ಬಿಬಿಎಂಪಿ ಮಾಡಿದ್ದ ರಸ್ತೆ ಬಂದ್​ ಮಾಡಿರುವ ಆರೋಪ: ಡಿಕೆ ಶಿವಕುಮಾರ್​ಗೆ ಮನವಿ ಸಲ್ಲಿಸಿದ ಲೇಔಟ್​ ಜನರು

ಯಲಹಂಕ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಬೆಳ್ಳಳ್ಳಿಯಲ್ಲಿರುವ ವಿಧಾನಸೌಧ ಲೇಔಟ್​ಗೆ ಬಿಬಿಎಂಪಿ ಮಾಡಿದ್ದ ಹೊಸ ರಸ್ತೆಯನ್ನ ಖಾಸಗಿ ವ್ಯಕ್ತಿ ಬಂದ್​ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಹೀಗಾಗಿ ಕೊಳಚೆ ರಸ್ತೆಯಲ್ಲಿ ಓಡಾಡಲು ಆಗಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ವಿವಾದಕ್ಕೆ ಅಂತ್ಯ ಹಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​​ಗೆ ಮನವಿ ಸಲ್ಲಿಕೆ ಮಾಡಲಾಗಿದೆ.

ಬಿಬಿಎಂಪಿ ಮಾಡಿದ್ದ ರಸ್ತೆ ಬಂದ್​ ಮಾಡಿರುವ ಆರೋಪ: ಡಿಕೆ ಶಿವಕುಮಾರ್​ಗೆ ಮನವಿ ಸಲ್ಲಿಸಿದ ಲೇಔಟ್​ ಜನರು
ಲೇಔಟ್​ಗೆ ಮಾಡಿದ್ದ ರಸ್ತೆ, ಡಿಸಿಎಂ ಡಿ.ಕೆ.ಶಿವಕುಮಾರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jan 07, 2024 | 5:47 PM

ಬೆಂಗಳೂರು, ಜನವರಿ 07: ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ನಗದರಲ್ಲಿ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ನಿಮ್ಮ ಸಹಕಾರ’ ಕಾರ್ಯಕ್ರಮ ಮಾಡಲಾಗುತ್ತಿದೆ. ಸದ್ಯ ಈ ಕಾರ್ಯಕ್ರಮದಲ್ಲಿ ಲೇಔಟ್ (Layout) ಜನರು ತಮ್ಮ ಸಂಕಷ್ಟ ತೊಡಿಕೊಂಡಿದ್ದಾರೆ. ಯಲಹಂಕ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಬೆಳ್ಳಳ್ಳಿಯಲ್ಲಿರುವ ವಿಧಾನಸೌಧ ಲೇಔಟ್​ಗೆ ಬಿಬಿಎಂಪಿ ಮಾಡಿದ್ದ ಹೊಸ ರಸ್ತೆಯನ್ನ ಖಾಸಗಿ ವ್ಯಕ್ತಿ ಬಂದ್​ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಹೀಗಾಗಿ ರಸ್ತೆ ವಿವಾದಕ್ಕೆ ಅಂತ್ಯ ಹಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​​ಗೆ ಮನವಿ ಸಲ್ಲಿಸಿದ್ದಾರೆ.

ಕೊಳಚೆ ನೀರು ಹರಿಯುವ ರಸ್ತೆಯಲ್ಲೇ ಲೇಔಟ್​ ಜನರು ಓಡಾಟುವಂತಾಗಿದೆ. 2014 ರಲ್ಲಿ ಸೈಟ್​ಗಳಿಗೆ ಬಿಡಿಎ ಅನುಮತಿ ನೀಡಿತ್ತು. ಇದೀಗ ಬಿಡಿಎ ಮ್ಯಾಪ್ ಪ್ರಕಾರ ಇದ್ದ ರಸ್ತೆಯ ಜಾಗ ನಮ್ಮದು ಎಂದು ಖಾಸಗಿ ವ್ಯಕ್ತಿ ರಫಿಕ್ ಹೇಳುತ್ತಿದ್ದಾರೆ. ಜಾಗದ ಮೇಲೆ ಕೋರ್ಟ್ ಸ್ಟೇ ತಂದಿದ್ದೇನೆ, ಬೇಲಿ ಹಾಕುತ್ತೇನೆ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕೆ ಕಾನೂನು ತಿದ್ದುಪಡಿ: ಡಿಸಿಎಂ ಡಿಕೆ ಶಿವಕುಮಾರ್

ನಮಗೆ ಓಡಾಡಲು ರಸ್ತೆ ಬೇಕು ಎಂದು ನಿವಾಸಿಗಳು ಹೇಳುತ್ತಿದ್ದಾರೆ. ಆಂಬುಲೆನ್ಸ್, ಸ್ಕೂಲ್ ವ್ಯಾನ್ ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ. ಕೊಳಚೆ ರಸ್ತೆಯಲ್ಲಿ ಓಡಾಡಲು ಆಗಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಪ್ರಕರಣ?

2014 ರಲ್ಲಿ ಬಿಡಿಎ ಅನುಮತಿ ಮೂಲಕ ವಿಧಾನಸೌಧದ 4ನೇ ದರ್ಜೆ ನೌಕರರಿಗೆ ಸೈಟ್ ಹಂಚಿಕೆ ಮಾಡಲಾಗಿದೆ. ಬಳಿಕ 2021 ರಲ್ಲಿ ಲೇ ಔಟ್​ಗೆ ಬಿಬಿಎಂಪಿ ರಸ್ತೆ ನಿರ್ಮಾಣ ಮಾಡಿ ವಿದ್ಯುತ್ ಕಂಬ ಅಳವಡಿಸಿತ್ತು. ಆದರೆ ರಸ್ತೆ ಮಾಡಿದ್ದ ಜಾಗ ನನ್ನದು ಎಂದು ರಫೀಕ್ ಎಂಬ ವ್ಯಕ್ತಿಯಿಂದ ಕಿರಿಕ್​ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಜನಸ್ಪಂದನಾ ಕಾರ್ಯಕ್ರಮ: ಅಂಧ ದಂಪತಿಯ ಮನವಿ ಆಲಿಸಿ ಅವರು ಹೊರಡುವಾಗ ನೋಟುಗಳನ್ನು ನೀಡಿದ ಡಿಕೆ ಶಿವಕುಮಾರ್

ರಸ್ತೆ ಬಂದ್ ಮಾಡಿ ವಿದ್ಯುತ್ ಕಂಬ ತೆರವು ಮಾಡಿರುವ ಆರೋಪ ಕೂಡ ಕೇಳಿಬಂದಿತ್ತು. ಅಧಿಕಾರಿಗಳ ಮೊರೆ ಹೋಗಿದ್ದ ಜನರು ಮತ್ತೆ ರಸ್ತೆ ತೆರೆಸಿದ್ದರು. ಇದೀಗ ಮತ್ತೆ ರಸ್ತೆಗೆ ಮಣ್ಣು ಸುರಿದು ಬಂದ್ ಮಾಡಲಾಗಿದೆ. ಹೈಕೋರ್ಟ್​ನಿಂದ ಸ್ಟೇ ತಂದಿದ್ದೇನೆ. ಬೇಲಿ ಹಾಕುತ್ತೇನೆ ಎನ್ನುತ್ತಿದ್ದಾನೆ. ರಫಿಕ್ ನಡೆಯಿಂದ ಲೇ ಔಟ್ ಜನರು ಕಂಗಾಲಾಗಿದ್ದಾರೆ. ನಮಗೆ ರಸ್ತೆ ಓಪನ್ ಮಾಡಿಸಿ ಎಂದು ಡಿಕೆ.ಶಿವಕುಮಾರ್​ಗೆ ಪತ್ರ ಬರೆಯಲಾಗಿದೆ.

ವರದಿ: ಶಾಂತಮೂರ್ತಿ ಎಂ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:45 pm, Sun, 7 January 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ