Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ಟ್ರಾಫಿಕ್​ ಪೊಲೀಸ್​ ಹಲ್ಲೆ ಆರೋಪ

ವಿಜಯನಗರದ ಟ್ರಾಫಿಕ್ ಪೊಲೀಸರು ಲಂಚಕ್ಕಾಗಿ ಒತ್ತಾಯಿಸಿ ಬೈಕ್ ಸವಾರ ಈಶ್ವರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮದ್ಯಪಾನದ ಆರೋಪದ ಮೇಲೆ 10,000 ರೂ. ದಂಡ ವಿಧಿಸಿದ ಪೊಲೀಸರು, 3,000 ರೂ. ಲಂಚಕ್ಕೆ ಒತ್ತಾಯಿಸಿದ್ದರು. ಈಶ್ವರ್ ಲಂಚ ನೀಡಲು ನಿರಾಕರಿಸಿದಾಗ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಬೆಂಗಳೂರು: ಹಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ಟ್ರಾಫಿಕ್​ ಪೊಲೀಸ್​ ಹಲ್ಲೆ ಆರೋಪ
ಪ್ರಾತಿನಿಧಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Mar 18, 2025 | 11:57 AM

ಬೆಂಗಳೂರು, ಮಾರ್ಚ್​ 17: ಹಣ್ಣಕ್ಕೆ ಒತ್ತಾಯಿಸಿ ಬೈಕ್​ ಸವಾರನ ಮೇಲೆ ವಿಜಯನಗರ ಟ್ರಾಫಿಕ್​ ಪೊಲೀಸ್​ (Traffic Police) ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈಶ್ವರ್​ ಹಲ್ಲೆಗೊಳಗಾದ ಬೈಕ್​ ಸವಾರ. “ಶುಕ್ರವಾರ ಮಾರ್ಚ್ 14ರಂದು ರಾತ್ರಿ ನಾನು (ಈಶ್ವರ್) ಜಿಟಿ ಮಾಲ್ ಬಳಿ ಆರ್​ಎಕ್ಸ್ ಬೈಕ್​ ಮೇಲೆ ಹೋಗುತ್ತಿದ್ದಾಗ, ವಿಜಯನಗರ ಟ್ರಾಫಿಕ್ ಪೊಲೀಸರು ನಿಲ್ಲಿಸಿ, ತಪಾಸಣೆ ನಡೆಸಿದರು. ಈಶ್ವರ್​ ಅವರು ಮದ್ಯ ಸೇವಿಸಿರುವುದು ಧೃಡವಾಗಿದೆ. ಆಗ, ಟ್ರಾಫಿಕ್​ ಪೊಲೀಸರು 10 ಸಾವಿರ ರೂ. ದಂಡ ಆಗುತ್ತೆ, ಅದರ ಬದಲಿಗೆ 3 ಸಾವಿರ ರೂ. ನೀಡಿದರೆ ಬಿಟ್ಟು ಕಳುಹಿಸುತ್ತೇವೆ ಎಂದರು. ಆಗ ನಾನು 3 ಸಾವಿರ ರೂಪಾಯಿ ಫೋನ್ ಪೇ ಮಾಡಲು ಮುಂದಾದೆ ಆದರೆ, ಟ್ರಾಫಿಕ್​ ಪೊಲೀಸರು ಕ್ಯಾಶ್​ ನೀಡುವಂತೆ ಹೇಳಿದರು. ಆಗ ನಾನು, ಕ್ಯಾಶ್ ಇಲ್ಲ, 10 ಸಾವಿರ ರೂ. ದಂಡವನ್ನು ಕೋರ್ಟ್​ನಲ್ಲಿ ಕಟ್ಟುತ್ತೇನೆ ಎಂದೆ. ಅದಕ್ಕೆ ಟ್ರಾಫಿಕ್ ಪೊಲೀಸರು ನನ್ನ ಗಾಡಿ ಸೀಜ್ ಮಾಡಿದರು.”

“ನಂತರ, ಹೊಯ್ಸಳ ಕರೆಸಿ, ನನ್ನನ್ನು ಗೋವಿಂದರಾಜ ನಗರ ಠಾಣೆಗೆ ಕರೆದುಕೊಂಡು ಹೋದರು. ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತೀಯಾ ಅಂತ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದರು. ಬಳಿಕ ನಾನು, ಕೋರ್ಟ್​ನಲ್ಲಿ ದಂಡ ಪಾವತಿ‌ ಮಾಡುತ್ತೇನೆ ಅಂತ ಹೇಳಿ ಮನೆಗೆ ಹೋದೆ. ಮಾರ್ಚ್ 15ರಂದು ಕೋರ್ಟ್ ಹೋಗಿ‌ ಬಾಕಿ ದಂಡ ಸೇರಿ 13 ಸಾವಿರ ಪಾವತಿ‌ ಮಾಡಿದೆ. ದಂಡ ಪಾವತಿ ರಶೀದಿಯೊಂದಿಗೆ ಬೈಕ್ ಕೊಡುವಂತೆ ನನ್ನ ಸ್ನೇಹಿತ ಮಾರ್ಚ್ 16ರಂದು ಠಾಣೆಗೆ‌ ಹೋಗಿದ್ದರು.”

“ಬಳಿಕ, ಪೊಲೀಸರು ನನ್ನನ್ನು ವಿಜಯನಗರ ಠಾಣೆಗೆ ಕರೆಸಿಕೊಂಡರು. ಠಾಣೆಯಲ್ಲಿ ಎಸ್ಐ ಶಾಂತರಾಮ್ ಹಾಗೂ ಸಿಬ್ಬಂದಿ ಸಿದ್ಧಿಕ್‌ ನನ್ನ ಮೇಲೆ ಹಲ್ಲೆ ಮಾಡಿದರು. ನಮಗೆ 3 ಸಾವಿರ ಕೊಟ್ಟಿದ್ರೆ 10 ಸಾವಿರ ಉಳಿತಿತಲ್ವಾ ಅಂತ ಹೇಳಿ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೂಟ್​ನಿಂದ ಒದ್ದು ಥಳಿಸಿದ್ದಾರೆ” ಎಂದು ಈಶ್ವರ್​ ಆರೋಪ ಮಾಡಿದ್ದಾರೆ.”

ಇದನ್ನೂ ಓದಿ
Image
ಸ್ವಿಟ್ಜರ್ಲೆಂಡ್​ಗೆ ಹೋಗ್ತೇನೆಂದು ದುಬೈ ಅಧಿಕಾರಿಗಳಿಗೆ ಯಾಮಾರಿಸಿದ್ದ ರನ್ಯಾ
Image
ಬಿಜೆಪಿ ಮುಖಂಡನ ವಿಡಿಯೋ: 20 ಲಕ್ಷಕ್ಕೆ ಡಿಮ್ಯಾಂಡ್‌, ಮಾಯಾಂಗನೆ ಲಾಕ್
Image
ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಸಾವು
Image
ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿದ ಫೇಕ್ ನ್ಯೂಸ್ ಹಾವಳಿ: ಬೆಂಗಳೂರು, ಉತ್ತರ ಕನ್ನಡ ಮುಂಚೂಣಿಯಲ್ಲಿ

ಹಲ್ಲೆ ಮಾಡುತ್ತಿದ್ದಂತೆ ಪೊಲೀಸ್ ಠಾಣೆಯಲ್ಲಿ ಮೂರ್ಚೆ ಹೋದೆ. ಬಳಿಕ, ಸ್ನೇಹಿತರು ನನ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರು ಎಂದು ಈಶ್ವರ್​ ವಿಡಿಯೋದಲ್ಲಿ ಹೇಳಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:08 pm, Mon, 17 March 25

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್