AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express: ವಿಜಯವಾಡ, ಇಂದೋರ್​ಗೆ ಬೆಂಗಳೂರಿನಿಂದ ನೇರ ವಿಮಾನಯಾನ ಆರಂಭಿಸಿದ ಏರ್ ಇಂಡಿಯಾ

ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಬೆಂಗಳೂರಿನಿಂದ ಇಂದೋರ್ ಮತ್ತು ವಿಜಯವಾಡಕ್ಕೆ ದೈನಂದಿನ ವಿಮಾನ ಸೇವೆ ಆರಂಭಿಸಿದೆ. ಹೊಸ ವಿಮಾನಗಳ ಪ್ರಯಾಣದ ಸಮಯ ಮತ್ತು ಇತರ ವಿವರ ಇಲ್ಲಿದೆ.

Air India Express: ವಿಜಯವಾಡ, ಇಂದೋರ್​ಗೆ ಬೆಂಗಳೂರಿನಿಂದ ನೇರ ವಿಮಾನಯಾನ ಆರಂಭಿಸಿದ ಏರ್ ಇಂಡಿಯಾ
ಏರ್ ಇಂಡಿಯಾ ಎಕ್ಸ್​ಪ್ರೆಸ್
ಗಣಪತಿ ಶರ್ಮಾ
|

Updated on:Sep 02, 2024 | 1:06 PM

Share

ಬೆಂಗಳೂರು, ಸೆಪ್ಟೆಂಬರ್ 2: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 1 ರಿಂದ ಬೆಂಗಳೂರಿನಿಂದ ವಿಜಯವಾಡ ಮತ್ತು ಇಂದೋರ್‌ಗೆ ದೈನಂದಿನ ನೇರ ವಿಮಾನಯಾನ ಸೇವೆ ಆರಂಭಿಸಿದೆ. ಬೆಂಗಳೂರು-ಇಂದೋರ್ ವಿಮಾನವು ಬೆಂಗಳೂರಿನಿಂದ ಬೆಳಿಗ್ಗೆ 11.10 ಕ್ಕೆ ಹೊರಟು ಮಧ್ಯಾಹ್ನ 1 ಗಂಟೆಗೆ ಇಂದೋರ್ ತಲುಪುತ್ತದೆ. ಇಂದೋರ್‌ನಿಂದ ವಿಮಾನವು ಮಧ್ಯಾಹ್ನ 1.30 ಕ್ಕೆ ಹೊರಟು 3.30 ಕ್ಕೆ ಬೆಂಗಳೂರು ತಲುಪುತ್ತದೆ.

ಬೆಂಗಳೂರು-ವಿಜಯವಾಡ ಮಾರ್ಗದ ಹೊಸ ದೈನಂದಿನ ವಿಮಾನವು ಬೆಂಗಳೂರಿನಿಂದ ಸಂಜೆ 4:05 ಕ್ಕೆ ಹೊರಟು ಸಂಜೆ 5:40 ಕ್ಕೆ ವಿಜಯವಾಡ ತಲುಪಲಿದೆ. ಇದು ವಿಜಯವಾಡದಿಂದ ಸಂಜೆ 6:10ಕ್ಕೆ ಹೊರಡಲಿದ್ದು, ರಾತ್ರಿ 7:50ಕ್ಕೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಭಾನುವಾರ ಅಗರ್ತಲಾವನ್ನು ತನ್ನ 32 ನೇ ದೇಶೀಯ ತಾಣವಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇರ್ಪಡೆಗೊಳಿಸಿದೆ. ಅಗರ್ತಲಾವನ್ನು ಗುವಾಹಟಿ ಮತ್ತು ಕೋಲ್ಕತ್ತಾಗೆ ಸಂಪರ್ಕಿಸುವ ದೈನಂದಿನ ನೇರ ವಿಮಾನಗಳನ್ನು ಆರಂಭಿಸಿದೆ. ವಿಮಾನಯಾನ ಸಂಸ್ಥೆಯು ಹೈದರಾಬಾದ್ ಮತ್ತು ಗುವಾಹಟಿ ನಡುವೆಯೂ ದೈನಂದಿನ ವಿಮಾನಯಾನ ಸೇವೆ ಆರಂಭಿಸಿದೆ.

ಇದನ್ನೂ ಓದಿ: ರೈಲ್ವೆಗೂ ಬಂತು ಮೆಟ್ರೋ ಮಾದರಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ: ಬೆಂಗಳೂರಿನ 108 ಸ್ಟೇಷನ್​ಗಳಲ್ಲೂ ಲಭ್ಯ

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸದ್ಯ ಬೆಂಗಳೂರಿನಿಂದ 376 ವೀಕ್ಲಿ ವಿಮಾನಗಳನ್ನು ನಿರ್ವಹಿಸುತ್ತದೆ. ಬೆಂಗಳೂರಿನಿಂದ 24 ದೇಶೀಯ ಮತ್ತು ಒಂದು ಅಂತರರಾಷ್ಟ್ರೀಯ ತಾಣವಾದ ಅಬುಧಾಬಿಗೆ ನೇರ ವಿಮಾನಯಾನ ಸಂಪರ್ಕ ಕಲ್ಪಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Mon, 2 September 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ