AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ

ಬೆಂಗಳೂರಿನ ಜಿಟಿ ಮಾಲ್​​​ನಲ್ಲಿ ಕಳೆದ ಸೋಮವಾರ ರೈತರೊಬ್ಬರಿಗೆ ಪಂಚೆ ಧರಿಸಿದರು ಎಂಬ ಏಕೈಕ ಕಾರಣಕ್ಕೆ ಅವಮಾನಿಸಿ ಪ್ರವೇಶ ನಿರಾಕರಿಸಲಾಗಿತ್ತು. ಸದನದಲ್ಲೂ ಈ ವಿಚಾರ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ನಗರಾಭಿವೃದ್ದಿ ಇಲಾಖೆ ಕಠಿಣ ನಿಯಮ ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ
ಪಂಚೆ, ಸೀರೆ ಧರಿಸಿದವರಿಗೆ ಪ್ರವೇಶ ನಿರಾಕರಿಸಿದ ಮಾಲ್​ಗೆ ಬೀಗ, ದಂಡದ ‘ಗ್ಯಾರಂಟಿ’!
Kiran Surya
| Edited By: |

Updated on: Jul 22, 2024 | 7:30 AM

Share

ಬೆಂಗಳೂರು, ಜುಲೈ 22: ಬೆಂಗಳೂರಿನ ಜಿಟಿ ಮಾಲ್​​ನಲ್ಲಿ ಪಂಚೆ ಹಾಕಿದ್ದ ರೈತನಿಗೆ ಕಳೆದ ಸೋಮವಾರ ಸೆಕ್ಯೂರಿಟಿ ಗಾರ್ಡ್ ಪ್ರವೇಶ ನಿರಾಕರಿಸಿದ್ದು ದೊಡ್ಡ ಸುದ್ದಿಯಾಯಿತು. ನಂತರ ಆ ವಿಚಾರ ಸದನದಲ್ಲೂ ಚರ್ಚೆ ಆಗಿತ್ತು. ಸ್ಪೀಕರ್, ಸಚಿವರು, ಶಾಸಕರು ಸೇರಿದಂತೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದರು. ನಂತರ ಟ್ಯಾಕ್ಸ್ ಕಟ್ಟಿಲ್ಲ ಎಂಬ ಕಾರಣಕ್ಕಾಗಿ ಬಿಬಿಎಂಪಿ ಸದ್ಯ ಏಳು ದಿನಗಳ ಕಾಲ ಮಾಲ್ ಕ್ಲೋಸ್ ಮಾಡಿಸಿದೆ.

ಈ ಹಿನ್ನೆಲೆಯಲ್ಲಿ, ಇನ್ನುಮುಂದೆ ಯಾವುದೇ ಮಾಲ್, ಕ್ಲಬ್ ಸೇರಿದಂತೆ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ ಮಾಡುವಂತಿಲ್ಲ. ಡ್ರೆಸ್ ಕೋಡ್ ಕಡ್ಡಾಯ ಮಾಡಬಾರದು ಎಂದು ಪ್ರತ್ಯೇಕ ಕಾನೂನು ರಚನೆ ಮಾಡಲು ನಗರಾಭಿವೃದ್ದಿ ಇಲಾಖೆ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾವುದೇ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​ಗಳಲ್ಲೂ ಸೀರೆ ಪಂಚೆ ಹಾಕಿಕೊಂಡು ಬರುವ ಜನರಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಒಂದು ವೇಳೆ ಪ್ರವೇಶ ನಿರಾಕರಿಸಿದರೆ ಆ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ಬಂದ್ ಮಾಡುವುದು ಅಥವಾ ಭಾರಿ ಮೊತ್ತದ ದಂಡ ವಿಧಿಸಲು ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಸಚಿವರ ನಡೆಗೆ ಸಾರ್ವಜನಿಕರಿಂದ ಅಭಿನಂದನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಿಂದ ಹೊಸ ಪ್ಲಾನ್!

ಒಟ್ಟಿನಲ್ಲಿ ಕೆಲ ಮಾಲ್, ರೆಸ್ಟೋರೆಂಟ್, ಪಬ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ರೂಲ್ಸ್ ಫಾಲೋ ಮಾಡಿ ರೈತರು, ಬಡವರಿಗೆ ಅವಮಾನಿಸಲಾಗುತ್ತದೆ. ನಗರಾಭಿವೃದ್ಧಿ ಇಲಾಖೆಯ ನಡೆಯಿಂದ ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣುವ ನಿಯಮ ಜಾರಿ ಆದರೆ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ