AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾ ವಿಮಾನ ನಿಲ್ದಾಣದಲ್ಲಿ ವಶ

ಇಷ್ಟು ದಿನ ಬೆಂಗಳೂರು ಏರ್​ಪೋರ್ಟ್​ನಲ್ಲಿ ವಾಮ ಮಾರ್ಗವಾಗಿ ಕೋಟಿ ಕೋಟಿ ರೂಪಾಯಿ ಬೆಲೆಬಾಳುವ ಚಿನ್ನಾಭರಣಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ವಿಮಾನ ನಿಲ್ದಾಣದ ಮೂಲಕ ಕೋಟಿ ಕೋಟಿ ರೂ. ಬೆಲೆಬಾಳುವ ಗಾಂಜಾ ಸಾಗಿಸಲು ಹೋದ ಖದೀಮರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. 23 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾ ವಿಮಾನ ನಿಲ್ದಾಣದಲ್ಲಿ ವಶ
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ
| Updated By: Ganapathi Sharma|

Updated on: Jan 17, 2025 | 7:51 AM

Share

ಬೆಂಗಳೂರು, ಜನವರಿ 17: ಪ್ರತಿ ನಿತ್ಯ ದೇಶ ವಿದೇಶಗಳಿಗೆ ಸಾವಿರಾರು ಜನ ಪ್ರಯಾಣಿಸುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ತಂದಿದ್ದ ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಗಾಂಜಾವನ್ನು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದಿದ್ದ ಹೈಡ್ರೋಪೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ 23 ಕೋಟಿ ರೂ. ಮೌಲ್ಯದ 23 ಕೆಜಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ.

ಈ ಗಾಂಜಾವನ್ನು ಪ್ರತಿಷ್ಠಿತ ಶಾಲಾ ಕಾಲೇಜು ಹಾಗೂ ಪಾರ್ಟಿಗಳು ನಡೆಯುವ ಜಾಗಗಳಿಗೆ ತಲುಪಿಸಲು ತರಲಾಗಿತ್ತು ಎಂದು ಹೇಳಲಾಗುತ್ತಿದ್ದು, ಶ್ರೀಮಂತರು ಹೆಚ್ಚಾಗಿ ಬಳಸುವ ಗಾಂಜಾ ಇದಾಗಿದೆ.

ವಿಮಾನ ನಿಲ್ದಾಣದಲ್ಲಿ ಗಾಂಜಾ ಪತ್ತೆಯಾಗಿದ್ಹೇಗೆ?

ಕೆಂಪೇಗೌಡ ಏರ್ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡುವ ವೇಳೆ, ಪ್ರತ್ಯೇಕ ಕವರ್​ಗಳಲ್ಲಿ ಪ್ಯಾಕ್ ಮಾಡಿಕೊಂಡು ಲಗೇಜ್ ಬ್ಯಾಗ್​ನಲ್ಲಿ ಇಟ್ಟಿಕೊಂಡು ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ಚೆಕ್ ಮಾಡುವ ವೇಳೆ ಗಾಂಜಾ ಸಮೇತ ಮೂವರು ಆರೋಪಿಗಳ‌ನ್ನು ಬಂಧಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಬಾಳುವ ಹೈಡ್ರೋಪೋನಿಕ್ ಗಾಂಜಾವನ್ನು ಆರೋಪಿಗಳು ಸಾಗಿಸುತ್ತಿದ್ದು, ಆರೋಪಿಗಳ ಮೇಲೆ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮಾವ ಎನ್ನುವ ಕಾಮ‌ ಕ್ರಿಮಿಯ ಸಂಗ ಮಾಡಿ ಸಾವಿನ ಮನೆ ಸೇರಿದ ಸೊಸೆ ಟೆಕ್ಕಿ

ಒಟ್ಟಾರೆ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಡ್ರಗ್ಸ್ ಜೊತೆಗೆ ವಿದೇಶದಿಂದ ಹೆಚ್ಚು ಬೆಲೆ ಬಾಳುವ ಗಾಂಜಾದಂತಹ ಮಾದಕ ವಸ್ತುಗಳ ಸಾಗಾಣಿಕೆ ಮಾಡಲು ಯತ್ನಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಈ ಗಾಂಜಾವನ್ನು ಎಲ್ಲಿಗೆ ಪೂರೈಸಲು ತರಲಾಗಿತ್ತು? ಯಾರಿಗೆ ಕೊಡಲು ತಂದಿದ್ದರು ಎಂಬುದನ್ನು ಇನ್ನಷ್ಟೇ ಅಧಿಕಾರಿಗಳು ತನಿಖೆ ನಡೆಸಿ ಪತ್ತೆ ಹಚ್ಚಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ