ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ, ಕಾಫಿ ಢೇ ಮಾಲಿಕ ದಿ.ಸಿದ್ದಾರ್ಥ್ ಮಗ ಅಮರ್ತ್ಯ ಹೆಗ್ಡೆ ಇಂದು (ಫೆಬ್ರವರಿ 14) ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವೈಟ್ ಫೀಲ್ಡ್ ಬಳಿಯ ಶೆರಟಾನ್ನಲ್ಲಿ ಮದುವೆ ನಡೆಯುತ್ತಿದ್ದು, ಪ್ರೇಮಿಗಳ ದಿನದಂದು ಹಸೆಮಣೆ ಏರಿದ ಐಶ್ವರ್ಯಾ ಮತ್ತು ಅಮರ್ತ್ಯ ಹೆಗ್ಡೆ ಹೆಗ್ಡೆಯ ವಿವಾಹಕ್ಕೆ ಹಲವು ಗಣ್ಯಾತಿಗಣ್ಯರು ಮತ್ತು ಮಠಾಧೀಶರು ಸಾಕ್ಷಿಯಾಗಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ದಂಪತಿ, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್, ಕೆ.ಸುಧಾಕರ್, ಡಾ.ಜಿ.ಪರಮೇಶ್ವರ್, ಲಕ್ಷ್ಮೀ ಹೆಬ್ಬಾಳ್ಕರ್, ವಿ.ಸೋಮಣ್ಣ, ಅಖಂಡ ಶ್ರೀನಿವಾಸಮೂರ್ತಿ, ಆರ್.ವಿ.ದೇಶಪಾಂಡೆ, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ರಕ್ಷಾ ರಾಮಯ್ಯ, ಶಾಮನೂರು ಶಿವಶಂಕರಪ್ಪ, ಎನ್.ಚಲುವರಾಯಸ್ವಾಮಿ, ಟಿ.ಎ.ನಾರಾಯಣಗೌಡ, ಪ್ರಭಾಕರ ಕೋರೆ, ಮುನಿರತ್ನ, ಕುಮಾರ ಬಂಗಾರಪ್ಪ, ಸಂಪತ್ ರಾಜ್, ಅಶೋಕ್ ಖೇಣಿ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದಾರೆ. ವಿನಯ್ ಗುರೂಜಿ ಮತ್ತು ನೊಣವಿನಕೆರೆ ಸ್ವಾಮೀಜಿ ನವದಂಪತಿಗೆ ಶುಭ ಹಾರೈಸಿದರು.
ಐಶ್ವರ್ಯಾ ಮತ್ತು ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ನವೆಂಬರ್ 18ರಂದು ಸರಳವಾಗಿ ನೆರವೇರಿತ್ತು. ಫೆಬ್ರವರಿ 10ರಂದು ಅರಿಶಿಣ ಕಾರ್ಯಕ್ರಮ ನಡೆದಿದೆ. ಇಂದು ಬೆಳಿಗ್ಗೆ 9.45ರ ಮುಹೂರ್ತದಲ್ಲಿ ಸಪ್ತಪದಿ ತುಳಿದಿದ್ದಾರೆ.
ಹೆಚ್ಚಿನ ಫೋಟೋಗಳಿಗಾಗಿ: Aishwarya Amartya Hegde Marriage | ಪ್ರೇಮಿಗಳ ದಿನದಂದು ಸಪ್ತಪದಿ ತುಳಿದ ಡಿ.ಕೆ. ಶಿವಕುಮಾರ್ ಪುತ್ರಿ; ಐಶ್ವರ್ಯಾ-ಅಮರ್ತ್ಯ ಹೆಗ್ಡೆ ಮದುವೆಯ ಸುಂದರ ಕ್ಷಣಗಳು