AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿ ವಿರುದ್ಧ ನಿಂದನೆ ಆರೋಪ: ದರ್ಪ ಮೆರೆದ ವಿಡಿಯೋ ಟ್ವೀಟ್ ಮಾಡಿದ ಕಾರು ಚಾಲಕ

ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿ ಓರ್ವರು ಕಾರು ಚಾಲಕ ವಿನಯ್ ರನ್ನು ನಿಂದಿಸಿದ್ದಾರಂತೆ. ಟ್ರಾಫಿಕ್ ಪೊಲೀಸರ ವರ್ತನೆಗೆ ಬೇಸತ್ತ ವಿನಯ್ ತಮ್ಮ ಮೊಬೈಲ್​ನಲ್ಲಿ ಪೊಲೀಸ್ ನಿಂದನೆ ವಿಡಿಯೋ ಸೆರೆಹಿಡಿದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿ ವಿರುದ್ಧ ನಿಂದನೆ ಆರೋಪ: ದರ್ಪ ಮೆರೆದ ವಿಡಿಯೋ ಟ್ವೀಟ್ ಮಾಡಿದ ಕಾರು ಚಾಲಕ
ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿ ವಿರುದ್ಧ ನಿಂದನೆ ಆರೋಪ
TV9 Web
| Edited By: |

Updated on: Jan 02, 2023 | 8:37 AM

Share

ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿ(Traffic Police) ವಿರುದ್ಧ ನಿಂದನೆ ಆರೋಪ ಕೇಳಿ ಬಂದಿದೆ. ಪೊಲೀಸ್ ಸಿಬ್ಬಂದಿಯ ದರ್ಪದ ಬಗೆಗಿನ ವಿಡಿಯೋ ವೈರಲ್(Viral Video) ಆಗಿದೆ. ಕಾರು ಚಾಲಕ ವಿನಯ್​ ಕುಮಾರ್ ಎಂಬುವವರು ಪೊಲೀಸರು ತಮಗೆ ನಿಂದಿಸಿ, ದರ್ಪ ಮೆರೆದ ಬಗ್ಗೆ ಮೊಬೈಲ್​​ನಲ್ಲಿ ವಿಡಿಯೋ ಸೆರೆಹಿಡಿದು ಟ್ವೀಟರ್​ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಆರೋಪ ಮಾಡಿದ್ದಾರೆ.

ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿ ಓರ್ವರು ಕಾರು ಚಾಲಕ ವಿನಯ್ ರನ್ನು ನಿಂದಿಸಿದ್ದಾರಂತೆ. ಅಧಿಕಾರದ ದರ್ಪದಿಂದ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಟ್ರಾಫಿಕ್ ಪೊಲೀಸರ ವರ್ತನೆಗೆ ಬೇಸತ್ತ ವಿನಯ್ ತಮ್ಮ ಮೊಬೈಲ್​ನಲ್ಲಿ ಪೊಲೀಸ್ ನಿಂದನೆ ವಿಡಿಯೋ ಸೆರೆಹಿಡಿದು ಬ್ಯಾಟರಾಯನಪುರ ಪೊಲೀಸರಿಗೆ ಟ್ಯಾಗ್, ಬಿಸಿಪಿ ಸೋಷಿಯಲ್ ಮೀಡಿಯಾ ಟೀಂಗೆ ದೂರನ್ನು ಫಾರ್ವರ್ಡ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ಸಾಮಾಜಿಕ‌‌ ಜಾಲತಾಣಗಳಲ್ಲಿ ಪೊಲೀಸ್ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸ್ತಿರುವ ವಿಡಿಯೋ ವೈರಲ್ ಆಗಿದೆ. Bng Traffic police

ಇದನ್ನೂ ಓದಿ: Bengaluru: ಹೊಸ ವರ್ಷ ಆಚರಣೆ ವೇಳೆ ಎಣ್ಣೆ ಕಿಕ್​; ಬೆಂಗಳೂರಲ್ಲಿ 78 ಡ್ರಂಕ್​ ಆಂಡ್​ ಡ್ರೈವ್​ ಕೇಸ್​ ಬುಕ್​​

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅಪಘಡ

ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ 6.30 ಕ್ಕೆ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಹಿಳೆ ಕೆಳಗೆ ಬಿದ್ದಿದ್ದು  ಅದೃಷ್ಟವಶಾತ್ ರೈಲು ಹಳಿಗೆ ಬೀಳುವುದರಿಂದ ಮಹಿಳೆ ಕೂದಲೆಳೆ ಅಂತರದಿಂದ ಬಚಾವ್ ಆಗಿದ್ದಾರೆ. ಮುಂಬಯಿ ನಾಗರಕೋಯಿಲ್ ರೈಲು ಆಗಮನ ವೇಳೆ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿಳುತ್ತಿದ್ದ 50 ವರ್ಷದ ಮಹಿಳೆಯನ್ನು ಸಿನಿಮೀಯ ಶೈಲಿಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕ ಬಚಾವ್ ಮಾಡಿದ್ದಾರೆ. ಆರ್‌ಪಿಎಫ್ ಪೇದೆ ಆರ್‌ಡಿ ಶೇರಖಾನೆ ಹಾಗೂ ಕಾರ್ಮಿಕನ ಸಾಹಸ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ