AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alcohol Prices: ಅಬಕಾರಿ ಸುಂಕ ಹೆಚ್ಚಳ; ಮದ್ಯದ ದರ ಪರಿಷ್ಕರಿಸಲಿವೆ ಬೆಂಗಳೂರಿನ ಪಬ್, ಬಾರ್​​ಗಳು

ಬಜೆಟ್​ನಲ್ಲಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು, ಬಿಯರ್ ಮೇಲಿನ ಸುಂಕವನ್ನು ಶೇ 10ರಷ್ಟು ಹೆಚ್ಚಿಸಲಾಗಿತ್ತು.

Alcohol Prices: ಅಬಕಾರಿ ಸುಂಕ ಹೆಚ್ಚಳ; ಮದ್ಯದ ದರ ಪರಿಷ್ಕರಿಸಲಿವೆ ಬೆಂಗಳೂರಿನ ಪಬ್, ಬಾರ್​​ಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jul 21, 2023 | 4:09 PM

ಬೆಂಗಳೂರು, ಜುಲೈ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ್ದ ಬಜೆಟ್​​ನಲ್ಲಿ ಮದ್ಯದ ಮೇಲೆ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಳ (Excise Duty Hike) ಮಾಡಿದ್ದು, ಬಿಯರ್ ಮೇಲೆ ಶೇ 10ರಷ್ಟು ಹೆಚ್ಚಿಸಿದ್ದರು. ಇದು ಗುರುವಾರ ಜಾರಿಗೆ ಬಂದೆ. ಸುಂಕ ಹೆಚ್ಚಳದ ನಂತರ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲೀಕರು ಮದ್ಯದ ಬೆಲೆ ಪರಿಷ್ಕರಿಸಲು (Liquor prices) ಮುಂದಾಗಿದ್ದಾರೆ. ಆಲ್ಕೋಹಾಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳಕ್ಕೆ ಸಂಬಂಧಿಸಿ ಜುಲೈ 18ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ನಂತರ ಬಾರ್ ಹಾಗೂ ಪಬ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಭಾರತದಲ್ಲಿ ತಯಾರಾಗುವ ವಿದೇಶಿ ಬ್ರಾಂಡ್​​ ಮದ್ಯಕ್ಕೆ (IMFL) ಸಂಬಂಧಿಸಿದ ಎಲ್ಲಾ 18 ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 20 ರಷ್ಟು ಹೆಚ್ಚಿಸುವುದಾಗಿ ಜುಲೈ 7ರಂದು ಮಂಡಿಸಿದ್ದ ಬಜೆಟ್​​​ನಲ್ಲಿ ಸಿದ್ದರಾಮಯ್ಯ ಘೋಷಿಸಿದ್ದರು. ಇದಲ್ಲದೇ ರಾಜ್ಯದಲ್ಲಿ ಬಿಯರ್ ಮೇಲಿನ ಸುಂಕ ಶೇ 10ರಷ್ಟು ಏರಿಕೆ ಮಾಡುವುದಾಗಿ ಘೋಷಿಸಿದ್ದರು.

ಹೆಚ್ಚುವರಿ ಅಬಕಾರಿ ಸುಂಕದ ಹೆಚ್ಚಳದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಾರ್ಚ್ 31, 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಹೆಚ್ಚುವರಿಯಾಗಿ 36,000 ಕೋಟಿ ರೂ. ಅಬಕಾರಿ ಸುಂಕ ಸಂಗ್ರಹಿಸಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Liquor Price in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದ ಮತದಾರರಿಗೆ ಐದು ಉಚಿತ ಗ್ಯಾರಂಟಿಗಳ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವು ಅವುಗಳನ್ನು ಜಾರಿಗೆ ತರಲು ಹೊರಟಿರುವುದರಿಂದ ಅದಕ್ಕಾಗಿ ಆದಾಯ ಕ್ರೂಡೀಕರಣಕ್ಕೆ ಮದ್ಯದ ಮೇಲಿನ ಅಬಕಾರಿ ಸುಂಕ ಹಚ್ಚಳದ ಮೊರೆ ಹೋಗಿದೆ.

ಬಜೆಟ್ ಮಂಡನೆಗೂ ಮುನ್ನವೇ ಮದ್ಯದ ಬೆಲೆಯಲ್ಲಿ ಏರಿಕೆಯಾಗಲಿರುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು