AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ಟ್ರಾಫಿಕ್​ ಪೊಲೀಸ್​ ಹಲ್ಲೆ ಆರೋಪ

ವಿಜಯನಗರದ ಟ್ರಾಫಿಕ್ ಪೊಲೀಸರು ಲಂಚಕ್ಕಾಗಿ ಒತ್ತಾಯಿಸಿ ಬೈಕ್ ಸವಾರ ಈಶ್ವರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮದ್ಯಪಾನದ ಆರೋಪದ ಮೇಲೆ 10,000 ರೂ. ದಂಡ ವಿಧಿಸಿದ ಪೊಲೀಸರು, 3,000 ರೂ. ಲಂಚಕ್ಕೆ ಒತ್ತಾಯಿಸಿದ್ದರು. ಈಶ್ವರ್ ಲಂಚ ನೀಡಲು ನಿರಾಕರಿಸಿದಾಗ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಬೆಂಗಳೂರು: ಹಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ಟ್ರಾಫಿಕ್​ ಪೊಲೀಸ್​ ಹಲ್ಲೆ ಆರೋಪ
ಪ್ರಾತಿನಿಧಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 18, 2025 | 11:57 AM

Share

ಬೆಂಗಳೂರು, ಮಾರ್ಚ್​ 17: ಹಣ್ಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ವಿಜಯನಗರ ಟ್ರಾಫಿಕ್​ ಪೊಲೀಸ್​ (Traffic Police) ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈಶ್ವರ್​ ಹಲ್ಲೆಗೊಳಗಾದ ಬೈಕ್​ ಸವಾರ. “ಶುಕ್ರವಾರ ಮಾರ್ಚ್ 14ರಂದು ರಾತ್ರಿ ನಾನು (ಈಶ್ವರ್) ಜಿಟಿ ಮಾಲ್ ಬಳಿ ಆರ್​ಎಕ್ಸ್ ಬೈಕ್​ ಮೇಲೆ ಹೋಗುತ್ತಿದ್ದಾಗ, ವಿಜಯನಗರ ಟ್ರಾಫಿಕ್ ಪೊಲೀಸರು ನಿಲ್ಲಿಸಿ, ತಪಾಸಣೆ ನಡೆಸಿದರು. ಈಶ್ವರ್​ ಅವರು ಮದ್ಯ ಸೇವಿಸಿರುವುದು ಧೃಡವಾಗಿದೆ. ಆಗ, ಟ್ರಾಫಿಕ್​ ಪೊಲೀಸರು 10 ಸಾವಿರ ರೂ. ದಂಡ ಆಗುತ್ತೆ, ಅದರ ಬದಲಿಗೆ 3 ಸಾವಿರ ರೂ. ನೀಡಿದರೆ ಬಿಟ್ಟು ಕಳುಹಿಸುತ್ತೇವೆ ಎಂದರು. ಆಗ ನಾನು 3 ಸಾವಿರ ರೂಪಾಯಿ ಫೋನ್ ಪೇ ಮಾಡಲು ಮುಂದಾದೆ ಆದರೆ, ಟ್ರಾಫಿಕ್​ ಪೊಲೀಸರು ಕ್ಯಾಶ್​ ನೀಡುವಂತೆ ಹೇಳಿದರು. ಆಗ ನಾನು, ಕ್ಯಾಶ್ ಇಲ್ಲ, 10 ಸಾವಿರ ರೂ. ದಂಡವನ್ನು ಕೋರ್ಟ್​ನಲ್ಲಿ ಕಟ್ಟುತ್ತೇನೆ ಎಂದೆ. ಅದಕ್ಕೆ ಟ್ರಾಫಿಕ್ ಪೊಲೀಸರು ನನ್ನ ಗಾಡಿ ಸೀಜ್ ಮಾಡಿದರು.”

“ನಂತರ, ಹೊಯ್ಸಳ ಕರೆಸಿ, ನನ್ನನ್ನು ಗೋವಿಂದರಾಜ ನಗರ ಠಾಣೆಗೆ ಕರೆದುಕೊಂಡು ಹೋದರು. ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತೀಯಾ ಅಂತ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದರು. ಬಳಿಕ ನಾನು, ಕೋರ್ಟ್​ನಲ್ಲಿ ದಂಡ ಪಾವತಿ‌ ಮಾಡುತ್ತೇನೆ ಅಂತ ಹೇಳಿ ಮನೆಗೆ ಹೋದೆ. ಮಾರ್ಚ್ 15ರಂದು ಕೋರ್ಟ್ ಹೋಗಿ‌ ಬಾಕಿ ದಂಡ ಸೇರಿ 13 ಸಾವಿರ ಪಾವತಿ‌ ಮಾಡಿದೆ. ದಂಡ ಪಾವತಿ ರಶೀದಿಯೊಂದಿಗೆ ಬೈಕ್ ಕೊಡುವಂತೆ ನನ್ನ ಸ್ನೇಹಿತ ಮಾರ್ಚ್ 16ರಂದು ಠಾಣೆಗೆ‌ ಹೋಗಿದ್ದರು.”

“ಬಳಿಕ, ಪೊಲೀಸರು ನನ್ನನ್ನು ವಿಜಯನಗರ ಠಾಣೆಗೆ ಕರೆಸಿಕೊಂಡರು. ಠಾಣೆಯಲ್ಲಿ ಎಸ್ಐ ಶಾಂತರಾಮ್ ಹಾಗೂ ಸಿಬ್ಬಂದಿ ಸಿದ್ಧಿಕ್‌ ನನ್ನ ಮೇಲೆ ಹಲ್ಲೆ ಮಾಡಿದರು. ನಮಗೆ 3 ಸಾವಿರ ಕೊಟ್ಟಿದ್ರೆ 10 ಸಾವಿರ ಉಳಿತಿತಲ್ವಾ ಅಂತ ಹೇಳಿ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೂಟ್​ನಿಂದ ಒದ್ದು ಥಳಿಸಿದ್ದಾರೆ” ಎಂದು ಈಶ್ವರ್​ ಆರೋಪ ಮಾಡಿದ್ದಾರೆ.”

ಇದನ್ನೂ ಓದಿ
Image
ಸ್ವಿಟ್ಜರ್ಲೆಂಡ್​ಗೆ ಹೋಗ್ತೇನೆಂದು ದುಬೈ ಅಧಿಕಾರಿಗಳಿಗೆ ಯಾಮಾರಿಸಿದ್ದ ರನ್ಯಾ
Image
ಬಿಜೆಪಿ ಮುಖಂಡನ ವಿಡಿಯೋ: 20 ಲಕ್ಷಕ್ಕೆ ಡಿಮ್ಯಾಂಡ್‌, ಮಾಯಾಂಗನೆ ಲಾಕ್
Image
ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಸಾವು
Image
ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿದ ಫೇಕ್ ನ್ಯೂಸ್ ಹಾವಳಿ: ಬೆಂಗಳೂರು, ಉತ್ತರ ಕನ್ನಡ ಮುಂಚೂಣಿಯಲ್ಲಿ

ಹಲ್ಲೆ ಮಾಡುತ್ತಿದ್ದಂತೆ ಪೊಲೀಸ್ ಠಾಣೆಯಲ್ಲಿ ಮೂರ್ಚೆ ಹೋದೆ. ಬಳಿಕ, ಸ್ನೇಹಿತರು ನನ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರು ಎಂದು ಈಶ್ವರ್​ ವಿಡಿಯೋದಲ್ಲಿ ಹೇಳಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:08 pm, Mon, 17 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್