AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ
ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ ಆವರಿಸಿದೆ
TV9 Web
| Edited By: sandhya thejappa|

Updated on:Mar 29, 2022 | 4:02 PM

Share

ಆನೇಕಲ್: ಬೆಂಗಳೂರು ಹೊರವಲಯದ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ (Industrial Area) ರಾಸಾಯನಿಕ ತಾಜ್ಯ ಹೊತ್ತಿ ಉರಿದ ಪರಿಣಾಮ ಬೊಮ್ಮಂಡಹಳ್ಳಿ ಸೇರಿದಂತೆ ಜಿಗಣಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ದಟ್ಟ ಹೊಗೆ ಆವರಿಸಿದೆ. ಕೈಗಾರಿಕಾ ಪ್ರದೇಶದ ಖಾಲಿ ಸ್ಥಳದಲ್ಲಿ ಹೋಟೆಲ್ (Hotel) ಸೇರಿದಂತೆ ಕಾರ್ಖಾನೆಗಳ ತ್ಯಾಜ್ಯ ಬಿಸಾಡಿರುವ ಪರಿಣಾಮ ಬಿಸಿಲಿಗೆ ಬೆಂಕಿ ಹೊತ್ತಿ ಅಲ್ಲಲ್ಲಿ ಬೆಂಕಿ ಅವಘಡ ಕೂಡ ನಡೆಯುತ್ತಿವೆ. ಬೊಮ್ಮಂಡಹಳ್ಳಿಯ ಸಮೀಪ ಹೊತ್ತಿ ಉರಿಯುತ್ತಿರುವ ತ್ಯಾಜ್ಯದ ಪರಿಣಾಮ ಇಡೀ ಪ್ರದೇಶದಲ್ಲಿ ಉಸಿರುಗಟ್ಟುವ ವಾತವರಣ ನಿರ್ಮಾಣವಾಗಿದೆ.

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ. ಜಿಗಣಿ ವ್ಯಾಪ್ತಿಯ ಅನೇಕ ಕಾರ್ಖಾನೆ ಹಾಗೂ ಹೋಟೆಲ್ ಸಿಬ್ಬಂದಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದರೂ, ಜಿಗಣಿ ಪುರಸಭೆ ಅಧಿಕಾರಿಗಳು ಕಣ್ಮುಚ್ಚಿ ಕೂತಿದ್ದಾರೆ. ಕಸ ಹಾಕುತ್ತಿರುವವ ವಿರುದ್ಧ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳದ ಹಿನ್ನೆಲೆ ಭ್ರಷ್ಟಾಚಾರದ ಆರೋಪವೂ ಕೇಳಿ ಬಂದಿದೆ.

ದೆಹಲಿಯಂತಾಗುತ್ತಾ ಪರಿಸ್ಥಿತಿ?: ಬೆಂಗಳೂರು ನಗರದಲ್ಲಿ ಸದ್ಯ ಮಿತಿಮೀರಿದ ಟ್ರಾಫಿಕ್ ಕಾರಣದಿಂದ ಆಕ್ಸಿಜನ್ ಪ್ರಮಾಣ ಇಳಿತ ಕಂಡಿರುವುದು ಎಲ್ಲಾರಿಗೂ ತಿಳಿದಿರುವ ವಿಚಾರ. ಹೀಗಾಗಿ ಉದ್ಯಾನವನ ಹಾಗೂ ಪಾರ್ಕ್​ಗಳ ಅಭಿವೃದ್ಧಿಗೆ ಸರಕಾರ ಕೋಟ್ಯಾಂತರ ಹಣ ವ್ಯಯಿಸುತ್ತಿದೆ. ಬನ್ನೇರುಘಟ್ಟ ಉದ್ಯಾನವನ ಹಾಗೂ ನ್ಯಾಶನಲ್ ಪಾರ್ಕ್ ಬೆಂಗಳೂರು ನಗರಕ್ಕೆ ಶ್ವಾಸಕೋಶದ ರೀತಿ ಇದ್ದಂತೆ ಅಂತ ತಜ್ಞರು ಹಲವು ಬಾರಿ ಪ್ರಸ್ತಾಪ ಮಾಡಿದ್ದಾರೆ. ಹೀಗಿದ್ದಾಗ ಜಿಗಣಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಆಕ್ಸಿಜನ್ ಪ್ರಮಾಣ ಕುಗ್ಗಿಸುವ ಕೆಲಸ ಮಾಡುತ್ತಿವೆ ಅನ್ನೋದು ಪ್ರಮುಖ ಅಂಶ. ಅದಕ್ಕೆ ತಾಜ್ಯ ವಿಲೇವಾರಿ ಆಗದೇ ಇರುವ ಕಾರಣ ಬೆಂಕಿ ಹೊತ್ತಿ ಉರಿಯುವ ಘಟನೆ ನಡೆಯುತ್ತಿವೆ.

ಇದನ್ನೂ ಓದಿ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; ಬೆಂಗಳೂರಿನ ಎನ್ಐಎ ಅಧಿಕೃತ ಕಚೇರಿಯಲ್ಲಿ ಕಾರ್ಯಾರಂಭ

ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ 2ನೇ ದಿನಕ್ಕೆ; ರೈತರು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಆಗ್ರಹ

Published On - 4:01 pm, Tue, 29 March 22

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ