AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ KSRTC ಬಸ್​​ ಮೇಲೆ ಕಲ್ಲು ತೂರಾಟ: ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಗೃಹ ಸಚಿವ ಸೂಚನೆ

ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರಕ್ಕೆ ಪೊಲೀಸ್​ ಅಧಿಕಾರಿಗಳಿಗೆ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ KSRTC ಬಸ್​​ ಮೇಲೆ ಕಲ್ಲು ತೂರಾಟ: ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಗೃಹ ಸಚಿವ ಸೂಚನೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Nov 26, 2022 | 3:01 PM

Share

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ (border) ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ KSRTC ಬಸ್​​ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕರ್ನಾಟಕದಲ್ಲಿಯೂ ಮಹಾರಾಷ್ಟ್ರ ಬಸ್​ಗಳನ್ನು ತಡೆದು ಪ್ರತಿಭಟನೆ ಮಾಡಲಾಗಿದೆ. ಈ ಎಲ್ಲ ಅಹಿತಕರ ಘಟನೆಗಳ ಕುರಿತಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರಕ್ಕೆ ಪೊಲೀಸ್​ ಅಧಿಕಾರಿಗಳಿಗೆ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ದೂರವಾಣಿ ಮೂಲಕ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ್ದು, ಶಾಂತಿ ಕಾಪಾಡಲು ತೆಗೆದುಕೊಂಡ ಕ್ರಮ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಶೀಘ್ರವೇ ಎರಡು ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡುವುದಾಗಿ ಹೇಳಿದರು.

ಶರದ್ ಪವಾರ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ  

ಈ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಪವಾರ್​ ಗಡಿ ವಿವಾದ ಇಟ್ಟುಕೊಂಡೇ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಬಗ್ಗೆ ಮೊದಲಿನಿಂದಲೂ ಶರದ್ ಪವಾರ್​ಗೆ ಸೆಳೆತವಿದೆ. ಈ ಹಿಂದೆಯೂ ಅದು ಕೈಗೂಡಿಲ್ಲ, ಈಗಲೂ ಕೈಗೂಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದರು. ನಿಪ್ಪಾಣಿ, ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಬಿಟ್ಟು‌ಕೊಡಲಿ ಎಂದು ಶರತ್ ಪವಾರ್ ಕೇಳಿದ್ದರು. ರಾಜ್ಯದ ಒಂದಿಂಚೂ ಭೂಮಿಯನ್ನು ಮಾಹಾರಾಷ್ಟ್ರಕ್ಕೆ ಬಿಟ್ಟುಕೊಡಲ್ಲ. ಬಹುದಿನಗಳ ಗಡಿ ವಿಚಾರ ಈಗ ಸುಪ್ರೀಂಕೋರ್ಟ್​​ ಮುಂದಿದೆ. ನಮ್ಮ ರಾಜ್ಯ ಸರ್ಕಾರ ಹಿರಿಯ ವಕೀಲರಿಗೆ ಜವಾಬ್ದಾರಿ ವಹಿಸಿದೆ. ಗಡಿ ವಿಚಾರವಾಗಿ ಸರ್ವಪಕ್ಷದ ಸಭೆಯಲ್ಲೂ ಸಹ ಕರೆಯಲಾಗಿದೆ. ರಾಜ್ಯದ ನೆಲ, ಜನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಿಡಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಈ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ್ದು, ಮುಂದಿನ ಚುನಾವಣೆಗೆ ಮಹಾರಾಷ್ಟ್ರದವರಿಗೆ ಗಡಿ ಕ್ಯಾತೆ ಬೇಕು. ಬಿಜೆಪಿಯವರಿಗೆ ಜನರ ಬಳಿ ಹೋಗಲು ವಿಷಯ, ಸರಕು ಇಲ್ಲ. ಹೀಗಾಗಿ ಗಡಿ ತಗಾದೆ ತೆಗೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದರು. ಜನರ ನೆಮ್ಮದಿ ಕೆಡಿಸಿ ಧರ್ಮ ವಿಚಾರ ಇಟ್ಕೊಂಡು ಹೋಗ್ತೀರಾ? ಗೋಡಂಬಿ, ಬಾದಾಮಿ ಕೊಟ್ಟು ಕಳಿಸಲು ಸರ್ವಪಕ್ಷ ಸಭೆ ಯಾಕೆ ಎಂದು ಪ್ರಶ್ನಿಸಿದರು. ಎರಡೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ, ಅಲ್ಲಿ ಈ ಬಗ್ಗೆ ಮಾತಾಡಿ. ಸರ್ವಪಕ್ಷಗಳ ಸಭೆ ಕರೆದು ಏನು ಮಾಡುತ್ತೀರಿ. ಬೆಳಗಾವಿ ಮಹಾರಾಷ್ಟ್ರದಲ್ಲಿ ಇದ್ದರೇನು, ಕರ್ನಾಟಕದಲ್ಲಿ ಇದ್ದರೇನು? ನಾವೆಲ್ಲರೂ ಭಾರತೀಯರು ಎನ್ನುತ್ತೀರಲ್ಲವೇ. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಹೊರಟಿದ್ದೀರಲ್ಲ ಇದನ್ನು ಹೇಳಿ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:56 pm, Sat, 26 November 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?