AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕಾಲೇಜು ವಿಡಿಯೋ ಪ್ರಕರಣ ಬೆನ್ನಲ್ಲೇ ಬೆಂಗಳೂರಿನ ಶಾಲೆಯೊಂದರಲ್ಲೂ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಇದೀಗ ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಅಶ್ಲೀಲ ವರ್ತನೆ ಆರೋಪ ಕೇಳಿಬಂದಿದೆ.

ಉಡುಪಿ ಕಾಲೇಜು ವಿಡಿಯೋ ಪ್ರಕರಣ ಬೆನ್ನಲ್ಲೇ ಬೆಂಗಳೂರಿನ ಶಾಲೆಯೊಂದರಲ್ಲೂ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ
ಸಾಂದರ್ಭಿಕ ಚಿತ್ರ
ವಿನಾಯಕ ಬಡಿಗೇರ್​
| Edited By: |

Updated on: Aug 02, 2023 | 3:31 PM

Share

ಬೆಂಗಳೂರು, (ಆಗಸ್ಟ್ 02): ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯ ಮಾತ್ರ ಅಲ್ಲ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೇ ವಿವಾದ ರಾಜಕೀಯ ನಾಯಕರ ನಡುವೆಯೂ ಆರೋಪ-ಪ್ರತ್ಯಾರೋಪಕ್ಕೆ ಕಾರಣಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ ತೋರಿದ ಪ್ರಕರಣ ಬೆಳಕಿಗೆ ಬಂದಿದೆ. ಬಸವವೇಶ್ವರನಗರದ ಕಾರ್ಮೆಲ್ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಂದ ಸಹ ವಿದ್ಯಾರ್ಥಿನಿಯರಿಗೆ ಅಶ್ಲೀಲ ಕಿರುಕುಳ ನೀಡುತ್ತಿರುವ ಆರೋಪ ಬಯಲಿಗೆ ಬಂದಿದ್ದು, ಇದೀಗ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಇದನ್ನೂ ಓದಿ: ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್​: ತನಿಖಾಧಿಕಾರಿ ಬದಲಾಗುತ್ತಿದ್ದಂತೆಯೇ ತನಿಖೆ ಚುರುಕು, ಆರೋಪಿಗಳ ಫ್ರೆಂಡ್ಸ್​ ಫೋನ್ ವಶಕ್ಕೆ

ನಿನ್ನೆ(ಆಗಸ್ಟ್ 02) ಎಂಟನೇ ತರಗತಿಯಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ಪ್ರದರ್ಶನ ಮಾಡಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ಈ ಅಶ್ಲೀಲ ವರ್ತನೆ ಬಗ್ಗ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಅಳಲು ತೋಡಿಕೊಂಡಿದ್ದಾರೆ. ಬಳಿಕ ವಿದ್ಯಾರ್ಥಿನಿಯೋರ್ವಳ ತಾಯಿ ಮೀರಾ ಎನ್ನುವವರು ಕೂಡಲೇ ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾರೆ. ಆದ್ರೆ, ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಮೀರಾ ಅವರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾರ್ಮೆಲ್ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳ ಅಸಭ್ಯ ವರ್ತನೆ ಬಗ್ಗೆ ದುರಿನಲ್ಲಿ ಉಲ್ಲೇಖಿಸಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ತರಗತಿಯಲ್ಲಿರುವ ಸಿಸಿ ಕ್ಯಾಮರಾ ಪರಿಶೀಲಿಸಿ ಮಕ್ಕಳ ವರ್ತನೆ ಕಂಟ್ರೋಲ್ ಮಾಡಲು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ