Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ!

Chamrajpet Idgah Maidan Dispute: ಚಾಮರಾಜಪೇಟೆ ನಾಗರಿಕ ಒಕ್ಕೂಟವು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದೆ. ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿದೆ.

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ!
ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ!
Follow us
Poornima Agali Nagaraj
| Updated By: ಸಾಧು ಶ್ರೀನಾಥ್​

Updated on: Oct 25, 2023 | 1:24 PM

ಬೆಂಗಳೂರು, ಅಕ್ಟೋಬರ್​ 25: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ (Chamrajpet Idgah Maidan Dispute) ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣಗಳಿಲ್ಲ. ಯಾವುದಾದರೊಂದು ವಿಚಾರವಾಗಿ ಅಲ್ಲಿ ಧುತ್ತನೆ ವಿವಾದ ಉದ್ಭವವಾಗುತ್ತಿದೆ. ರಾಜ್ಯದಲ್ಲಿ ರಾಜಕೀಯ ಸ್ಥಿತ್ಯಂತರಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಆಚರಣೆಗೆ ಪರ-ವಿರೋಧ ಜೋರಾಗಿ ಮೊಳಗಿದ ಬಳಿಕ ಶಾಂತವಾಯಿತು ಎಂದು (Bengaluru police) ನಿಟ್ಟುಸಿರು ಬಿಡುವ ವೇಳೆಗೆ ಇದೀಗ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ (Controversy) ಮತ್ತೆ ಮುನ್ನೆಲೆಗೆ ಬಂದಿದೆ. ಇದೀಗ ಕನ್ನಡ ರಾಜ್ಯೋತ್ಸವ (Kannada Rajyotsava 2023) ಆಚರಿಸಲು ಪರ್ಮಿಷನ್ ಕೊಡುವಂತೆ ಫೈಟ್ ಎಡತಾಕಿದೆ.

ಚಾಮರಾಜಪೇಟೆ ನಾಗರಿಕ ಒಕ್ಕೂಟವು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದೆ. ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿದೆ.

ಮೂಮದಿನ ಬುಧವಾರ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೊಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಈಗಾಗಲೇ ಮಾನವಿ ಮಾಡಲಾಗಿತ್ತು.‌ ಆದ್ರೆ ಜಿಲ್ಲಾಧಿಕಾರಿಗಳು ಈಗ ಮನವಿ ತಿರಸ್ಕರಿಸಿದ್ದಾರೆ. ಇದರಿಂದ ಕೆರಳಿದ ಚಾಮರಾಜಪೇಟೆ ನಾಗರಿಕ ಒಕ್ಕೂಟವು ನ್ಯಾಯಾಲಯದ​ ಮೊರೆ ಹೋಗಲು ಸಿದ್ಧತೆ ನಡೆಸಿದೆ.

ರಾಜ್ಯ ಸರ್ಕಾರ ಕನ್ನಡ ನಾಡಿನಲ್ಲಿ ರಾಜ್ಯೋತ್ಸವ ಅಚರಣೆಗೆ ಅಡ್ಡಪಡಿಸ್ತಿದೆ. ಕೂಡಲೇ ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಅನುಮತಿ ನೀಡಬೇಕು. ಇಲ್ಲವಾದ್ರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಚಾಮರಾಜಪೇಟೆ ಒಕ್ಕೂಟವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು