AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್; ನಾಳೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಪಕರಣಗಳು ಹಸ್ತಾಂತರ

ಸರಕಾರಿ ಶಾಲೆಗಳು ಹಾಗೂ ಅಂಗನವಾಡಿಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಮ್ಮಿಯಿಲ್ಲದಂತೆ ಅತ್ಯುತ್ತಮ ಶಿಕ್ಷಣ ನೀಡುವಂತಾಗಬೇಕು. ಅಲ್ಲದೆ, ಕೊರೊನಾ ಸಂಕಷ್ಟದ ಕಾಲದಲ್ಲಿ ಆನ್​ಲೈನ್​ ಶಿಕ್ಷಣವೇ ಪ್ರಧಾನವಾಗಿದೆ.

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್; ನಾಳೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಪಕರಣಗಳು ಹಸ್ತಾಂತರ
ಸರಕಾರಿ ಶಾಲೆಗಳು ಸ್ಮಾರ್ಟ್ ಆಗಲಿವೆ
TV9 Web
| Updated By: sandhya thejappa|

Updated on: Jan 09, 2022 | 2:17 PM

Share

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಆಗಲಿವೆ. ರಾಜ್ಯದಲ್ಲೆ ಪ್ರಪ್ರಥಮವಾಗಿ ಒಂದು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಉಪಕರಣಗಳನ್ನು ಹೊಂದುವ ಹೆಗ್ಗಳಿಕೆಗೆ ಪಾತ್ರವಾಗಲಿವೆ. ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ ಜೆ ಜಾರ್ಜ್ ಅವರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಆಗಿವೆ. ಕೆ ಜೆ ಜಾರ್ಜ್ ಅವರು ತಮ್ಮ ಸಿಎಸ್ಆರ್ ನಿಧಿಯನ್ನು ಬಳಸಿಕೊಂಡು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ (28) ಸರಕಾರಿ ಶಾಲೆಗಳಿಗೂ ಸ್ಮಾರ್ಟ್ ಕ್ಲಾಸ್ ಉಪಕರಣಗಳನ್ನು ಒದಗಿಸಿದ್ದಾರೆ.

ನಾಳೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಉಪಕರಣಗಳ ಹಸ್ತಾಂತರ ನನ್ನ ಕ್ಷೇತ್ರದ ಸರಕಾರಿ ಶಾಲೆಗಳು ಹಾಗೂ ಅಂಗನವಾಡಿಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಮ್ಮಿಯಿಲ್ಲದಂತೆ ಅತ್ಯುತ್ತಮ ಶಿಕ್ಷಣ ನೀಡುವಂತಾಗಬೇಕು. ಅಲ್ಲದೆ, ಕೊರೊನಾ ಸಂಕಷ್ಟದ ಕಾಲದಲ್ಲಿ ಆನ್​ಲೈನ್​ ಶಿಕ್ಷಣವೇ ಪ್ರಧಾನವಾಗಿದೆ. ಈ ಶಿಕ್ಷಣದಿಂದ ಸರಕಾರಿ ಶಾಲೆಯ ಮಕ್ಕಳು ವಂಚಿತರಾಗಬಾರದು ಎಂದು ಕೆ ಜೆ ಜಾರ್ಜ್ ಅಭಿಪ್ರಾಯಪಟ್ಟರು.

ಹೊಸ ತಂತ್ರಜ್ಞಾನ ಬಳಸಿಕೊಂಡು ನೀಡಲಾಗುವ ಶಿಕ್ಷಣದಿಂದ ವಿದ್ಯಾರ್ಥಿಗಳು ಇನ್ನು ಚೆನ್ನಾಗಿ ವಿಷಯಗಳನ್ನು ಅರ್ಥೈಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಯ ಮಕ್ಕಳು ಸ್ಮಾರ್ಟ್ ಶಿಕ್ಷಣ ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ 28 ಸರಕಾರಿ ಶಾಲೆಗಳಿಗೂ ಸ್ಮಾರ್ಟ್ ಶಿಕ್ಷಣ ನೀಡುವ ಉಪಕರಣಗಳನ್ನು ನೀಡಲಾಗುತ್ತಿದೆ. ನನ್ನ ಒಡೆತನದ ಕಂಪನಿಯ ಸಿಎಸ್ಆರ್ ನಿಧಿಯನ್ನು ಇದಕ್ಕಾಗಿ ಬಳಸಿಕೊಳ್ಳಲಾಗಿದೆ ಎಂದು ಶಾಸಕರಾದ ಕೆ ಜೆ ಜಾರ್ಜ್ ತಿಳಿಸಿದರು.

ನಾಳೆ ಬಾಣಸವಾಡಿಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಪಕರಣಗಳನ್ನು ಹಸ್ತಾಂತರಿಸಲಾಗುತ್ತದೆ.

ಇದನ್ನೂ ಓದಿ

Virat Kohli: ಒಂದು ಇನ್​ಸ್ಟಾಗ್ರಾಮ್ ಪೋಸ್ಟ್​ಗೆ ವಿರಾಟ್ ಕೊಹ್ಲಿ ಪಡೆಯುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ

ದೇಶದಲ್ಲಿ ಏರಿಕೆಯಾಗುತ್ತಲೇ ಇರುವ ಕೊವಿಡ್​ 19 ಕೇಸ್​ಗಳು; ಇಂದು ಸಂಜೆ 4.30ಕ್ಕೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?