AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 11 ರಿಂದ 14ರ ವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ; ವಿವರ ಇಲ್ಲಿದೆ

ಏಪ್ರಿಲ್ 13, 14 ರಂದು ಮುತ್ಯಾಲಮ್ಮ ದೇವಿ ರಥೋತ್ಸವ ಹಿನ್ನೆಲೆ ಭಾರತೀನಗರ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ.

ಏಪ್ರಿಲ್ 11 ರಿಂದ 14ರ ವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ; ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 10, 2022 | 4:53 PM

Share

ಬೆಂಗಳೂರು: ಕೋದಂಡರಾಮಸ್ವಾಮಿ ಪಲ್ಲಕ್ಕಿ ಉತ್ಸವ ಹಿನ್ನೆಲೆ ಏಪ್ರಿಲ್ 11, 12 ರಂದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. 2 ದಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಆಗಿರಲಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ. ಅಲ್ಲದೆ, ಏಪ್ರಿಲ್ 13, 14 ರಂದು ಮುತ್ಯಾಲಮ್ಮ ದೇವಿ ರಥೋತ್ಸವ ಹಿನ್ನೆಲೆ ಭಾರತೀನಗರ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಪೂರ್ವ ವಿಭಾಗದ ಭಾರತೀನಗರ, ಕಮರ್ಷಿಯಲ್ ಸ್ಟ್ರೀಟ್, ಪುಲಿಕೇಶಿ ನಗರ, ಶಿವಾಜಿನಗರ, ಡಿಜೆ ಹಳ್ಳಿ ಸೇರಿದಂತೆ ಉತ್ತರ ವಿಭಾಗದ ಜೆ.ಸಿ.ನಗರ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 13, 14 ರಂದು ಮದ್ಯ ಮಾರಾಟ ನಿಷೇಧ ಇರಲಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಆದೇಶ ನೀಡಿದ್ದಾರೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿರುವ ಘಟನೆಗಳು ನಡೆಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನಿರಬಹುದು?

* ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ. * ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ. * ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ. * ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ. * ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಇದನ್ನೂ ಓದಿ: ದಾವಣಗೆರೆಯಲ್ಲಿ ಮದ್ಯ ಸೇವನೆಗೆ ಹಣ ಕೊಡದ ತಂದೆಯನ್ನೇ ಕೊಲೆ ಮಾಡಿದ ಮಗ! ಆರೋಪಿ ಅರೆಸ್ಟ್

ಇದನ್ನೂ ಓದಿ: ಕರ್ನಾಟಕದ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ

Published On - 4:40 pm, Sun, 10 April 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್