AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ಅವ್ಯವಹಾರ ಆರೋಪ: ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್

ಮುರುಘಾ ಮಠದ ಸ್ವಾಮೀಜಿ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆಂಗಳೂರು ಮೆಟ್ರೊಪಾಲಿಟನ್​ ಮ್ಯಾಜಿಸ್ಟ್ರೇಟ್ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.​​

ಆಸ್ತಿ ಅವ್ಯವಹಾರ ಆರೋಪ: ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್
ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ
TV9 Web
| Edited By: |

Updated on: Sep 02, 2022 | 1:27 PM

Share

ಬೆಂಗಳೂರು: ಪೋಕ್ಸೋ ಕೇಸ್ (Pocso Act) ​ನಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ (Shivamurthy Swamiji) ಬಂಧನ ಮಾಡಲಾಗಿದ್ದು, ಸದ್ಯ ಅವರ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವರ ಖಾಸಗಿ ದೂರು ನೀಡಿದ್ದಾರೆ. 8 ಕೋಟಿ ಮೌಲ್ಯದ ಮಠದ ಆಸ್ತಿ 49 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ ಜಮೀನು ಮಾರಾಟ ಮಾಡಲಾಗಿದೆ. ಮಠದ 7 ಎಕರೆ 18 ಗುಂಟೆ ಜಮೀನು ಅಕ್ರಮ ಮಾರಾಟ, ವಂಚನೆ, ವಿಶ್ವಾಸದ್ರೋಹ ಆರೋಪ ಮಾಡಿದ್ದು, ಮುರುಘಾ ಶರಣರ ವಿರುದ್ಧ 2013ರಲ್ಲಿ ಖಾಸಗಿ ದೂರು ದಾಖಲಾಗಿತ್ತು. ಸಮನ್ಸ್ ನೀಡಿದರೂ ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು.

ಹೀಗಾಗಿ ಮುರುಘಾ ಮಠದ ಸ್ವಾಮೀಜಿ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆಂಗಳೂರು ಮೆಟ್ರೊಪಾಲಿಟನ್​ ಮ್ಯಾಜಿಸ್ಟ್ರೇಟ್ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.​​ 2 ವರ್ಷದ ಹಿಂದೆ ಮುರುಘಾಶ್ರೀಗಳ ವಿರುದ್ಧ ಪಂಚಾಕ್ಷರಯ್ಯ ಎಂಬುವರು ದೂರು ನೀಡಿದ್ದರು. ಕೋರ್ಟ್​ಗೆ ಹಾಜರಾಗದೇ ಮುರುಘಾ ಶರಣರು ನಿರ್ಲಕ್ಷ್ಯ ತೋರಿದ್ದರು.

ಎದೆನೋವು ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ:

ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗಳ ಬಂಧನ ಪ್ರಕರಣ ಸಂಬಂಧ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲಾ ಕಾರಾಗೃಹದಿಂದ ಜಿಲ್ಲಾಸ್ಪತ್ರೆಗೆ ಮುರುಘಾಶ್ರೀ ಶಿಫ್ಟ್ ಮಾಡಿದ್ದು, ಹಿರಿಯ ವೈದ್ಯೆ ರೂಪಾ, ಹೆರಿಗೆ ತಜ್ಞ ಡಾ ಶಿವಕುಮಾರ್ ಸೇರಿ ಮೂವರು ವೈದ್ಯರ ನೇತೃತ್ವದಲ್ಲಿ ಶ್ರೀಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇನ್ನೂ ಶ್ರೀಗಳ ಅಡ್ವೋಕೆಟ್ ಉಮೇಶ್​ ಚಿತ್ರದುರ್ಗ ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್​ರಿಂದ ಮಾಹಿತಿ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆ ಶಿಫ್ಟ್ ಮಾಡಿ ಎಂದು ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸವರಾಜ್ ಹೇಳಿದ್ದಾರೆ ಎಂದು ​ಅಡ್ವೋಕೆಟ್ ಉಮೇಶ್ ಮಾಹಿತಿ ನೀಡಿದರು. ಸ್ವಾಮೀಜಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

 ಲೇಡಿ ವಾರ್ಡನ್ ಬಂಧನ:

ಪೋಕ್ಸೋ ಪ್ರಕರಣ ದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ ಸಂಬಂಧ A- 2 ಆಗಿರುವ ಲೇಡಿ ವಾರ್ಡನ್​ನ್ನು ಚಿತ್ರದುರ್ಗ ಪೊಲೀಸರಿಂದ ಬಂಧನ ಮಾಡಲಾಗಿದೆ. ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು,  ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ. ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು