AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಚ್ಚಾದ ಏರ್ ಪೊಲ್ಯೂಷನ್ ಡಿಸಾಡರ್; ವಾಯು ಮಾಲಿನ್ಯದಿಂದ ಜೀವಕ್ಕೆ ಆಪತ್ತು

ಬೆಂಗಳೂರಿನ ಏರ್ ಪೊಲ್ಯೂಷನ್ ಸದ್ದಿಲ್ಲದೆ ಜನರ ಜೀವಕ್ಕೆ ಕುತ್ತು ತರುತ್ತಿದೆ. ತಂಬಾಕು, ಮದ್ಯ ಸೇವನೆ ಮಾತ್ರವಲ್ಲ ಬೆಂಗಳೂರಿನ ಕಲುಷಿತ ಹವಾಮಾನ ಕೂಡ ಕ್ಯಾನ್ಸರ್, ಲಂಗ್ಸ್ ಡ್ಯಾಮೇಜ್ ನಂತಹ ರೋಗಗಳಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಏರ್ ಪೊಲ್ಯೂಷನ್​ನಿಂದಾಗಿ ಹೆಚ್ಚು ಜನರು ಆರೋಗ್ಯ ಸಮಸ್ಯೆಗಳನ್ನೆದುರಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚಾದ ಏರ್ ಪೊಲ್ಯೂಷನ್ ಡಿಸಾಡರ್; ವಾಯು ಮಾಲಿನ್ಯದಿಂದ ಜೀವಕ್ಕೆ ಆಪತ್ತು
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಆಯೇಷಾ ಬಾನು

Updated on: Jan 08, 2024 | 12:18 PM

ಬೆಂಗಳೂರು, ಜ.08: ಮಹಿಳೆಯರಿಗೆ ಉಚಿತ ಬಸ್ ಸೇವೆ, ಮೆಟ್ರೋ ಫೀಡರ್ ಬಸ್​ಗಳು ಸೇರಿದಂತೆ ನಗರ ರಸ್ತೆ ಸಾರಿಗೆ ಸಂಚಾರಕ್ಕೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಆದರೂ ನಗರದಲ್ಲಿ ವಾಯು ಮಾಲಿನ್ಯ, ಟ್ರಾಫಿಕ್ ಕಡಿಮೆಯಾಗಿಲ್ಲ. ಇದೀಗ ವಾಯು ಮಾಲಿನ್ಯ ಜನರ ಜೀವಕ್ಕೆ ಕುತ್ತು ತಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಏರ್ ಪೊಲ್ಯೂಷನ್ ಡಿಸಾಡರ್ (Air Polution Disarder) ಸದ್ದಿಲ್ಲದೆ ಏರಿಕೆಯಾಗುತ್ತಿದೆ. ಏರ್ ಪೊಲ್ಯೂಷನ್ ಡಿಸಾಡರ್​​ಗೆ ಸಿಟಿ ಮಂದಿ (Bengaluru) ಬಲಿಯಾಗುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಏರ್ ಪೊಲ್ಯೂಷನ್ ಮಾರಕವಾಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಲು ರಾಜೀವ ಗಾಂಧಿ ಎದೆ ರೋಗಿಗಳ ಸಂಸ್ಥೆ ಮುಂದಾಗಿದೆ.

ಬೆಂಗಳೂರಿನ ಏರ್ ಪೊಲ್ಯೂಷನ್ ಸದ್ದಿಲ್ಲದೆ ಜನರ ಜೀವಕ್ಕೆ ಕುತ್ತು ತರುತ್ತಿದೆ. ತಂಬಾಕು, ಮದ್ಯ ಸೇವನೆ ಮಾತ್ರವಲ್ಲ ಬೆಂಗಳೂರಿನ ಕಲುಷಿತ ಹವಾಮಾನ ಕೂಡ ಕ್ಯಾನ್ಸರ್, ಲಂಗ್ಸ್ ಡ್ಯಾಮೇಜ್ ನಂತಹ ರೋಗಗಳಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಏರ್ ಪೊಲ್ಯೂಷನ್​ನಿಂದಾಗಿ ಹೆಚ್ಚು ಜನರು ಆರೋಗ್ಯ ಸಮಸ್ಯೆಗಳನ್ನೆದುರಿಸುತ್ತಿದ್ದಾರೆ. ಟ್ರಾಫಿಕ್​ನಲ್ಲಿ ನಿಂತು ನಿರಂತರ ಕೆಲಸ ನಿರ್ವಹಿಸುವ ಟ್ರಾಫಿಕ್ ಪೊಲೀಸರು, ಬಿಎಂಟಿಸಿ ಚಾಲಕ, ನಿರ್ವಾಹಕರು ಏರ್ ಪೊಲ್ಯೂಷನ್ ಡಿಸಾಡರ್​ಗೆ ತುತ್ತಾಗುತ್ತಿದ್ದಾರೆ.

ಇದನ್ನೂ ಓದಿ: ಮದುವೆ, ಪ್ರವಾಸಕ್ಕೂ ಬಿಎಂಟಿಸಿ ಬಸ್: ಯಾವ ಬಸ್​​​ಗೆ ಎಷ್ಟು ಬಾಡಿಗೆ? ಇಲ್ಲಿದೆ ವಿವರ

ಏರ್ ಪೊಲ್ಯೂಷನ್ ಡಿಸಾಡರ್, ಲಂಗ್ಸ್ ಕ್ಯಾನ್ಸರ್, ಬ್ರಾಕಂಟಿಸ್, ಹೃದಯಘಾತ ಹೆಚ್ಚಳಕ್ಕೂ ಕಾರಣವಾಗಿದೆ. ಈ ಹಿನ್ನಲೆ ಏರ್ ಪೊಲ್ಯೂಷನ್ ಡಿಸಾಡರ್ ಅಧ್ಯಯನಕ್ಕೆ ರಾಜೀವ್ ಗಾಂಧಿ ಎದೆ ರೋಗಿಗಳ ಸಂಸ್ಥೆ ಮುಂದಾಗಿದೆ. ಪ್ರಾಥಮಿಕ ಹಂತದಲ್ಲಿ ಟ್ರಾಫಿಕ್ ಪೊಲೀಸರು ಹಾಗು ಬಿಎಂಟಿಸಿ ಡ್ರೈವರ್, ಕಂಡಕ್ಟರ್​ಗಳ ಮೇಲೆ ಅಧ್ಯಯನ ನಡೆಸಲಾಗುತ್ತೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣೆಯ ಟ್ರಾಫಿಕ್ ಪೊಲೀಸರು ಹಾಗೂ ಬಿಎಂಟಿಸಿ ಚಾಲಕ ನಿರ್ವಹಕರನ್ನ ಅಧ್ಯಯನಕ್ಕೆ ಒಳಪಡಿಸಿ ಸರ್ಕಾರಕ್ಕೆ ವರದಿ ನೀಡಲು ರಾಜೀವ್ ಗಾಂಧಿ ಎದೆ ರೋಗಿಗಳ ಸಂಸ್ಥೆ ಮುಂದಾಗಿದೆ. ಸರ್ಕಾರಕ್ಕೆ ಏರ್ ಪೊಲ್ಯೂಷನ್ ಸಮಸ್ಯೆಗಳು ಹಾಗೂ ಕ್ರಮಗಳ ಬಗ್ಗೆ ವರದಿ ನೀಡಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ