AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಸಿಂಗಾಪುರಕ್ಕೆ ನಾನ್ ಸ್ಟಾಪ್ ವಿಮಾನ ಸೇವೆ ಆರಂಭ: ಇಲ್ಲಿದೆ ಟೈಮಿಂಗ್ ಮಾಹಿತಿ

ಏರ್ ಇಂಡಿಯಾ ಬೆಂಗಳೂರು ಮತ್ತು ಸಿಂಗಾಪುರ ನಡುವೆ ತಡೆರಹಿತ ವಿಮಾನ ಸೇವೆಯನ್ನು ಪ್ರಾರಂಭಿಸಿದೆ. ಏರ್ ಇಂಡಿಯಾ ಸೋಮವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರ ಸೇರಿ ವಾರದಲ್ಲಿ ನಾಲ್ಕು ದಿನ ಹಾರಾಟ ನಡೆಸಲಿದೆ. ಈ ಹೊಸ ವಿಮಾನ ಸಂಪರ್ಕವು ಎರಡು ನಗರಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯಾಪಾರವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಬೆಂಗಳೂರಿನಿಂದ ಸಿಂಗಾಪುರಕ್ಕೆ ನಾನ್ ಸ್ಟಾಪ್ ವಿಮಾನ ಸೇವೆ ಆರಂಭ: ಇಲ್ಲಿದೆ ಟೈಮಿಂಗ್ ಮಾಹಿತಿ
ಏರ್ ಇಂಡಿಯಾ
Follow us
ಆಯೇಷಾ ಬಾನು
|

Updated on: Oct 24, 2023 | 7:58 AM

ಬೆಂಗಳೂರು, ಅ.24: ಏರ್ ಇಂಡಿಯಾ (Air India) ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಮತ್ತು ಸಿಂಗಾಪುರ (Non-Stop Bengaluru and Singapore Flight) ನಡುವೆ ತಡೆರಹಿತ ವಿಮಾನ ಸೇವೆಯನ್ನು ಪ್ರಾರಂಭಿಸಿದೆ. ಹೊಸ ಸೇವೆಯು ಬೆಂಗಳೂರು ಹಾಗೂ ಸಿಂಗಾಪುರ ನಡುವೆ ನೇರ ಸಂಪರ್ಗ ಹೊಂದಿದೆ. ಇದರಿಂದ ಅಂತರವೂ ಕಡಿಮೆಯಾಗಿದೆ.

ಏರ್ ಇಂಡಿಯಾದ AI392 ಎಂಬ ಹೊಸ ವಿಮಾನವು ರಾತ್ರಿ 10.30ಕ್ಕೆ ಬೆಂಗಳೂರಿನಿಂದ ಹಾರಾಟ ಆರಂಭಿಸಲಿದೆ. ಮರುದಿನ ಬೆಳಗ್ಗೆ 5.30ಕ್ಕೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ. ರಿಟರ್ನ್ ಫ್ಲೈಟ್ AI393 ವಿಮಾನ ಸಿಂಗಾಪುರದಿಂದ ಬೆಳಿಗ್ಗೆ 6. 40 ಕ್ಕೆ ಹೊರಟು ರಾತ್ರಿ 8.35 ಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದೆ.

ಬೆಂಗಳೂರು ಟು ಸಿಂಗಾಪುರ ವಿಮಾನದಲ್ಲಿ 170 ಎಕಾನಮಿ ಸೀಟು, 12 ಐಷಾರಾಮಿ ಬಿಸಿನೆಸ್ ಕ್ಲಾಸ್ ಸೀಟುಗಳು ಲಭ್ಯವಿದೆ. ಏರ್ ಇಂಡಿಯಾ ಸೋಮವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರ ಸೇರಿ ವಾರದಲ್ಲಿ ನಾಲ್ಕು ದಿನ ಹಾರಾಟ ನಡೆಸಲಿದೆ. ಶೀಘ್ರದಲ್ಲೇ ಪ್ರತಿ ದಿನ ಏರ್ ಇಂಡಿಯಾ ಬೆಂಗಳೂರಿನಿಂದ ಸಿಂಗಾಪುರಕ್ಕೆ ಸೇವೆ ನೀಡಲಿದೆ. ಈ ಹೊಸ ವಿಮಾನ ಸಂಪರ್ಕವು ಎರಡು ನಗರಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯಾಪಾರವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇತ್ತೀಚೆಗೆ ಯುವಕರಿಗೆ ಹೆಚ್ಚು ಹೃದಯಾಘಾತ; ಇದಕ್ಕೆ ಕಾರಣ ಏನು? ವೈದ್ಯರು ಹೇಳಿದ್ದಿಷ್ಟು

ಏರ್ ಇಂಡಿಯಾ ಮುಂಬೈನಿಂದ ಸಿಂಗಾಪುರಕ್ಕೆ ವಾರಕ್ಕೆ ಏಳು ವಿಮಾನಗಳಿಂದ ವಾರಕ್ಕೆ 13 ವಿಮಾನಗಳಿಗೆ ಹೆಚ್ಚಿಸುವುದಾಗಿ ಘೋಷಿಸಿತು. ಭಾನುವಾರದಿಂದ ಅದು ಪ್ರಾರಂಭವಾಗಲಿದೆ. ಏರ್ ಇಂಡಿಯಾ ಪ್ರಸ್ತುತ ದೆಹಲಿಯಿಂದ (14 ವಿಮಾನಗಳು), ಮುಂಬೈ (13 ವಿಮಾನಗಳು), ಚೆನ್ನೈ (7 ವಿಮಾನಗಳು) ಮತ್ತು ಬೆಂಗಳೂರು (4 ವಿಮಾನಗಳು) ಮೆರ್ಲಿಯನ್ ಸಿಟಿಯನ್ನು ಸಂಪರ್ಕಿಸುವ ಮೂಲಕ ಸಿಂಗಾಪುರಕ್ಕೆ ವಾರಕ್ಕೆ ಒಟ್ಟು 38 ತಡೆರಹಿತ ವಿಮಾನಗಳು ಹಾರಾಡುತ್ತಿವೆ.

ಏರ್ ಇಂಡಿಯಾದ ವೆಬ್‌ಸೈಟ್: (www.airindia.com), ಮೊಬೈಲ್ ಅಪ್ಲಿಕೇಶನ್ ಮತ್ತು ಟ್ರಾವೆಲ್ ಏಜೆಂಟ್‌ಗಳ ಮೂಲಕ (ಆನ್‌ಲೈನ್ ಟ್ರಾವೆಲ್ ಏಜೆಂಟ್‌ಗಳನ್ನು ಒಳಗೊಂಡಂತೆ) ಸೇರಿದಂತೆ ಎಲ್ಲಾ ರೀತಿಯಲ್ಲೂ ವಿಮಾನಗಳ ಬುಕಿಂಗ್‌ ಮಾಡಬಹುದು ಎಂದು ಏರ್‌ಲೈನ್ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?