AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ; ಮಂಗಳೂರು ವಿಭಾಗಕ್ಕೆ ಒಲಿದ ಎಕೆಎಎಂ

ಸಿಬ್ಬಂದಿಯ ಆನ್​​​ಲೈನ್ ಇ ನಾಮಿನೇಷನ್ ಪ್ರಕ್ರಿಯೆ ಪೂರ್ಣವಾಗಿದ್ದು, ಆನ್​​​ಲೈನ್ ಇ ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಳಿಸಿದ್ದಕ್ಕೆ ಪ್ರಶಸ್ತಿ ನೀಡಲಾಗುತ್ತಿದೆ. ನಿನ್ನೆ ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪದಾನ ಮಾಡಲಾಗಿದೆ.

ಕೆಎಸ್ಆರ್​ಟಿಸಿ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ; ಮಂಗಳೂರು ವಿಭಾಗಕ್ಕೆ ಒಲಿದ ಎಕೆಎಎಂ
ಮಂಗಳೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ, ಅರುಣ ಎಸ್.ಎನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
TV9 Web
| Updated By: preethi shettigar|

Updated on:Mar 12, 2022 | 8:29 PM

Share

ಬೆಂಗಳೂರು: ಕೆಎಸ್​ಆರ್​ಟಿಸಿ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಕೆಎಸ್​ಆರ್​ಟಿಸಿ(KSRTC) ಮಂಗಳೂರು ವಿಭಾಗಕ್ಕೆ ಎಕೆಎಎಂ(Azadika Ka Amruth Mahostav )ಪ್ರಶಸ್ತಿ ಸಿಕ್ಕಿದೆ. ಸಿಬ್ಬಂದಿಯ ಆನ್​​​ಲೈನ್ ಇ ನಾಮಿನೇಷನ್ ಪ್ರಕ್ರಿಯೆ ಪೂರ್ಣವಾಗಿದ್ದು, ಆನ್​​​ಲೈನ್ ಇ ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಳಿಸಿದ್ದಕ್ಕೆ ಪ್ರಶಸ್ತಿ(Award) ನೀಡಲಾಗುತ್ತಿದೆ. ಅಖಿಲ ಭಾರತ ಮಟ್ಟದಲ್ಲಿ ಆಯ್ಕೆಯಾದ ಮೊದಲ 3 ಅಗ್ರ ಸ್ಥಾನಗಳಲ್ಲಿ ಒಂದಾಗಿದ್ದ ಮಂಗಳೂರು ವಿಭಾಗಕ್ಕೆ ನಿನ್ನೆ ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪದಾನ ಮಾಡಲಾಗಿದೆ. ವರ್ಚ್ಯುವಲ್ ಮೂಲಕ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಭೂಪೇಂದರ್ ಯಾದವ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮಂಗಳೂರು ಕೆಎಸ್​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ, ‌ಅರುಣ ಎಸ್.ಎನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಇನ್ಮುಂದೆ ಮೊಬೈಲ್‌ ಆ್ಯಪ್​ನಲ್ಲೇ ಸಿಗಲಿದೆ ಬಿಎಂಟಿಸಿ ಬಸ್ ಪಾಸ್

ಬೆಂಗಳೂರು: ಬಿಎಂಟಿಸಿ ಬಸ್​ ಪಾಸ್​ಗಾಗಿ ಇನ್ನೂ ಮುಂದಿನ ದಿನಗಳಲ್ಲಿ ಬಸ್​ ನಿಲ್ದಾಣಕ್ಕೆ ಭೇಟಿ ನೀಡುವ ಅಗತ್ಯ ಇಲ್ಲ. ಇಷ್ಟು ದಿನ ಪ್ರಯಾಣಿಕರ ಪಾಸ್ ಪೇಪರ್ ಫಾರ್ಮಟ್​ನಲ್ಲಿ ಇರುತ್ತಿತ್ತು. ಆದರೆ ಈಗ, ನಿಮ್ಮ ಮೊಬೈಲ್​ನಲ್ಲೇ ಬಸ್ ಪಾಸ್ ಸಿಗಲಿದೆ. ಮೊಬೈಲ್‌ ಫೋನ್‌ನ ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ ಪ್ರಯಾಣಿಸುವುದಕ್ಕೆ ಬಿಎಂಟಿಸಿ ಅವಕಾಶ ನೀಡಿದೆ.

ಖಾಸಗಿ ಸಂಸ್ಥೆ ಟುಮೊಕ್‌ ಕಂಪೆನಿಯ ಸಹಭಾಗಿತ್ವದಲ್ಲಿ ಮೊಬೈಲ್‌ ಆ್ಯಪ್‌ ಪರಿಚಯ ಮಾಡಿದ್ದು, ಪ್ರಯಾಣಿಕರು ಇನ್ಮುಂದೆ ಬಸ್‌ ನಿಲ್ದಾಣಗಳಿಗೆ ಭೇಟಿ ನೀಡಿ ಪಾಸ್‌ ಖರೀದಿಸುವ ಅಗತ್ಯವಿಲ್ಲ. ವೊಲ್ವೋ ಬಸ್‌ಗಳ ನಿರ್ವಾಹಕರಿಗೆ ಇಟಿಎಂ ಮಿಷನ್‌ ಇರುತ್ತದೆ. ಅದರಲ್ಲಿ ಮೊಬೈಲ್‌ನಲ್ಲಿನ ಕ್ಯುಆರ್ ಕೋಡ್‌ ಸ್ಕ್ಯಾನ್‌ ಮಾಡಬಹುದು. ಪ್ರಯಾಣಿಕರಿಗೆ ಸಮಯ ಉಳಿಸಲು ಬಿಎಂಟಿಸಿ ವತಿಯಿಂದ ಹೊಸ ಪ್ರಯತ್ನ ನಡೆದಿದೆ. ಮುಂದಿನ ದಿನಗಳಲ್ಲಿ ಈ ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ಬಿಎಂಟಿಸಿ ತಿಳಿಸಿದೆ.

ಇದನ್ನೂ ಓದಿ:

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ನೀಡಲು ಕೆಎಸ್ಆರ್​ಟಿಸಿ ನಿರ್ಧಾರ

ಇನ್ಮುಂದೆ ಮೊಬೈಲ್‌ ಆ್ಯಪ್​ನಲ್ಲೇ ಸಿಗಲಿದೆ ಬಿಎಂಟಿಸಿ ಬಸ್ ಪಾಸ್; ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ ಪ್ರಯಾಣಿಸುವುದಕ್ಕೆ ಅವಕಾಶ

Published On - 8:18 pm, Sat, 12 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ