ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು

ನಿನ್ನೆಯಿಂದ ವಿಧಾನಸಭೆ ಅಧಿವೇಶನ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ. ಹೌದು, ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ದೂರು ಸಲ್ಲಿಸಿದ್ದಾರೆ.

ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು
ಸಿಎಂ ಸಿದ್ದರಾಮಯ್ಯ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2024 | 3:28 PM

ಬೆಂಗಳೂರು, ಜು.16: ವಿಧಾನಸಭೆ ಕಲಾಪ ನಿನ್ನೆಯಿಂದ ಶುರುವಾಗಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ. 2018-23ರ ಚುನಾವಣೆಯ ಅಫಿಡವಿಟ್​ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ(TJ Abraham) ಅವರು ದೂರು ಸಲ್ಲಿಸಿದ್ದಾರೆ.

ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ

2018ರ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ನೀಡಿದ್ದ ಅಫಿಡವಿಟ್​ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ. ಎಂದು ನಮೂದಿಸಿದ್ದಾರೆ. ಆದರೆ, 2005ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್​​ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್​​ನಲ್ಲಿ ನಮೂದಿಸಿದ್ದಾರೆ.

ಇದನ್ನೂ ಓದಿ:ಯಾವುದೇ ಪ್ರಶ್ನೆ ಕೇಳಿ ಉತ್ತರಿಸಲು ನಾವು ರೆಡಿ, ಚರ್ಚೆ ಇವತ್ತೇ ಕೊನೆಗೊಳ್ಳಲಿ ಎಂದ ಸಿದ್ದರಾಮಯ್ಯ, ಶಿವಕುಮಾರ್

ಇನ್ನು ಮುಡಾದ 14 ಸೈಟ್​ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿ ರೂಪಾಯಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಗೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಅವರು ಎರಡನೇ ದೂರು ಸಲ್ಲಿಸಿದ್ದಾರೆ. ಮುಡಾ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ತಲೆಗೆ ಮತ್ತೊಂದು ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us