AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ
ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ ಆವರಿಸಿದೆ
TV9 Web
| Edited By: |

Updated on:Mar 29, 2022 | 4:02 PM

Share

ಆನೇಕಲ್: ಬೆಂಗಳೂರು ಹೊರವಲಯದ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ (Industrial Area) ರಾಸಾಯನಿಕ ತಾಜ್ಯ ಹೊತ್ತಿ ಉರಿದ ಪರಿಣಾಮ ಬೊಮ್ಮಂಡಹಳ್ಳಿ ಸೇರಿದಂತೆ ಜಿಗಣಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ದಟ್ಟ ಹೊಗೆ ಆವರಿಸಿದೆ. ಕೈಗಾರಿಕಾ ಪ್ರದೇಶದ ಖಾಲಿ ಸ್ಥಳದಲ್ಲಿ ಹೋಟೆಲ್ (Hotel) ಸೇರಿದಂತೆ ಕಾರ್ಖಾನೆಗಳ ತ್ಯಾಜ್ಯ ಬಿಸಾಡಿರುವ ಪರಿಣಾಮ ಬಿಸಿಲಿಗೆ ಬೆಂಕಿ ಹೊತ್ತಿ ಅಲ್ಲಲ್ಲಿ ಬೆಂಕಿ ಅವಘಡ ಕೂಡ ನಡೆಯುತ್ತಿವೆ. ಬೊಮ್ಮಂಡಹಳ್ಳಿಯ ಸಮೀಪ ಹೊತ್ತಿ ಉರಿಯುತ್ತಿರುವ ತ್ಯಾಜ್ಯದ ಪರಿಣಾಮ ಇಡೀ ಪ್ರದೇಶದಲ್ಲಿ ಉಸಿರುಗಟ್ಟುವ ವಾತವರಣ ನಿರ್ಮಾಣವಾಗಿದೆ.

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ. ಜಿಗಣಿ ವ್ಯಾಪ್ತಿಯ ಅನೇಕ ಕಾರ್ಖಾನೆ ಹಾಗೂ ಹೋಟೆಲ್ ಸಿಬ್ಬಂದಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದರೂ, ಜಿಗಣಿ ಪುರಸಭೆ ಅಧಿಕಾರಿಗಳು ಕಣ್ಮುಚ್ಚಿ ಕೂತಿದ್ದಾರೆ. ಕಸ ಹಾಕುತ್ತಿರುವವ ವಿರುದ್ಧ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳದ ಹಿನ್ನೆಲೆ ಭ್ರಷ್ಟಾಚಾರದ ಆರೋಪವೂ ಕೇಳಿ ಬಂದಿದೆ.

ದೆಹಲಿಯಂತಾಗುತ್ತಾ ಪರಿಸ್ಥಿತಿ?: ಬೆಂಗಳೂರು ನಗರದಲ್ಲಿ ಸದ್ಯ ಮಿತಿಮೀರಿದ ಟ್ರಾಫಿಕ್ ಕಾರಣದಿಂದ ಆಕ್ಸಿಜನ್ ಪ್ರಮಾಣ ಇಳಿತ ಕಂಡಿರುವುದು ಎಲ್ಲಾರಿಗೂ ತಿಳಿದಿರುವ ವಿಚಾರ. ಹೀಗಾಗಿ ಉದ್ಯಾನವನ ಹಾಗೂ ಪಾರ್ಕ್​ಗಳ ಅಭಿವೃದ್ಧಿಗೆ ಸರಕಾರ ಕೋಟ್ಯಾಂತರ ಹಣ ವ್ಯಯಿಸುತ್ತಿದೆ. ಬನ್ನೇರುಘಟ್ಟ ಉದ್ಯಾನವನ ಹಾಗೂ ನ್ಯಾಶನಲ್ ಪಾರ್ಕ್ ಬೆಂಗಳೂರು ನಗರಕ್ಕೆ ಶ್ವಾಸಕೋಶದ ರೀತಿ ಇದ್ದಂತೆ ಅಂತ ತಜ್ಞರು ಹಲವು ಬಾರಿ ಪ್ರಸ್ತಾಪ ಮಾಡಿದ್ದಾರೆ. ಹೀಗಿದ್ದಾಗ ಜಿಗಣಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಆಕ್ಸಿಜನ್ ಪ್ರಮಾಣ ಕುಗ್ಗಿಸುವ ಕೆಲಸ ಮಾಡುತ್ತಿವೆ ಅನ್ನೋದು ಪ್ರಮುಖ ಅಂಶ. ಅದಕ್ಕೆ ತಾಜ್ಯ ವಿಲೇವಾರಿ ಆಗದೇ ಇರುವ ಕಾರಣ ಬೆಂಕಿ ಹೊತ್ತಿ ಉರಿಯುವ ಘಟನೆ ನಡೆಯುತ್ತಿವೆ.

ಇದನ್ನೂ ಓದಿ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; ಬೆಂಗಳೂರಿನ ಎನ್ಐಎ ಅಧಿಕೃತ ಕಚೇರಿಯಲ್ಲಿ ಕಾರ್ಯಾರಂಭ

ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ 2ನೇ ದಿನಕ್ಕೆ; ರೈತರು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಆಗ್ರಹ

Published On - 4:01 pm, Tue, 29 March 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ