Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾ ವಿಮಾನ ನಿಲ್ದಾಣದಲ್ಲಿ ವಶ

ಇಷ್ಟು ದಿನ ಬೆಂಗಳೂರು ಏರ್​ಪೋರ್ಟ್​ನಲ್ಲಿ ವಾಮ ಮಾರ್ಗವಾಗಿ ಕೋಟಿ ಕೋಟಿ ರೂಪಾಯಿ ಬೆಲೆಬಾಳುವ ಚಿನ್ನಾಭರಣಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ವಿಮಾನ ನಿಲ್ದಾಣದ ಮೂಲಕ ಕೋಟಿ ಕೋಟಿ ರೂ. ಬೆಲೆಬಾಳುವ ಗಾಂಜಾ ಸಾಗಿಸಲು ಹೋದ ಖದೀಮರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. 23 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾ ವಿಮಾನ ನಿಲ್ದಾಣದಲ್ಲಿ ವಶ
ಸಾಂದರ್ಭಿಕ ಚಿತ್ರ
Follow us
ನವೀನ್ ಕುಮಾರ್ ಟಿ
| Updated By: Ganapathi Sharma

Updated on: Jan 17, 2025 | 7:51 AM

ಬೆಂಗಳೂರು, ಜನವರಿ 17: ಪ್ರತಿ ನಿತ್ಯ ದೇಶ ವಿದೇಶಗಳಿಗೆ ಸಾವಿರಾರು ಜನ ಪ್ರಯಾಣಿಸುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ತಂದಿದ್ದ ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಗಾಂಜಾವನ್ನು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದಿದ್ದ ಹೈಡ್ರೋಪೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ 23 ಕೋಟಿ ರೂ. ಮೌಲ್ಯದ 23 ಕೆಜಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ.

ಈ ಗಾಂಜಾವನ್ನು ಪ್ರತಿಷ್ಠಿತ ಶಾಲಾ ಕಾಲೇಜು ಹಾಗೂ ಪಾರ್ಟಿಗಳು ನಡೆಯುವ ಜಾಗಗಳಿಗೆ ತಲುಪಿಸಲು ತರಲಾಗಿತ್ತು ಎಂದು ಹೇಳಲಾಗುತ್ತಿದ್ದು, ಶ್ರೀಮಂತರು ಹೆಚ್ಚಾಗಿ ಬಳಸುವ ಗಾಂಜಾ ಇದಾಗಿದೆ.

ವಿಮಾನ ನಿಲ್ದಾಣದಲ್ಲಿ ಗಾಂಜಾ ಪತ್ತೆಯಾಗಿದ್ಹೇಗೆ?

ಕೆಂಪೇಗೌಡ ಏರ್ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡುವ ವೇಳೆ, ಪ್ರತ್ಯೇಕ ಕವರ್​ಗಳಲ್ಲಿ ಪ್ಯಾಕ್ ಮಾಡಿಕೊಂಡು ಲಗೇಜ್ ಬ್ಯಾಗ್​ನಲ್ಲಿ ಇಟ್ಟಿಕೊಂಡು ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ಚೆಕ್ ಮಾಡುವ ವೇಳೆ ಗಾಂಜಾ ಸಮೇತ ಮೂವರು ಆರೋಪಿಗಳ‌ನ್ನು ಬಂಧಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಬಾಳುವ ಹೈಡ್ರೋಪೋನಿಕ್ ಗಾಂಜಾವನ್ನು ಆರೋಪಿಗಳು ಸಾಗಿಸುತ್ತಿದ್ದು, ಆರೋಪಿಗಳ ಮೇಲೆ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮಾವ ಎನ್ನುವ ಕಾಮ‌ ಕ್ರಿಮಿಯ ಸಂಗ ಮಾಡಿ ಸಾವಿನ ಮನೆ ಸೇರಿದ ಸೊಸೆ ಟೆಕ್ಕಿ

ಒಟ್ಟಾರೆ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಡ್ರಗ್ಸ್ ಜೊತೆಗೆ ವಿದೇಶದಿಂದ ಹೆಚ್ಚು ಬೆಲೆ ಬಾಳುವ ಗಾಂಜಾದಂತಹ ಮಾದಕ ವಸ್ತುಗಳ ಸಾಗಾಣಿಕೆ ಮಾಡಲು ಯತ್ನಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಈ ಗಾಂಜಾವನ್ನು ಎಲ್ಲಿಗೆ ಪೂರೈಸಲು ತರಲಾಗಿತ್ತು? ಯಾರಿಗೆ ಕೊಡಲು ತಂದಿದ್ದರು ಎಂಬುದನ್ನು ಇನ್ನಷ್ಟೇ ಅಧಿಕಾರಿಗಳು ತನಿಖೆ ನಡೆಸಿ ಪತ್ತೆ ಹಚ್ಚಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ