AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ

ಬೆಂಗಳೂರಿನ ಜಿಟಿ ಮಾಲ್​​​ನಲ್ಲಿ ಕಳೆದ ಸೋಮವಾರ ರೈತರೊಬ್ಬರಿಗೆ ಪಂಚೆ ಧರಿಸಿದರು ಎಂಬ ಏಕೈಕ ಕಾರಣಕ್ಕೆ ಅವಮಾನಿಸಿ ಪ್ರವೇಶ ನಿರಾಕರಿಸಲಾಗಿತ್ತು. ಸದನದಲ್ಲೂ ಈ ವಿಚಾರ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ನಗರಾಭಿವೃದ್ದಿ ಇಲಾಖೆ ಕಠಿಣ ನಿಯಮ ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ
ಪಂಚೆ, ಸೀರೆ ಧರಿಸಿದವರಿಗೆ ಪ್ರವೇಶ ನಿರಾಕರಿಸಿದ ಮಾಲ್​ಗೆ ಬೀಗ, ದಂಡದ ‘ಗ್ಯಾರಂಟಿ’!
ಕಿರಣ್​ ಸೂರ್ಯ
| Edited By: |

Updated on: Jul 22, 2024 | 7:30 AM

Share

ಬೆಂಗಳೂರು, ಜುಲೈ 22: ಬೆಂಗಳೂರಿನ ಜಿಟಿ ಮಾಲ್​​ನಲ್ಲಿ ಪಂಚೆ ಹಾಕಿದ್ದ ರೈತನಿಗೆ ಕಳೆದ ಸೋಮವಾರ ಸೆಕ್ಯೂರಿಟಿ ಗಾರ್ಡ್ ಪ್ರವೇಶ ನಿರಾಕರಿಸಿದ್ದು ದೊಡ್ಡ ಸುದ್ದಿಯಾಯಿತು. ನಂತರ ಆ ವಿಚಾರ ಸದನದಲ್ಲೂ ಚರ್ಚೆ ಆಗಿತ್ತು. ಸ್ಪೀಕರ್, ಸಚಿವರು, ಶಾಸಕರು ಸೇರಿದಂತೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದರು. ನಂತರ ಟ್ಯಾಕ್ಸ್ ಕಟ್ಟಿಲ್ಲ ಎಂಬ ಕಾರಣಕ್ಕಾಗಿ ಬಿಬಿಎಂಪಿ ಸದ್ಯ ಏಳು ದಿನಗಳ ಕಾಲ ಮಾಲ್ ಕ್ಲೋಸ್ ಮಾಡಿಸಿದೆ.

ಈ ಹಿನ್ನೆಲೆಯಲ್ಲಿ, ಇನ್ನುಮುಂದೆ ಯಾವುದೇ ಮಾಲ್, ಕ್ಲಬ್ ಸೇರಿದಂತೆ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ ಮಾಡುವಂತಿಲ್ಲ. ಡ್ರೆಸ್ ಕೋಡ್ ಕಡ್ಡಾಯ ಮಾಡಬಾರದು ಎಂದು ಪ್ರತ್ಯೇಕ ಕಾನೂನು ರಚನೆ ಮಾಡಲು ನಗರಾಭಿವೃದ್ದಿ ಇಲಾಖೆ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾವುದೇ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​ಗಳಲ್ಲೂ ಸೀರೆ ಪಂಚೆ ಹಾಕಿಕೊಂಡು ಬರುವ ಜನರಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಒಂದು ವೇಳೆ ಪ್ರವೇಶ ನಿರಾಕರಿಸಿದರೆ ಆ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ಬಂದ್ ಮಾಡುವುದು ಅಥವಾ ಭಾರಿ ಮೊತ್ತದ ದಂಡ ವಿಧಿಸಲು ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಸಚಿವರ ನಡೆಗೆ ಸಾರ್ವಜನಿಕರಿಂದ ಅಭಿನಂದನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಿಂದ ಹೊಸ ಪ್ಲಾನ್!

ಒಟ್ಟಿನಲ್ಲಿ ಕೆಲ ಮಾಲ್, ರೆಸ್ಟೋರೆಂಟ್, ಪಬ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ರೂಲ್ಸ್ ಫಾಲೋ ಮಾಡಿ ರೈತರು, ಬಡವರಿಗೆ ಅವಮಾನಿಸಲಾಗುತ್ತದೆ. ನಗರಾಭಿವೃದ್ಧಿ ಇಲಾಖೆಯ ನಡೆಯಿಂದ ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣುವ ನಿಯಮ ಜಾರಿ ಆದರೆ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ