AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಮುಸ್ಲಿಮರು, ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌ ಜೊತೆ ಸೇರಲೇಬೇಕು -ಸಚಿವ ಕೆಎಸ್ ಈಶ್ವರಪ್ಪ

ದೇಶದ ಎಲ್ಲಾ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌(RSS)ನೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಎಂದು ಬಿಜೆಪಿಯ ಹಿರಿಯ ನಾಯಕ, ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಹೇಳಿದ್ದಾರೆ.

ಎಲ್ಲ ಮುಸ್ಲಿಮರು, ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌ ಜೊತೆ ಸೇರಲೇಬೇಕು -ಸಚಿವ ಕೆಎಸ್ ಈಶ್ವರಪ್ಪ
ಕೆ ಎಸ್​ ಈಶ್ವರಪ್ಪ
TV9 Web
| Edited By: |

Updated on: Mar 24, 2022 | 8:14 PM

Share

ಬೆಂಗಳೂರು: ಹಿಜಾಬ್(Hijab) ತೀರ್ಪಿನ ನಂತರ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಮತ್ತೊಮ್ಮೆ ಸಂಘರ್ಷಗಳು ಶುರುವಾಗುವಂತಹ ಸೂಚನೆಗಳನ್ನು ನೀಡುವಂತಿವೆ. ಏಟಿಗೆ ಎದುರೇಟಿನಂತೆ ಒಂದಲ್ಲಾ ಒಂದು ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ರಾಜಕಾರಣಿಗಳ ಹೇಳಿಕೆಗಳು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯುವಂತೆ ಕಂಡು ಬರುತ್ತಿದೆ. ದೇಶದ ಎಲ್ಲಾ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಮುಂದೊಂದು ದಿನ ಆರ್‌ಎಸ್‌ಎಸ್‌(RSS)ನೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಎಂದು ಬಿಜೆಪಿಯ ಹಿರಿಯ ನಾಯಕ, ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಹೇಳಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ‘ನಮ್ಮ ಆರ್‌ಎಸ್‌ಎಸ್‌’ ಎಂಬ ಪದವನ್ನು ಬಳಸಿದ್ದು, ವಿರೋಧ ಪಕ್ಷದ ಶಾಸಕರು ಕೂಡ ಅದನ್ನೇ ಹೇಳುವ ದಿನ ಬರಲಿದೆ ಎಂದು ಪ್ರಸ್ತಾಪಿಸಿದಾಗ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಈ ಹೇಳಿಕೆ ನೀಡಿದ್ದು ಕಾಂಗ್ರೆಸ್‌ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಬಿಜೆಪಿ ನಾಯಕರು ಮತ್ತು ಸಚಿವರೊಂದಿಗೆ ತಮ್ಮ ವೈಯಕ್ತಿಕ ಸಮೀಕರಣಗಳ ಬಗ್ಗೆ ಮಾತನಾಡುವಾಗ ಕೇಸರಿ ಸಂಘಟನೆಯ ಬಗ್ಗೆ ಪ್ರಸ್ತಾಪಿಸಿದಾಗ ಈ ವಿವಾದ ಪ್ರಾರಂಭವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಪರಸ್ಪರ ಗೌರವ ಕೊಡುವುದು ಪ್ರಮುಖವಾಗಿದೆ ಎಂದು ಹೇಳಿದರು. ನಂತರ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಉಲ್ಲೇಖಿಸಿ, ನೀವು ಒಳ್ಳೆಯ ಮನುಷ್ಯರು, ನಾನು ಕೂಡಾ ಒಳ್ಳೆಯ ಮನುಷ್ಯ. ಒಂದು ವೇಳೆ ನೀವು ಬಿಜೆಪಿ ಅಥವಾ ಆರ್ಎಸ್ಎಸ್ ನವರಾದರೆ ಮಾತ್ರ ನಂತರ ಬರುತ್ತದೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾತುಕತೆಯಲ್ಲಿ ಏಕೆ ಆರ್ಎಸ್ಎಸ್ ಎಳೆದು ತರಲಾಗುತ್ತಿದೆ, ನಮ್ಮ ಆರ್ಎಸ್ಎಸ್ ನ್ನು ಏಕೆ ವಿರೋಧಿಸುತ್ತೀರಾ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಈ ವೇಳೆ ನಾವು ಯಾವುದೇ ಭಾವನೆಗಳನ್ನು ಇಟ್ಟುಕೊಂಡು ಮಾತನಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸುತ್ತಿದ್ದಂತೆ, ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್, ” ಸ್ಪೀಕರ್ ಆಸನದಲ್ಲಿ ಕುಳಿತು ‘ನಮ್ಮ ಆರ್‌ಎಸ್‌ಎಸ್’ ಎಂದು ಹೇಳುತ್ತಿದ್ದೀರಾ?” ಆರ್ ಎಸ್ ಎಸ್ ಪ್ರತಿನಿಧಿ ಎಂಬಂತೆ ಹೇಗೆ ನಮ್ಮ ಆರ್ ಎಸ್ ಎಸ್ ಎಂದು ಹೇಳುತ್ತೀರಾ ಎಂದು ಕಾಗೇರಿ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಗೇರಿ, “ನಮ್ಮ ಆರ್‌ಎಸ್‌ಎಸ್ ಅಲ್ಲದಿದ್ದರೆ ಮತ್ತೇನು? ಹೌದು. ಅದು ನಮ್ಮ ಆರ್‌ಎಸ್‌ಎಸ್. ಆರ್‌ಎಸ್‌ಎಸ್ ನಮ್ಮದು. ಜಮೀರ್, ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ, ಇವತ್ತಲ್ಲದಿದ್ದರೆ ಭವಿಷ್ಯದಲ್ಲಿ, ನಮ್ಮ ದೇಶದಲ್ಲಿ, ಖಂಡಿತವಾಗಿಯೂ ನೀವು ಕೂಡ ಹೇಳಬೇಕು ನಮ್ಮ ಆರ್‌ಎಸ್‌ಎಸ್ಯೆಂದು ಎಂದು ತಿರುಗೇಟು ನೀಡಿದ್ರು. ಇದಕ್ಕೆ ಜಮೀರ್ ಖಾನ್ ಸೇರಿದಂತೆ ಕೆಲ ಕಾಂಗ್ರೆಸ್ ಶಾಸಕರು, ಆ ದಿನ ಬರುವುದಿಲ್ಲ, ಹೇಳುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬ್ರಿಮ್ಸ್‌ ಜಿಲ್ಲಾಸ್ಪತ್ರೆಯಲ್ಲೇ ಎರಡು ಗ್ಯಾಂಗ್‌ ನಡುವೆ ಮಾರಾಮಾರಿ; ಎದೆ ಝಲ್‌ ಎನಿಸುವ ಭೀಬತ್ಸ ದೃಶ್ಯ, ಅಲ್ಲಿ ಆಗಿದ್ದೇನು ಗೊತ್ತಾ?

ದೇಶದಲ್ಲಿ ಒಂದೇ ಧರ್ಮ ಇಲ್ಲ, ಧರ್ಮ ಹೇಳಿದಂತೆ ನಡೆಯಬೇಕು ಅನ್ನೋದು ಸರಿಯಲ್ಲ: ಹಿಜಾಬ್ ಬಗ್ಗೆ ತಿಳಿವಳಿಕೆ ಕೊಟ್ಟ ನ್ಯಾ. ಹೆಗ್ಡೆ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು