ಮನ್ನು ಟಾರ್ಗೆಟ್ ಮಾಡುತ್ತಾರೆ. ರಾಹುಲ್ ಗಾಂಧಿ ಹೆದರಿಸಬೇಕೆಂದು ಈ ರೀತಿ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Viral Video: ಚಿಕ್ನಿ ಚಮೇಲಿ ಹಾಡಿಗೆ ಕತ್ರಿನಾ ಕೈಫ್ ಅವರಂತೆ ಹೆಜ್ಜೆ ಹಾಕಿದ ವಿದೇಶಿ ವಧು

ಶಾಸಕ ಜಮೀರ್ ಖಾನ್​ ಪೊಲೀಸರ ವಶ

ಬೆಂಗಳೂರಿನಲ್ಲಿ ಕಾಂಗ್ರೆಸ್​ ಕಾರ್ಯಕರ್ತರಿಂದ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಮೈಸೂರು ರಸ್ತೆಯ ಸಿಎಆರ್​ ಮೈದಾನದ​ ಬಳಿ ಪ್ರತಿಭಟನೆ ಮಾಡಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ದಿಢೀರ್ ರಸ್ತೆ ತಡೆದು ಪ್ರತಿಭಟನೆಗೆ ಮುಂದಾದ ಶಾಸಕ ಜಮೀರ್ ಖಾನ್​ನನ್ನು ಪೊಲೀಸರು ವಶಕ್ಕೆ ಪಡೆದರು. ತ್ರಿಶಂಕು ಪರಿಸ್ಥಿತಿಯಲ್ಲಿರುವ ಚಾಮರಾಜಪೇಟೆ ಮೈದಾನಕ್ಕೆ ಜಮ್ಮೀರ್ ಅಹ್ಮದ್ ಖಾನ್ ಧೀಡೀರ್ ಅಂತಾ ಭೇಟಿ ನೀಡಿದ್ದು, ಬಳಿಕ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಜೊತೆ ನಿನ್ನೆ ಸಭೆ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈದ್ಗಾ ಮೈದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜಮೀರ್ ಅಹಮದ್ ಖಾನ್ ನಾಳೆ ಬಿಡುಗಡೆ ಮಾಡಲಿದ್ದಾರೆ.

ಬಂಧಿಸುವ ಸಾಧ್ಯತೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರೆಲ್ಲ ಆತಂಕದಲ್ಲಿರುವಂತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಯವರನ್ನು (Rahul Gandhi) ಪುನಃ ವಿಚಾರಣೆಗೆ ಕರೆದಿದೆ ಮತ್ತು ದೆಹಲಿಯಿಂದ ಲಭ್ಯವಾಗುತ್ತಿರುವ ಮೂಲಗಳ ಪ್ರಕಾರ ಅವರನ್ನು ಬಂಧಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಸೇರಿದಂತೆ ಹಲವಾರು ಕೆಪಿಸಿಸಿ ನಾಯಕರು ಎಐಸಿಸಿ ಕಚೇರಿಯಲ್ಲಿ ಜಮಾಯಿಸಿದ್ದಾರೆ. ಡಿಕೆ ಶಿವಕುಮಾರ್ (DK Shivakumar) ಅವರು ಕೂಡ ಅವಸರದಲ್ಲಿ ಎಐಸಿಸಿ ಕಚೇರಿ ಕಡೆ ಹೋಗುತ್ತಿರುವುದನ್ನು ನೋಡಿದರೆ ದೊಡ್ಡ ಸಂಗತಿಯೊಂದು ನಡೆಯಲಿದೆಯೇನೋ ಎಂಬ ಅನುಮಾನ ಮೂಡುತ್ತದೆ. ಶಿವಕುಮಾರ ಮುಖದಲ್ಲಿ ಆತಂಕ ಸ್ಪಷ್ಟವಾಗಿ ಕಾಣುತ್ತಿದೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:45 pm, Wed, 22 June 22

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ