AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution: ದೀಪಾವಳಿ ಹಬ್ಬದ ಬಳಿಕ ಬೆಂಗಳೂರಿನಲ್ಲಿ ಕೊಂಚ ಮಟ್ಟಿಗೆ ಏರಿಕೆಯಾದ ವಾಯುಮಾಲಿನ್ಯ

Air Pollution In Bengaluru: ದೆಹಲಿ ಬಳಿಕ ರಾಜ್ಯದಲ್ಲಿಯೂ ವಾಯುಮಾಲಿನ್ಯದ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ವರ್ಷಕ್ಕೆ ಹೊಲಿಕೆ ಮಾಡಿದರೆ ನಗರದಲ್ಲಿ ಮಾಲಿನ್ಯದ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ.

Air Pollution: ದೀಪಾವಳಿ ಹಬ್ಬದ ಬಳಿಕ ಬೆಂಗಳೂರಿನಲ್ಲಿ ಕೊಂಚ ಮಟ್ಟಿಗೆ ಏರಿಕೆಯಾದ ವಾಯುಮಾಲಿನ್ಯ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Nov 07, 2021 | 10:14 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ದೀಪಾವಳಿ (Deepavali) ಹಬ್ಬದ ಬಳಿಕ ವಾಯುಮಾಲಿನ್ಯ (Air Pollution) ಕೊಂಚ ಮಟ್ಟಿಗೆ ಏರಿಕೆಯಾಗಿದೆ. ದೆಹಲಿ ಬಳಿಕ ರಾಜ್ಯದಲ್ಲಿಯೂ ವಾಯುಮಾಲಿನ್ಯದ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ವರ್ಷಕ್ಕೆ ಹೊಲಿಕೆ ಮಾಡಿದರೆ ನಗರದಲ್ಲಿ ಮಾಲಿನ್ಯದ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ಲಾಕ್​ಡೌನ್​ ಹಿನ್ನೆಲೆ ಅತ್ಯಂತ ಕಡಿಮೆ ಮಟ್ಟದಲ್ಲಿ ಮಾಲಿನ್ಯದ ಪ್ರಮಾಣ ದಾಖಲಾಗಿತ್ತು. ಈ ವರ್ಷ ಅನ್​ಲಾಕ್​ ಆಗಿರುವ ಹಿನ್ನೆಲೆ ಹಬ್ಬದ ಸಮಯದಲ್ಲಿ ಮಾಲಿನ್ಯದ ಪ್ರಮಾಣ ಏರಿಕೆಯಾಗಿದೆ.

2020ರಲ್ಲಿ ವಾಯು ಗುಣಮಟ್ಟ ಸೂಚ್ಯಂಕ (Air Quality Index) 55 ಇತ್ತು. 2021ರಲ್ಲಿ ವಾಯು ಗುಣಮಟ್ಟ ಸೂಚ್ಯಂಕ 67 ಇದ್ದು, ಗುಣಮಟ್ಟ ಕುಸಿದಿದೆ ಎಂಬ ಮಾಹಿತಿ ತಿಳಿದುಬಂದಿದೆ.

2020 ಮತ್ತು 2021ರ ವಾಯು ಗುಣಮಟ್ಟ ಸೂಚ್ಯಂಕ ಸಿಟಿ ರೈಲ್ವೆ ನಿಲ್ದಾಣ 2020- 42 AQI 2021- 112 AQI ಬಶವೇಶ್ವರನಗರ 2020- 21 AQI 2021- 57 AQI ಜಯನಗರ 5ನೇ ಹಂತ 2020- 72 AQI 2021- 74 AQI ಕವಿಕಾ ಮೈಸೂರು ರಸ್ತೆ 2020- 66 AQI 2021- 87 AQI ಸೆಂಟ್ರಲ್ ಸಿಲ್ಕ್ ಬೋರ್ಡ್ 2020- 52 AQI 2021- 54 AQI

ದೆಹಲಿಯಲ್ಲಿ ವಾಯುಮಾಲಿನ್ಯ ದೀಪಾವಳಿಯ ಎರಡು ದಿನಗಳ ನಂತರ ದೆಹಲಿಯ ಗಾಳಿಯ ಗುಣಮಟ್ಟವು “ಗಂಭೀರ” ವಿಭಾಗದಲ್ಲಿ ಮುಂದುವರಿದಿದೆ. ರಾಷ್ಟ್ರವ್ಯಾಪಿ ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AQI) ಭಾರತದಾದ್ಯಂತ ಅನೇಕ ನಗರಗಳಲ್ಲೂ ಸಹ ಕಳಪೆ ಸ್ಥಿತಿಯಲ್ಲಿರುವುದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಏಳು ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಕಳಪೆ ಸ್ಥಿತಿಯಲ್ಲಿದೆ. ಹರಿಯಾಣದ ಏಳು ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಕಳಪೆ ಸ್ಥಿತಿಯಲ್ಲಿದೆ. ಶನಿವಾರ ಬೆಳಿಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (CPCB) ನೀಡಿದ AQI ಮಾಲಿನ್ಯ ಮಾಹಿತಿಯ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿ ಪ್ರಸ್ತುತ ದೇಶದ ಎಲ್ಲಾ ಪ್ರಮುಖ ನಗರಗಳಿಗಿಂತ ಅತ್ಯಂತ ಕೆಟ್ಟ ಗಾಳಿಯ ಗುಣಮಟ್ಟವನ್ನು ಹೊಂದಿದೆ. ನಂತರ ಸ್ಥಾನದಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್ ನಗರವಿದೆ.

ಇದನ್ನೂ ಓದಿ

Air Pollution: ಕಲುಷಿತವಾಗುತ್ತಿದೆ ಪ್ರಾಣವಾಯು; ಅತಿ ಹೆಚ್ಚು ವಾಯು ಮಾಲಿನ್ಯವಿರುವ ಭಾರತದ ಟಾಪ್ 10 ನಗರಗಳಿವು

ವಾಯು ಮಾಲಿನ್ಯ ನಿಯಂತ್ರಿಸಲು ₹ 18 ಕೋಟಿಗೂ ಹೆಚ್ಚು ಹಣವನ್ನು ಕೇಂದ್ರದಿಂದ ಪಡೆಯಲಿದೆ ದೆಹಲಿ

Published On - 10:10 am, Sun, 7 November 21

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!