AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೂ ಯಾವುದೇ ರೀತಿ ಕಮೀಷನ್ ಆರೋಪ ಮಾಡಿಲ್ಲ: ಸ್ಪಷ್ಟಪಡಿಸಿದ ಬಿಬಿಎಂಪಿ ಗುತ್ತಿಗೆದಾರರ ಸಂಘ

ರಾಜ್ಯದಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್​ ಬಾಕಿ ಉಳಿದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಸರ್ಕಾರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ಮಾಡಲು ಶುರುಹಚ್ಚಿಕೊಂಡಿದ್ದಾರೆ. ಅಲ್ಲದೇ ಬಾಕಿ ಇರುವ ಬಿಲ್​ ಜಾರಿಗಾಗಿ ಸಚಿವರು ಕಮೀಷನ್​ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು.

ನಾವೂ ಯಾವುದೇ ರೀತಿ ಕಮೀಷನ್ ಆರೋಪ ಮಾಡಿಲ್ಲ: ಸ್ಪಷ್ಟಪಡಿಸಿದ ಬಿಬಿಎಂಪಿ ಗುತ್ತಿಗೆದಾರರ ಸಂಘ
ಗುತ್ತಿಗೆದಾರ ಮಂಜುನಾಥ್​
Vinayak Hanamant Gurav
| Edited By: |

Updated on:Aug 14, 2023 | 2:00 PM

Share

ಬೆಂಗಳೂರು (ಆ.14) : ರಾಜ್ಯದಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್​ ಬಾಕಿ ಉಳಿದ ಹಿನ್ನೆಲೆಯಲ್ಲಿ ಗುತ್ತಿಗೆದಾರರು (Contractors) ಸರ್ಕಾರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್ (Congress)​ ಸರ್ಕಾರದ ವಿರುದ್ಧ ಬಿಜೆಪಿ (BJP) ನಾಯಕರು ವಾಗ್ದಾಳಿ ಮಾಡಲು ಶುರುಹಚ್ಚಿಕೊಂಡಿದ್ದಾರೆ. ಅಲ್ಲದೇ ಬಾಕಿ ಇರುವ ಬಿಲ್​ ಜಾರಿಗಾಗಿ ಸಚಿವರು ಕಮೀಷನ್​ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಮೊದಲು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರು, ಇದೀಗ ನಮಗೆ ಯಾವುದೇ ರೀತಿಯ ಭಯ, ಒತ್ತಡ ಇಲ್ಲ. ನಮ್ಮ ಬಿಲ್​ ಬರುವ ತನಕ ಹೋರಾಟ ಮುಂದುವರಿಸುತ್ತೇವೆ. ಕಮಿಷನ್ ಆರೋಪ ಮಾಡಿರೋದು ಮಧ್ಯವರ್ತಿಗಳು. ನಾವು ಯಾವುದೇ ರೀತಿ ಆರೋಪ ಮಾಡಿಲ್ಲ. ಯಾರೋ ಮಧ್ಯವರ್ತಿಗಳು ಈ ಕೆಲಸ ಮಾಡಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಮಂಜುನಾಥ್​ ಹೇಳುವ ಮೂಲಕ ಯೂಟರ್ನ್ ಹೊಡೆದಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರ ತನಿಖೆಗೆ ಆದೇಶ ನೀಡಿದೆ. ಎಸ್​​ಐಟಿ ತಂಡದ ಮೂಲಕ ತನಿಖೆಗೆ ಮುಂದಾಗಿದೆ. ಅವತ್ತು ಕೆಲ ಗುತ್ತಿಗೆದಾರರು ಆವೇಶದಿಂದ ನನ್ನ ಜೊತೆ ಕೂಗಾಡಿದರು. ನಾವು ಹೀಗೆ ಇದ್ದರೇ ಬಿಲ್ ಬರಲ್ಲ ಅಂತ ಕೆಲವರು ಈ ರೀತಿ ಹೇಳಿದ್ದಾರೆ. ಆದರೆ ನಾವು ಎಲ್ಲಿಯೂ ಗಲಾಟೆ ಮಾಡದೇ ಬೆಂಗಳೂರಿನ 28 ಜನ ಶಾಸಕರಿಗೆ ಮನವಿ ನೀಡುತ್ತೇವೆ. ಚುನಾವಣೆ ವೇಳೆ ಅವರಿಗಾಗಿ ನಾವು ಕೆಲಸ ಮಾಡಿದ್ದೇವೆ. ಆದರೆ ಇದೀಗ ಅದು ರಾಜಕೀಯ ತಿರುವು ಪಡೆದುಕೊಂಡಿದೆ ಎಂದರು.

ಇದನ್ನೂ ಓದಿ: ಗುತ್ತಿಗೆದಾರರ ಆರೋಪ ಸುಳ್ಳು ಅನ್ನೋದಾದರೆ ಪ್ರಮಾಣ ಮಾಡಲಿ: ಡಿಕೆ ಶಿವಕುಮಾರ್​ಗೆ ಸವಾಲು ಹಾಕಿದ ಮಾಜಿ ಶಾಸಕ ಸಿಟಿ ರವಿ

ಈ ಘಟನೆಯಿಂದ ನಾವು ಬಿಜೆಪಿ ಪರ ಎಂದು ಚರ್ಚೆಯಾಗಿತ್ತು. ಆದರೆ ನಾವು ಯಾವ ಪಕ್ಷದ ಪರ ಅಲ್ಲ. ನಮ್ಮ ಹಕ್ಕನ್ನು ಕೇಳೋಕೆ ಹೋಗಿದ್ದು ರಾಜಕೀಯ ಬಣ್ಣ ಪಡೆಯಿತು. ಈ ಹಿಂದೆ ಕೆಂಪಣ್ಣ ಅವರು ಬಿಜೆಪಿ ಮೇಲೆ ಕಮಿಷನ್ ಆರೋಪ ಮಾಡಿದರು. ಆಗ ನಾವೂ ಕೂಡ ಅವರ ಬೆಂಬಲಕ್ಕೆ ನಿಂತಿದ್ವಿ. ಆಗ ನಾವೂ ಕಾಂಗ್ರೆಸ್ ಪರ ಇದ್ವಾ? ನಾವು ಯಾರ ಬಳಿಯೂ ಕಮಿಷನ್ ಪ್ರಸ್ತಾಪ ಮಾಡಿಲ್ಲ. ನಮ್ಮ ಕಷ್ಟಗಳನ್ನ ಹೇಳಿಕೊಂಡಿದ್ದೇವೆ. ಯಾರ ಮೇಲೆಯೂ ನಾವು ಆರೋಪ ಮಾಡಿಲ್ಲ ಎಂದು ತಿಳಿಸಿದರು.

ಡಿಸಿಎಂ ಭೇಟಿ ಬಳಿಕ ಡೆಡ್ ಲೈನ್ ಕೊಡುತ್ತೇವೆ

SIT ತನಿಖೆ ತನಿಖೆ ಮಾಡಿದ ಬಳಿಕ ಬಿಲ್ ಕೊಡುತ್ತೇವೆ ಅನ್ನೋದು ಸರಿಯಲ್ಲ. ಈ ನಡೆಗೆ ನಮ್ಮ ಒಪ್ಪಿಗೆ ಇಲ್ಲ. ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಕೊರತೆ ಇದೆ. ಅಧಿಕಾರಿಗಳು ಸರಿಯಾಗಿ ಮಾಹಿತಿ ಒದಗಿಸುತ್ತಿಲ್ಲ. ಉಪ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತೇವೆ. ಅವರು ಏನು ಸಲಹೆ ಕೊಡುತ್ತಾರೆ ನೋಡಬೇಕು. ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಳಿಕ ಡೆಡ್ ಲೈನ್ ಕೊಡುತ್ತೇವೆ. ಡೆಡ್ ಲೈನ್ ಮೀರಿದರೇ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Mon, 14 August 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?