AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ದರ ಏರಿಕೆ ನಂತರ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ವರದಿ

ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಿಂದಾಗಿ ವಾಯು ಮಾಲಿನ್ಯ ಹೆಚ್ಚಾಗಿದೆ ಎಂದು ಅಧ್ಯಯನಗಳು ತೋರಿಸಿವೆ. ದರ ಏರಿಕೆಯ ನಂತರ, ಜನರು ಸ್ವಂತ ವಾಹನಗಳನ್ನು ಬಳಸಲು ಆರಂಭಿಸಿದ್ದು, ಇದರಿಂದಾಗಿ ವಾಹನ ಸಂಚಾರ ಹೆಚ್ಚಾಗಿದೆ ಮತ್ತು ವಾಯು ಗುಣಮಟ್ಟ ಕುಸಿದಿದೆ. ಸಾರಿಗೆ ವಲಯದಿಂದ ಹೆಚ್ಚಿನ ಮಾಲಿನ್ಯ ಉತ್ಪತ್ತಿಯಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆ ಕಂಡುಬಂದಿದೆ.

ನಮ್ಮ ಮೆಟ್ರೋ ದರ ಏರಿಕೆ ನಂತರ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ವರದಿ
ನಮ್ಮ ಮೆಟ್ರೋ
Follow us
ವಿವೇಕ ಬಿರಾದಾರ
|

Updated on: Mar 05, 2025 | 12:48 PM

ಬೆಂಗಳೂರು, ಮಾರ್ಚ್​ 05: ನಮ್ಮ ಮೆಟ್ರೋ ದರ (Namma Metro Ticket Price) ಏರಿಕೆಯಾದ ನಂತರ ಬೆಂಗಳೂರಿನಲ್ಲಿ (Bengaluru) ವಾಯು ಮಾಲಿನ್ಯ (Air pollution) ಹೆಚ್ಚಾಗಿದೆ ಎಂದು ರಾಷ್ಟ್ರೀಯ ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರದ ದತ್ತಾಂಶದಿಂದ ತಿಳಿದುಬಂದಿದೆ. ಭಾರತೀಯ ವಿಜ್ಞಾನ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ, ಪ್ರಯಾಣದ ದರ ಏರಿಕೆ ಬಳಿಕ ಸಾಕಷ್ಟು ಜನರು ನಮ್ಮ ಮೆಟ್ರೋ ಬಿಟ್ಟು ಸ್ವಂತ ವಾಹನಗಳಲ್ಲಿ ಓಡಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಫೆಬ್ರವರಿ 9 ರಂದು ನಮ್ಮೆ ಮೆಟ್ರೋ ಪ್ರಯಾಣದ ದರವನ್ನು ಏರಿಕೆ ಮಾಡಿತ್ತು. ದರ ಏರಿಕೆ ಬಳಿಕ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿನ ಇಳಿಕೆಯಾಗಿದೆ. “ನಮ್ಮ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು ಶೇ. 10.5 ರಷ್ಟು ಇಳಿಕೆಯಾಗಿದೆ ಎಂದು ಎಂದು ಬಿಎಂಆರ್​ಸಿಎಲ್​ ಹೇಳಿದೆ ಎಂದು ಡೆಕ್ಕನ್​ ಹೆರಾಲ್ಡ್​ ವರದಿ ಮಾಡಿದೆ.

ಮೆಟ್ರೋ ಟಿಕೆಟ್​ ದರಕ್ಕಿಂತ ಪೆಟ್ರೋಲ್​ ಅಗ್ಗ

ಮೆಟ್ರೋ ಪ್ರಯಾಣದ ದರ ವಿಚಾರವಾಗಿ ಓರ್ವ ಪ್ರಯಾಣಿಕ ಮಾತನಾಡಿ, “ಯೆಲಚೇನಹಳ್ಳಿಯಿಂದ ಎಂಜಿ ರಸ್ತೆಗೆ ನನ್ನ ಪ್ರಯಾಣದ ವೆಚ್ಚ ದ್ವಿಗುಣವಾಗಿದ್ದು, 66 ರೂ.ಗೆ ತಲುಪಿದೆ. ವಾಪಸ್​ ಬರುವಾಗಲೂ 66 ರೂ. ತಗಲುತ್ತದೆ. ಜೊತೆಗೆ, ಪಾರ್ಕಿಂಗ್ ಶುಲ್ಕ 30 ರೂ. ಪಾವತಿಸಬೇಕು. ಇದು ತುಂಬಾ ದುಬಾರಿಯಾಗಿದೆ. ಹೀಗಾಗಿ, ನಾನು ನನ್ನ ಬುಲೆಟ್ ಮೊಬೈಕ್ ಮೇಲೆ ಸಂಚರಿಸುತ್ತಿದ್ದೇನೆ. ಒಂದು ಲೀಟರ್ ಪೆಟ್ರೋಲ್ ಬೆಲೆ ಇದಕ್ಕಿಂತ ಅಗ್ಗವಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ
Image
ಟಿಕೆಟ್ ದರ ಏರಿಕೆ ಪರಿಣಾಮ: 5 ಲಕ್ಷಕ್ಕಿಳಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ
Image
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
Image
ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ
Image
ಬಿಎಂಆರ್​ಸಿಎಲ್ ನಮ್ಮ ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡಿದ್ಯಾಕೆ?

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಪ್ರಕಾರ, ಸಾರಿಗೆ ವಲಯದಿಂದ ಶೇಕಡಾ 40 ರಿಂದ 51 ರಷ್ಟು ವಾಯು ಮಾಲಿನ್ಯವಾಗುತ್ತಿದ್ದು, ಧೂಳಿನಿಂದ ಶೇ.17 ರಿಂದ 51 ರಷ್ಟು ವಾಯು ಮಾಲಿನ್ಯವಾಗುತ್ತಿದೆ. ದರ ಏರಿಕೆ ನಂತರ ಫೆಬ್ರವರಿ 10ರಿಂದ ಮಾಲೀನ್ಯ ಹೆಚ್ಚಾಗಿದೆ. ಈ ಮೂಲಕ ಜನರು ಮೆಟ್ರೋ ಬಿಟ್ಟು ಸ್ವಂತ ವಾಹನದಲ್ಲಿ ಓಡಾಡುವವರ ಸಂಖ್ಯೆ ಅಧಿಕವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI)ದಲ್ಲೂ ಮಾಲೀನ್ಯ ಏರಿಕೆ ಕಂಡಿದೆ.

ಇದನ್ನೂ ಓದಿ: ನೀವು ಪತ್ರ ಬರೆದರೆ 3 ದಿನಗಳಲ್ಲಿ ಮೆಟ್ರೋ ಟಿಕೆಟ್​ ದರ ಇಳಿಕೆ: ಸಿಎಂಗೆ ಬಿಜೆಪಿ ಸಂಸದರ ಭರವಸೆ

ಉದಾಹರಣೆಗೆ, ಜಯನಗರ 5 ನೇ ಬ್ಲಾಕ್‌ನಲ್ಲಿರುವ ಮೇಲ್ವಿಚಾರಣಾ ಕೇಂದ್ರವು ದರ ಏರಿಕೆಗೆ ಮುನ್ನ, ಬೆಳಿಗ್ಗೆ ಮತ್ತು ಸಂಜೆ ಪೀಕ್ ಅವರ್‌ನಲ್ಲಿ ಸರಾಸರಿ ಪರ್ಟಿಕ್ಯುಲೇಟ್ ಮ್ಯಾಟರ್ 2.5 ಪ್ರತಿ ಘನ ಮೀಟರ್‌ಗೆ 43 ರಿಂದ 54 ಮೈಕ್ರೋಗ್ರಾಂಗಳ ನಡುವೆ ಇತ್ತು ಎಂದು ತೋರಿಸಿದೆ. ಫೆಬ್ರವರಿ 10 ರಂದು 112-114 ಮೈಕ್ರೋಗ್ರಾಂ/ಘನ ಮೀಟರ್‌ಗೆ ತಲುಪಿತು ಎಂದು ತೋರಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್