AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ.

ಬೆಂಗಳೂರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಾದ ವಾಯುಮಾಲಿನ್ಯ! ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ
ಬೇಸಿಗೆಯಲ್ಲಿಯೂ ಮಂಜು ಕವಿದಂತಿರುವ ದಟ್ಟ ಹೊಗೆ ಆವರಿಸಿದೆ
TV9 Web
| Edited By: sandhya thejappa|

Updated on:Mar 29, 2022 | 4:02 PM

Share

ಆನೇಕಲ್: ಬೆಂಗಳೂರು ಹೊರವಲಯದ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ (Industrial Area) ರಾಸಾಯನಿಕ ತಾಜ್ಯ ಹೊತ್ತಿ ಉರಿದ ಪರಿಣಾಮ ಬೊಮ್ಮಂಡಹಳ್ಳಿ ಸೇರಿದಂತೆ ಜಿಗಣಿ ಕೈಗಾರಿಕಾ ಪ್ರದೇಶದ ಸುತ್ತಾಮುತ್ತಾ ದಟ್ಟ ಹೊಗೆ ಆವರಿಸಿದೆ. ಕೈಗಾರಿಕಾ ಪ್ರದೇಶದ ಖಾಲಿ ಸ್ಥಳದಲ್ಲಿ ಹೋಟೆಲ್ (Hotel) ಸೇರಿದಂತೆ ಕಾರ್ಖಾನೆಗಳ ತ್ಯಾಜ್ಯ ಬಿಸಾಡಿರುವ ಪರಿಣಾಮ ಬಿಸಿಲಿಗೆ ಬೆಂಕಿ ಹೊತ್ತಿ ಅಲ್ಲಲ್ಲಿ ಬೆಂಕಿ ಅವಘಡ ಕೂಡ ನಡೆಯುತ್ತಿವೆ. ಬೊಮ್ಮಂಡಹಳ್ಳಿಯ ಸಮೀಪ ಹೊತ್ತಿ ಉರಿಯುತ್ತಿರುವ ತ್ಯಾಜ್ಯದ ಪರಿಣಾಮ ಇಡೀ ಪ್ರದೇಶದಲ್ಲಿ ಉಸಿರುಗಟ್ಟುವ ವಾತವರಣ ನಿರ್ಮಾಣವಾಗಿದೆ.

ಬೆಳಿಗ್ಗೆಯಿಂದಲೂ ದಟ್ಟ ಹೊಗೆ ಆವರಿಸಿಕೊಂಡು ಬೇಸಿಗೆ ಕಾಲದಲ್ಲೂ ಮಂಜು ಮುಸುಕಿದಂತೆ ಭಾಸವಾಗುತ್ತಿದೆ. ಘಟನಾ ಪ್ರದೇಶದಿಂದ ತೆರಳುವ ಜನರಿಗೆ ಉಸಿರು ತೆಗೆದುಕೊಳ್ಳಲೂ ಆಗದ ಸ್ಥಿತಿ ಇದೆ. ಜಿಗಣಿ ವ್ಯಾಪ್ತಿಯ ಅನೇಕ ಕಾರ್ಖಾನೆ ಹಾಗೂ ಹೋಟೆಲ್ ಸಿಬ್ಬಂದಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದರೂ, ಜಿಗಣಿ ಪುರಸಭೆ ಅಧಿಕಾರಿಗಳು ಕಣ್ಮುಚ್ಚಿ ಕೂತಿದ್ದಾರೆ. ಕಸ ಹಾಕುತ್ತಿರುವವ ವಿರುದ್ಧ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳದ ಹಿನ್ನೆಲೆ ಭ್ರಷ್ಟಾಚಾರದ ಆರೋಪವೂ ಕೇಳಿ ಬಂದಿದೆ.

ದೆಹಲಿಯಂತಾಗುತ್ತಾ ಪರಿಸ್ಥಿತಿ?: ಬೆಂಗಳೂರು ನಗರದಲ್ಲಿ ಸದ್ಯ ಮಿತಿಮೀರಿದ ಟ್ರಾಫಿಕ್ ಕಾರಣದಿಂದ ಆಕ್ಸಿಜನ್ ಪ್ರಮಾಣ ಇಳಿತ ಕಂಡಿರುವುದು ಎಲ್ಲಾರಿಗೂ ತಿಳಿದಿರುವ ವಿಚಾರ. ಹೀಗಾಗಿ ಉದ್ಯಾನವನ ಹಾಗೂ ಪಾರ್ಕ್​ಗಳ ಅಭಿವೃದ್ಧಿಗೆ ಸರಕಾರ ಕೋಟ್ಯಾಂತರ ಹಣ ವ್ಯಯಿಸುತ್ತಿದೆ. ಬನ್ನೇರುಘಟ್ಟ ಉದ್ಯಾನವನ ಹಾಗೂ ನ್ಯಾಶನಲ್ ಪಾರ್ಕ್ ಬೆಂಗಳೂರು ನಗರಕ್ಕೆ ಶ್ವಾಸಕೋಶದ ರೀತಿ ಇದ್ದಂತೆ ಅಂತ ತಜ್ಞರು ಹಲವು ಬಾರಿ ಪ್ರಸ್ತಾಪ ಮಾಡಿದ್ದಾರೆ. ಹೀಗಿದ್ದಾಗ ಜಿಗಣಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಆಕ್ಸಿಜನ್ ಪ್ರಮಾಣ ಕುಗ್ಗಿಸುವ ಕೆಲಸ ಮಾಡುತ್ತಿವೆ ಅನ್ನೋದು ಪ್ರಮುಖ ಅಂಶ. ಅದಕ್ಕೆ ತಾಜ್ಯ ವಿಲೇವಾರಿ ಆಗದೇ ಇರುವ ಕಾರಣ ಬೆಂಕಿ ಹೊತ್ತಿ ಉರಿಯುವ ಘಟನೆ ನಡೆಯುತ್ತಿವೆ.

ಇದನ್ನೂ ಓದಿ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; ಬೆಂಗಳೂರಿನ ಎನ್ಐಎ ಅಧಿಕೃತ ಕಚೇರಿಯಲ್ಲಿ ಕಾರ್ಯಾರಂಭ

ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ 2ನೇ ದಿನಕ್ಕೆ; ರೈತರು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಆಗ್ರಹ

Published On - 4:01 pm, Tue, 29 March 22

Follow Us
Web contact
Web contact

TV9 Kannada

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!