AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ
ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ ಆವರಿಸಿದೆ
TV9 Web
| Edited By: |

Updated on:Mar 29, 2022 | 4:02 PM

Share

ಆನೇಕಲ್: ಬೆಂಗಳೂರು ಹೊರವಲಯದ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ (Industrial Area) ರಾಸಾಯನಿಕ ತಾಜ್ಯ ಹೊತ್ತಿ ಉರಿದ ಪರಿಣಾಮ ಬೊಮ್ಮಂಡಹಳ್ಳಿ ಸೇರಿದಂತೆ ಜಿಗಣಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ದಟ್ಟ ಹೊಗೆ ಆವರಿಸಿದೆ. ಕೈಗಾರಿಕಾ ಪ್ರದೇಶದ ಖಾಲಿ ಸ್ಥಳದಲ್ಲಿ ಹೋಟೆಲ್ (Hotel) ಸೇರಿದಂತೆ ಕಾರ್ಖಾನೆಗಳ ತ್ಯಾಜ್ಯ ಬಿಸಾಡಿರುವ ಪರಿಣಾಮ ಬಿಸಿಲಿಗೆ ಬೆಂಕಿ ಹೊತ್ತಿ ಅಲ್ಲಲ್ಲಿ ಬೆಂಕಿ ಅವಘಡ ಕೂಡ ನಡೆಯುತ್ತಿವೆ. ಬೊಮ್ಮಂಡಹಳ್ಳಿಯ ಸಮೀಪ ಹೊತ್ತಿ ಉರಿಯುತ್ತಿರುವ ತ್ಯಾಜ್ಯದ ಪರಿಣಾಮ ಇಡೀ ಪ್ರದೇಶದಲ್ಲಿ ಉಸಿರುಗಟ್ಟುವ ವಾತವರಣ ನಿರ್ಮಾಣವಾಗಿದೆ.

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ. ಜಿಗಣಿ ವ್ಯಾಪ್ತಿಯ ಅನೇಕ ಕಾರ್ಖಾನೆ ಹಾಗೂ ಹೋಟೆಲ್ ಸಿಬ್ಬಂದಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದರೂ, ಜಿಗಣಿ ಪುರಸಭೆ ಅಧಿಕಾರಿಗಳು ಕಣ್ಮುಚ್ಚಿ ಕೂತಿದ್ದಾರೆ. ಕಸ ಹಾಕುತ್ತಿರುವವ ವಿರುದ್ಧ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳದ ಹಿನ್ನೆಲೆ ಭ್ರಷ್ಟಾಚಾರದ ಆರೋಪವೂ ಕೇಳಿ ಬಂದಿದೆ.

ದೆಹಲಿಯಂತಾಗುತ್ತಾ ಪರಿಸ್ಥಿತಿ?: ಬೆಂಗಳೂರು ನಗರದಲ್ಲಿ ಸದ್ಯ ಮಿತಿಮೀರಿದ ಟ್ರಾಫಿಕ್ ಕಾರಣದಿಂದ ಆಕ್ಸಿಜನ್ ಪ್ರಮಾಣ ಇಳಿತ ಕಂಡಿರುವುದು ಎಲ್ಲಾರಿಗೂ ತಿಳಿದಿರುವ ವಿಚಾರ. ಹೀಗಾಗಿ ಉದ್ಯಾನವನ ಹಾಗೂ ಪಾರ್ಕ್​ಗಳ ಅಭಿವೃದ್ಧಿಗೆ ಸರಕಾರ ಕೋಟ್ಯಾಂತರ ಹಣ ವ್ಯಯಿಸುತ್ತಿದೆ. ಬನ್ನೇರುಘಟ್ಟ ಉದ್ಯಾನವನ ಹಾಗೂ ನ್ಯಾಶನಲ್ ಪಾರ್ಕ್ ಬೆಂಗಳೂರು ನಗರಕ್ಕೆ ಶ್ವಾಸಕೋಶದ ರೀತಿ ಇದ್ದಂತೆ ಅಂತ ತಜ್ಞರು ಹಲವು ಬಾರಿ ಪ್ರಸ್ತಾಪ ಮಾಡಿದ್ದಾರೆ. ಹೀಗಿದ್ದಾಗ ಜಿಗಣಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಆಕ್ಸಿಜನ್ ಪ್ರಮಾಣ ಕುಗ್ಗಿಸುವ ಕೆಲಸ ಮಾಡುತ್ತಿವೆ ಅನ್ನೋದು ಪ್ರಮುಖ ಅಂಶ. ಅದಕ್ಕೆ ತಾಜ್ಯ ವಿಲೇವಾರಿ ಆಗದೇ ಇರುವ ಕಾರಣ ಬೆಂಕಿ ಹೊತ್ತಿ ಉರಿಯುವ ಘಟನೆ ನಡೆಯುತ್ತಿವೆ.

ಇದನ್ನೂ ಓದಿ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; ಬೆಂಗಳೂರಿನ ಎನ್ಐಎ ಅಧಿಕೃತ ಕಚೇರಿಯಲ್ಲಿ ಕಾರ್ಯಾರಂಭ

ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ 2ನೇ ದಿನಕ್ಕೆ; ರೈತರು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಆಗ್ರಹ

Published On - 4:01 pm, Tue, 29 March 22

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ