AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ

ಬೆಂಗಳೂರಿನ ಜಿಟಿ ಮಾಲ್​​​ನಲ್ಲಿ ಕಳೆದ ಸೋಮವಾರ ರೈತರೊಬ್ಬರಿಗೆ ಪಂಚೆ ಧರಿಸಿದರು ಎಂಬ ಏಕೈಕ ಕಾರಣಕ್ಕೆ ಅವಮಾನಿಸಿ ಪ್ರವೇಶ ನಿರಾಕರಿಸಲಾಗಿತ್ತು. ಸದನದಲ್ಲೂ ಈ ವಿಚಾರ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ನಗರಾಭಿವೃದ್ದಿ ಇಲಾಖೆ ಕಠಿಣ ನಿಯಮ ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ.

ಪಂಚೆ ಪ್ರಕರಣದ ಬೆನ್ನಲ್ಲೇ ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಸಿದ್ಧತೆ
ಪಂಚೆ, ಸೀರೆ ಧರಿಸಿದವರಿಗೆ ಪ್ರವೇಶ ನಿರಾಕರಿಸಿದ ಮಾಲ್​ಗೆ ಬೀಗ, ದಂಡದ ‘ಗ್ಯಾರಂಟಿ’!
Follow us
Kiran Surya
| Updated By: Ganapathi Sharma

Updated on: Jul 22, 2024 | 7:30 AM

ಬೆಂಗಳೂರು, ಜುಲೈ 22: ಬೆಂಗಳೂರಿನ ಜಿಟಿ ಮಾಲ್​​ನಲ್ಲಿ ಪಂಚೆ ಹಾಕಿದ್ದ ರೈತನಿಗೆ ಕಳೆದ ಸೋಮವಾರ ಸೆಕ್ಯೂರಿಟಿ ಗಾರ್ಡ್ ಪ್ರವೇಶ ನಿರಾಕರಿಸಿದ್ದು ದೊಡ್ಡ ಸುದ್ದಿಯಾಯಿತು. ನಂತರ ಆ ವಿಚಾರ ಸದನದಲ್ಲೂ ಚರ್ಚೆ ಆಗಿತ್ತು. ಸ್ಪೀಕರ್, ಸಚಿವರು, ಶಾಸಕರು ಸೇರಿದಂತೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದರು. ನಂತರ ಟ್ಯಾಕ್ಸ್ ಕಟ್ಟಿಲ್ಲ ಎಂಬ ಕಾರಣಕ್ಕಾಗಿ ಬಿಬಿಎಂಪಿ ಸದ್ಯ ಏಳು ದಿನಗಳ ಕಾಲ ಮಾಲ್ ಕ್ಲೋಸ್ ಮಾಡಿಸಿದೆ.

ಈ ಹಿನ್ನೆಲೆಯಲ್ಲಿ, ಇನ್ನುಮುಂದೆ ಯಾವುದೇ ಮಾಲ್, ಕ್ಲಬ್ ಸೇರಿದಂತೆ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ ಮಾಡುವಂತಿಲ್ಲ. ಡ್ರೆಸ್ ಕೋಡ್ ಕಡ್ಡಾಯ ಮಾಡಬಾರದು ಎಂದು ಪ್ರತ್ಯೇಕ ಕಾನೂನು ರಚನೆ ಮಾಡಲು ನಗರಾಭಿವೃದ್ದಿ ಇಲಾಖೆ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾವುದೇ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​ಗಳಲ್ಲೂ ಸೀರೆ ಪಂಚೆ ಹಾಕಿಕೊಂಡು ಬರುವ ಜನರಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಒಂದು ವೇಳೆ ಪ್ರವೇಶ ನಿರಾಕರಿಸಿದರೆ ಆ ಮಾಲ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ಬಂದ್ ಮಾಡುವುದು ಅಥವಾ ಭಾರಿ ಮೊತ್ತದ ದಂಡ ವಿಧಿಸಲು ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಸಚಿವರ ನಡೆಗೆ ಸಾರ್ವಜನಿಕರಿಂದ ಅಭಿನಂದನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಿಂದ ಹೊಸ ಪ್ಲಾನ್!

ಒಟ್ಟಿನಲ್ಲಿ ಕೆಲ ಮಾಲ್, ರೆಸ್ಟೋರೆಂಟ್, ಪಬ್, ಕ್ಲಬ್ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ರೂಲ್ಸ್ ಫಾಲೋ ಮಾಡಿ ರೈತರು, ಬಡವರಿಗೆ ಅವಮಾನಿಸಲಾಗುತ್ತದೆ. ನಗರಾಭಿವೃದ್ಧಿ ಇಲಾಖೆಯ ನಡೆಯಿಂದ ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣುವ ನಿಯಮ ಜಾರಿ ಆದರೆ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Horoscope: ಶುಕ್ರನ ಸಂಚಾರದಿಂದ ಈ ರಾಶಿಯವರ ವ್ಯಾಪಾರದಲ್ಲಿ ಪ್ರಗತಿ
Daily Horoscope: ಶುಕ್ರನ ಸಂಚಾರದಿಂದ ಈ ರಾಶಿಯವರ ವ್ಯಾಪಾರದಲ್ಲಿ ಪ್ರಗತಿ
ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು