AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಸಿಂಗಾಪುರಕ್ಕೆ ನಾನ್ ಸ್ಟಾಪ್ ವಿಮಾನ ಸೇವೆ ಆರಂಭ: ಇಲ್ಲಿದೆ ಟೈಮಿಂಗ್ ಮಾಹಿತಿ

ಏರ್ ಇಂಡಿಯಾ ಬೆಂಗಳೂರು ಮತ್ತು ಸಿಂಗಾಪುರ ನಡುವೆ ತಡೆರಹಿತ ವಿಮಾನ ಸೇವೆಯನ್ನು ಪ್ರಾರಂಭಿಸಿದೆ. ಏರ್ ಇಂಡಿಯಾ ಸೋಮವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರ ಸೇರಿ ವಾರದಲ್ಲಿ ನಾಲ್ಕು ದಿನ ಹಾರಾಟ ನಡೆಸಲಿದೆ. ಈ ಹೊಸ ವಿಮಾನ ಸಂಪರ್ಕವು ಎರಡು ನಗರಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯಾಪಾರವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಬೆಂಗಳೂರಿನಿಂದ ಸಿಂಗಾಪುರಕ್ಕೆ ನಾನ್ ಸ್ಟಾಪ್ ವಿಮಾನ ಸೇವೆ ಆರಂಭ: ಇಲ್ಲಿದೆ ಟೈಮಿಂಗ್ ಮಾಹಿತಿ
ಏರ್ ಇಂಡಿಯಾ
ಆಯೇಷಾ ಬಾನು
|

Updated on: Oct 24, 2023 | 7:58 AM

Share

ಬೆಂಗಳೂರು, ಅ.24: ಏರ್ ಇಂಡಿಯಾ (Air India) ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಮತ್ತು ಸಿಂಗಾಪುರ (Non-Stop Bengaluru and Singapore Flight) ನಡುವೆ ತಡೆರಹಿತ ವಿಮಾನ ಸೇವೆಯನ್ನು ಪ್ರಾರಂಭಿಸಿದೆ. ಹೊಸ ಸೇವೆಯು ಬೆಂಗಳೂರು ಹಾಗೂ ಸಿಂಗಾಪುರ ನಡುವೆ ನೇರ ಸಂಪರ್ಗ ಹೊಂದಿದೆ. ಇದರಿಂದ ಅಂತರವೂ ಕಡಿಮೆಯಾಗಿದೆ.

ಏರ್ ಇಂಡಿಯಾದ AI392 ಎಂಬ ಹೊಸ ವಿಮಾನವು ರಾತ್ರಿ 10.30ಕ್ಕೆ ಬೆಂಗಳೂರಿನಿಂದ ಹಾರಾಟ ಆರಂಭಿಸಲಿದೆ. ಮರುದಿನ ಬೆಳಗ್ಗೆ 5.30ಕ್ಕೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ. ರಿಟರ್ನ್ ಫ್ಲೈಟ್ AI393 ವಿಮಾನ ಸಿಂಗಾಪುರದಿಂದ ಬೆಳಿಗ್ಗೆ 6. 40 ಕ್ಕೆ ಹೊರಟು ರಾತ್ರಿ 8.35 ಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದೆ.

ಬೆಂಗಳೂರು ಟು ಸಿಂಗಾಪುರ ವಿಮಾನದಲ್ಲಿ 170 ಎಕಾನಮಿ ಸೀಟು, 12 ಐಷಾರಾಮಿ ಬಿಸಿನೆಸ್ ಕ್ಲಾಸ್ ಸೀಟುಗಳು ಲಭ್ಯವಿದೆ. ಏರ್ ಇಂಡಿಯಾ ಸೋಮವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರ ಸೇರಿ ವಾರದಲ್ಲಿ ನಾಲ್ಕು ದಿನ ಹಾರಾಟ ನಡೆಸಲಿದೆ. ಶೀಘ್ರದಲ್ಲೇ ಪ್ರತಿ ದಿನ ಏರ್ ಇಂಡಿಯಾ ಬೆಂಗಳೂರಿನಿಂದ ಸಿಂಗಾಪುರಕ್ಕೆ ಸೇವೆ ನೀಡಲಿದೆ. ಈ ಹೊಸ ವಿಮಾನ ಸಂಪರ್ಕವು ಎರಡು ನಗರಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯಾಪಾರವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇತ್ತೀಚೆಗೆ ಯುವಕರಿಗೆ ಹೆಚ್ಚು ಹೃದಯಾಘಾತ; ಇದಕ್ಕೆ ಕಾರಣ ಏನು? ವೈದ್ಯರು ಹೇಳಿದ್ದಿಷ್ಟು

ಏರ್ ಇಂಡಿಯಾ ಮುಂಬೈನಿಂದ ಸಿಂಗಾಪುರಕ್ಕೆ ವಾರಕ್ಕೆ ಏಳು ವಿಮಾನಗಳಿಂದ ವಾರಕ್ಕೆ 13 ವಿಮಾನಗಳಿಗೆ ಹೆಚ್ಚಿಸುವುದಾಗಿ ಘೋಷಿಸಿತು. ಭಾನುವಾರದಿಂದ ಅದು ಪ್ರಾರಂಭವಾಗಲಿದೆ. ಏರ್ ಇಂಡಿಯಾ ಪ್ರಸ್ತುತ ದೆಹಲಿಯಿಂದ (14 ವಿಮಾನಗಳು), ಮುಂಬೈ (13 ವಿಮಾನಗಳು), ಚೆನ್ನೈ (7 ವಿಮಾನಗಳು) ಮತ್ತು ಬೆಂಗಳೂರು (4 ವಿಮಾನಗಳು) ಮೆರ್ಲಿಯನ್ ಸಿಟಿಯನ್ನು ಸಂಪರ್ಕಿಸುವ ಮೂಲಕ ಸಿಂಗಾಪುರಕ್ಕೆ ವಾರಕ್ಕೆ ಒಟ್ಟು 38 ತಡೆರಹಿತ ವಿಮಾನಗಳು ಹಾರಾಡುತ್ತಿವೆ.

ಏರ್ ಇಂಡಿಯಾದ ವೆಬ್‌ಸೈಟ್: (www.airindia.com), ಮೊಬೈಲ್ ಅಪ್ಲಿಕೇಶನ್ ಮತ್ತು ಟ್ರಾವೆಲ್ ಏಜೆಂಟ್‌ಗಳ ಮೂಲಕ (ಆನ್‌ಲೈನ್ ಟ್ರಾವೆಲ್ ಏಜೆಂಟ್‌ಗಳನ್ನು ಒಳಗೊಂಡಂತೆ) ಸೇರಿದಂತೆ ಎಲ್ಲಾ ರೀತಿಯಲ್ಲೂ ವಿಮಾನಗಳ ಬುಕಿಂಗ್‌ ಮಾಡಬಹುದು ಎಂದು ಏರ್‌ಲೈನ್ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ