AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಮಿಕ್ರಾನ್ ಪತ್ತೆ ಬೆನ್ನಲ್ಲೇ ಕರುನಾಡಿಗೆ ಕಾಡುತ್ತಿದೆ ಕೊರೊನಾ ಮೂರನೆ ಅಲೆ ಆತಂಕ, ನಗರದಲ್ಲಿ ಕಟ್ಟೆಚ್ಚರ

ಬೆಂಗಳೂರಿನಲ್ಲಿ ಒಮಿಕ್ರೋನ್ ಪತ್ತೆಯಾದ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ದಿಗ್ಬಂಧನ ಹಾಕಲು ತಯಾರಿ ನಡೆಯುತ್ತಿದೆ. ಒಮಿಕ್ರೋನ್ ಸೋಂಕಿತರ ಸಂಪರ್ಕಿತರ ಎಲ್ಲರ ಟ್ರಾವಲ್ ಹಿಸ್ಟರಿಯೂ ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಬೆಂಗಳೂರಿನಲ್ಲಿ ಒಮಿಕ್ರಾನ್ ಪತ್ತೆ ಬೆನ್ನಲ್ಲೇ ಕರುನಾಡಿಗೆ ಕಾಡುತ್ತಿದೆ ಕೊರೊನಾ ಮೂರನೆ ಅಲೆ ಆತಂಕ, ನಗರದಲ್ಲಿ ಕಟ್ಟೆಚ್ಚರ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Dec 03, 2021 | 8:58 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಇಬ್ಬರ ಮೇಲೆ ಒಮಿಕ್ರಾನ್ ವೈರಸ್ ದಾಳಿ ಮಾಡಿದೆ. ಇದರಿಂದಾಗಿ ಬಸವನಗುಡಿ ಹಾಗೂ ಬೊಮ್ಮನಹಳ್ಳಿ ಡೇಂಜರ್ ಜೋನ್ನಲ್ಲಿವೆ. ಸದ್ಯ ಈಗ ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಶುರುವಾಯ್ತಾ ಎಂಬ ಆತಂಕ ಉಂಟಾಗಿದೆ.

ಈ ಹಿಂದೆಯೇ ತಜ್ಞರು ಡಿಸೆಂಬರ್ ಕೊನೆ ಅಥವಾ ಜನವರಿ ಆರಂಭದಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದ್ದರು. ಕೊರೊನಾ ರೂಪಾಂತರಿಯಾದ್ರೆ ಮೂರನೇ ಅಲೆ ಎದುರಾಗುತ್ತೆ ಅಂದಿದ್ರು. ತಜ್ಞರ ಸೂಚನೆಯಂತೆ ರಾಜ್ಯಕ್ಕೆ ಒಮಿಕ್ರಾನ್ ಹೊಸ ತಳಿಯಿಂದ ಮೂರನೇ ಅಲೆಯ ಆತಂಕ ಎದುರಾಗಿದೆ. ನಿತ್ಯ ಕೇಸ್ಗಳ ಸಂಖ್ಯೆ ಸಾವಿರಕ್ಕೆ ಏರಿಕೆಯಾದ್ರೆ ಮೂರನೇ ಅಲೆ ಆರಂಭ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಸದ್ಯ ಕೊರೊನಾ ನಿಯಂತ್ರಣದಲ್ಲಿದೆ. ಕೇಸ್ ಏರಿಕೆಯತ್ತ ಸಾಗಿದ್ರೆ ಕರುನಾಡಿಗೆ ಆಪತ್ತು ಕಾದಿದೆ.

ಬೆಂಗಳೂರಿನಲ್ಲಿ ಒಮಿಕ್ರೋನ್ ಪತ್ತೆಯಾದ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ದಿಗ್ಬಂಧನ ಹಾಕಲು ತಯಾರಿ ನಡೆಯುತ್ತಿದೆ. ಒಮಿಕ್ರೋನ್ ಸೋಂಕಿತರ ಸಂಪರ್ಕಿತರ ಎಲ್ಲರ ಟ್ರಾವಲ್ ಹಿಸ್ಟರಿಯೂ ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಸಿಟಿಯಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗೆ ಹರಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸುತ್ತಿದೆ. ಇಂದು ಸಿಎಂ ನೇತೃತ್ವದಲ್ಲಿ ಸಭೆ ಬಳಿಕ ಬೆಂಗಳೂರಿಗೆ ದಿಗ್ಬಂಧನ ಸಾಧ್ಯತೆ ಇದೆ.

ಆರೋಗ್ಯ ಇಲಾಖೆ, ಕೊವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಸರ್ಕಾರಕ್ಕೆ ಟಫ್ ರೂಲ್ಸ್ ಬಗ್ಗೆ ತಜ್ಞರು ಸಲಹೆ ನೀಡುವ ಸಾಧ್ಯತೆ ಇದೆ. ಬಿಬಿಎಂಪಿಯಿಂದಲೂ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಬೆಂಗಳೂರಿನಲ್ಲಿ ಸಭೆ, ಸಮಾರಂಭಗಳಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.

ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಸೋಂಕು ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ಐವರಿಗೆ ಕೊರೊನಾ ದಾಳಿ ಮಾಡಿದೆ. 46 ವರ್ಷದ ಡಾಕ್ಟರ್ ಸಂಪರ್ಕದಲ್ಲಿದ್ದ ಮೂವರು ಪ್ರಾಥಮಿಕ ಸಂಪರ್ಕಿತರು ಹಾಗೂ ಇಬ್ಬರು ದ್ವಿತೀಯ ಸಂಪರ್ಕಿತರಿಗೆ ಕೊರೊನಾ ವಕ್ಕರಿಸಿದೆ. ಈ ಐವರ ಸ್ಯಾಂಪಲ್ಸ್ನ್ನು ಒಮಿಕ್ರಾನ್ ಟೆಸ್ಟ್ಗೆ ರವಾನೆ ಮಾಡಲಾಗಿದ್ದು, ಇಂದು ಅಥವಾ ನಾಳೆ ಐವರ ಒಮಿಕ್ರಾನ್ ಟೆಸ್ಟ್ ರಿಪೋರ್ಟ್ ಬರುವ ಸಾಧ್ಯತೆ ಇದೆ. ಸದ್ಯ ಸೋಂಕಿತರನ್ನು ಐಸೋಲೇಷನ್ನಲ್ಲಿಡಲಾಗಿದೆ. ಒಮಿಕ್ರಾನ್ ದಾಳಿಗೊಳಗಾಗಿರುವ ಇಬ್ಬರಿಗೆ ಬೌರಿಂಗ್ ಆಸ್ಪತ್ರೆಯ ಒಮಿಕ್ರಾನ್ ಸ್ಪೆಷಲ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: ಒಮಿಕ್ರಾನ್ ಡೆಲ್ಟಾಗಿಂತ ಡೇಂಜರ್ ಅಲ್ಲ, ಒಮಿಕ್ರಾನ್ ಮೊದಲು ಪತ್ತೆ ಹಚ್ಚಿದ ದಕ್ಷಿಣ ಆಫ್ರಿಕಾದ ಡಾಕ್ಟರ್ ಆ್ಯಂಜಲಿಕ್ ಹೇಳೋದೇನು?

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್