AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alcohol Prices: ಅಬಕಾರಿ ಸುಂಕ ಹೆಚ್ಚಳ; ಮದ್ಯದ ದರ ಪರಿಷ್ಕರಿಸಲಿವೆ ಬೆಂಗಳೂರಿನ ಪಬ್, ಬಾರ್​​ಗಳು

ಬಜೆಟ್​ನಲ್ಲಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು, ಬಿಯರ್ ಮೇಲಿನ ಸುಂಕವನ್ನು ಶೇ 10ರಷ್ಟು ಹೆಚ್ಚಿಸಲಾಗಿತ್ತು.

Alcohol Prices: ಅಬಕಾರಿ ಸುಂಕ ಹೆಚ್ಚಳ; ಮದ್ಯದ ದರ ಪರಿಷ್ಕರಿಸಲಿವೆ ಬೆಂಗಳೂರಿನ ಪಬ್, ಬಾರ್​​ಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 21, 2023 | 4:09 PM

Share

ಬೆಂಗಳೂರು, ಜುಲೈ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ್ದ ಬಜೆಟ್​​ನಲ್ಲಿ ಮದ್ಯದ ಮೇಲೆ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಳ (Excise Duty Hike) ಮಾಡಿದ್ದು, ಬಿಯರ್ ಮೇಲೆ ಶೇ 10ರಷ್ಟು ಹೆಚ್ಚಿಸಿದ್ದರು. ಇದು ಗುರುವಾರ ಜಾರಿಗೆ ಬಂದೆ. ಸುಂಕ ಹೆಚ್ಚಳದ ನಂತರ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲೀಕರು ಮದ್ಯದ ಬೆಲೆ ಪರಿಷ್ಕರಿಸಲು (Liquor prices) ಮುಂದಾಗಿದ್ದಾರೆ. ಆಲ್ಕೋಹಾಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳಕ್ಕೆ ಸಂಬಂಧಿಸಿ ಜುಲೈ 18ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ನಂತರ ಬಾರ್ ಹಾಗೂ ಪಬ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಭಾರತದಲ್ಲಿ ತಯಾರಾಗುವ ವಿದೇಶಿ ಬ್ರಾಂಡ್​​ ಮದ್ಯಕ್ಕೆ (IMFL) ಸಂಬಂಧಿಸಿದ ಎಲ್ಲಾ 18 ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 20 ರಷ್ಟು ಹೆಚ್ಚಿಸುವುದಾಗಿ ಜುಲೈ 7ರಂದು ಮಂಡಿಸಿದ್ದ ಬಜೆಟ್​​​ನಲ್ಲಿ ಸಿದ್ದರಾಮಯ್ಯ ಘೋಷಿಸಿದ್ದರು. ಇದಲ್ಲದೇ ರಾಜ್ಯದಲ್ಲಿ ಬಿಯರ್ ಮೇಲಿನ ಸುಂಕ ಶೇ 10ರಷ್ಟು ಏರಿಕೆ ಮಾಡುವುದಾಗಿ ಘೋಷಿಸಿದ್ದರು.

ಹೆಚ್ಚುವರಿ ಅಬಕಾರಿ ಸುಂಕದ ಹೆಚ್ಚಳದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಾರ್ಚ್ 31, 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಹೆಚ್ಚುವರಿಯಾಗಿ 36,000 ಕೋಟಿ ರೂ. ಅಬಕಾರಿ ಸುಂಕ ಸಂಗ್ರಹಿಸಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Liquor Price in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದ ಮತದಾರರಿಗೆ ಐದು ಉಚಿತ ಗ್ಯಾರಂಟಿಗಳ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವು ಅವುಗಳನ್ನು ಜಾರಿಗೆ ತರಲು ಹೊರಟಿರುವುದರಿಂದ ಅದಕ್ಕಾಗಿ ಆದಾಯ ಕ್ರೂಡೀಕರಣಕ್ಕೆ ಮದ್ಯದ ಮೇಲಿನ ಅಬಕಾರಿ ಸುಂಕ ಹಚ್ಚಳದ ಮೊರೆ ಹೋಗಿದೆ.

ಬಜೆಟ್ ಮಂಡನೆಗೂ ಮುನ್ನವೇ ಮದ್ಯದ ಬೆಲೆಯಲ್ಲಿ ಏರಿಕೆಯಾಗಲಿರುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ