ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ; ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ

ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ತಿಲಕ್‌ನಗರ ಪೊಲೀಸರಿಗೆ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ಈ ಪ್ರಕರಣದ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ.

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಆರೋಪ; ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ
ನಿರ್ಮಲಾ ಸೀತಾರಾಮನ್
Follow us
| Updated By: ಆಯೇಷಾ ಬಾನು

Updated on:Sep 28, 2024 | 9:03 AM

ಬೆಂಗಳೂರು, ಸೆ.28: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. FIR ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ: ಯತ್ನಾಳ್​

ತಿಲಕ್‌ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

2019 ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರುಪಾಯಿ ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:03 am, Sat, 28 September 24

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ