AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ: ಯಾರು ಈ ಅಬ್ಬಾಸ್ ಅಲಿ?

ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ವಾಸವಾಗಿದ್ದ ಅಲಿ ಅಬ್ಬಾಸ್ ಪೇಟಿವಾಲ ಎಂಬಾತನ ಮನೆಯ ಮೇಲೆ ನಿನ್ನೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ತೀವ್ರ ಶೋಧ ನಡೆಸಿದ್ದರು. ಇಂದು ಮತ್ತೆ ಅಬ್ಬಾಸ್ ಮನೆಯ ಮೇಲೆ ದಾಳಿ ಮಾಡಿ ಮೊಬೈಲ್​, ಲ್ಯಾಪ್​ಟಾಪ್​​​ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ: ಯಾರು ಈ  ಅಬ್ಬಾಸ್ ಅಲಿ?
ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on: Dec 10, 2023 | 10:51 AM

Share

ಬೆಂಗಳೂರು, ಡಿ.10: ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಸುಳಿವು ಸಿಗುತ್ತಿದ್ದಂತೆ ಅಲರ್ಟ್ ಆದ ಎನ್ಐಎ ಅಧಿಕಾರಿಗಳು (NIA Raid) ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಶಂಕಿತರನ್ನು ಬಂಧಿಸುತ್ತಿದ್ದಾರೆ. ನಿನ್ನೆ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಐಸಿಸ್ ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತರನ್ನ ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು. ಅದರಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಐಸಿಸ್​​ ಶಂಕಿತ ಉಗ್ರ ಅಬ್ಬಾಸ್ ಅಲಿ ಮನೆ ಮೇಲೆ ದಾಳಿ ಮಾಡಲಾಗಿತ್ತು. ಇಂದು ಮತ್ತೆ NIA ಅಧಿಕಾರಿಗಳು ಅಬ್ಬಾಸ್ ಮನೆ ಮೇಲೆ ದಾಳಿ ಮಾಡಿದ್ದಾರೆ.

ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ವಾಸವಾಗಿದ್ದ ಅಲಿ ಅಬ್ಬಾಸ್ ಪೇಟಿವಾಲ ಎಂಬಾತನ ಮನೆಯ ಮೇಲೆ ನಿನ್ನೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ತೀವ್ರ ಶೋಧ ನಡೆಸಿದ್ದರು. ಇಂದು ಮತ್ತೆ ಅಬ್ಬಾಸ್ ಮನೆಯ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿರುವ ಅಪಾರ್ಟ್​ಮೆಂಟ್​ನ ಫ್ಲ್ಯಾಟ್​ನಲ್ಲಿ NIA ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೊಬೈಲ್​, ಲ್ಯಾಪ್​ಟಾಪ್​​​ ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ದಾಳಿ ವೇಳೆ ಫ್ಲ್ಯಾಟ್​ನಲ್ಲಿ 16,42,000 ಹಣ ಪತ್ತೆಯಾಗಿತ್ತು. ನಿನ್ನೆಯೇ ಐಸಿಸ್​​ ಶಂಕಿತ ಉಗ್ರ ಅಬ್ಬಾಸ್​ನನ್ನ ವಶಕ್ಕೆ ಪಡೆಯಲಾಗಿತ್ತು. ಇಂದು ಮತ್ತೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಇನ್ನು ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಸಾಪ್ಟ್ ವೇರ್ ಉದ್ಯೋಗಿಯಾಗಿದ್ದು‌, ಐಸಿಸ್ ನೊಂದಿಗೆ ಸಂಪರ್ಕ್ ಹೊಂದಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಈತ ಟ್ಯಾನರಿ ರೋಡ್ ನಲ್ಲಿ ಉರ್ದು ಶಾಲೆ ನಡೆಸ್ತಿದ್ದ. ಹೆಂಡ್ತಿ ಡಯಾಟಿಕ್ ಹಾಸ್ಪಿಟಲ್ ನಡೆಸ್ತಿದ್ದಾರೆ. ಇವರು ಶಾಮಾಜ್ ಎಂಬುವರಿಂದ 2018ರಲ್ಲಿ 62 ಲಕ್ಷಕ್ಕೆ ಫ್ಲ್ಯಾಟ್ ಖರೀದಿ ಮಾಡಿದ್ದರು. ಹೆಂಡ್ತಿ, ಮೂವರು ಮಕ್ಕಳು ಹಾಗು ತಂದೆ ಜೊತೆ ಅಬ್ಬಾಸ್ ವಾಸವಾಗಿದ್ದ.

ಇದನ್ನೂ ಓದಿ: ಐಸಿಸ್​ ನಂಟು: ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ ಎನ್​ಐಎ

ನಿನ್ನೆ ಎನ್​ಐಎ ಅಧಿಕಾರಿಗಳು ಬೆಂಗಳೂರಿನ ಪುಲಿಕೇಶಿನಗರ ಸೇರಿದಂತೆ ಮಹಾರಾಷ್ಟ್ರದ ಬೊರಿವಿಲಿ, ಪಡ್ಗಾ, ಮೀರಾ ರಸ್ತೆ, ಪುಣೆ ಸೇರಿದಂತೆ 44 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ರು. ದಾಳಿ ಮಾಡಿದ ಅಧಿಕಾರಿ ಶಂಕಿತರ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೋಧ ಕಾರ್ಯಾಚರಣೆ ಬಳಿಕ ಶಂಕಿತರು ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ್ ಹೊಂದಿದ್ದು, ಮಹಾರಾಷ್ಟ್ರ ಸಂಘಟನೆಗೆ ಹೊಸದಾಗಿ ನೇಮಕಾತಿ ಹಾಗೂ ಭಯೋತ್ಪಾದನ ಚಟುವಟಿಕೆಗೆ ಪ್ರೇರೇಪಿಸುತ್ತಿದ್ದ 15 ಶಂಕಿತರನ್ನ ಬಂಧಿಸಲಾಗಿತ್ತು.

ದಾಳಿ ವೇಳೆ ಅಪಾರ ಪ್ರಮಾಣದ ನಗದು, ಬಂದೂಕು, ಮಾರಕಾಸ್ತ್ರಗಳು, ಸ್ಮಾರ್ಟ್ ಫೋನ್ ಗಳು, ಡಿಜಿಟಲ್ ಡಿವೈಸಸ್ ಸೀಜ್‌‌ ಮಾಡಿದ್ದು, ಆರೋಪಿಗಳು ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ಕಾರ್ಯ ನಿರ್ವಹಿಸುತ್ತಿದ್ರು. ಐಇಡಿ ತಯಾರಿ, ಶಾಂತಿ ಕದಡುವುದು ಸೇರಿದಂತೆ ಐಸಿಸ್ ಮಾದರಿಯ ಚಟುವಟಿಕೆಗಳನ್ನ ಭಾರತದಲ್ಲಿ ವಿಸ್ತರಣೆ ಮಾಡುವಲ್ಲಿ ನಿರತರಾಗಿದ್ದರು ಎಂದು ಎನ್ಐಎ ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ