Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೂ ಯಾವುದೇ ರೀತಿ ಕಮೀಷನ್ ಆರೋಪ ಮಾಡಿಲ್ಲ: ಸ್ಪಷ್ಟಪಡಿಸಿದ ಬಿಬಿಎಂಪಿ ಗುತ್ತಿಗೆದಾರರ ಸಂಘ

ರಾಜ್ಯದಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್​ ಬಾಕಿ ಉಳಿದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಸರ್ಕಾರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ಮಾಡಲು ಶುರುಹಚ್ಚಿಕೊಂಡಿದ್ದಾರೆ. ಅಲ್ಲದೇ ಬಾಕಿ ಇರುವ ಬಿಲ್​ ಜಾರಿಗಾಗಿ ಸಚಿವರು ಕಮೀಷನ್​ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು.

ನಾವೂ ಯಾವುದೇ ರೀತಿ ಕಮೀಷನ್ ಆರೋಪ ಮಾಡಿಲ್ಲ: ಸ್ಪಷ್ಟಪಡಿಸಿದ ಬಿಬಿಎಂಪಿ ಗುತ್ತಿಗೆದಾರರ ಸಂಘ
ಗುತ್ತಿಗೆದಾರ ಮಂಜುನಾಥ್​
Follow us
Vinayak Hanamant Gurav
| Updated By: ವಿವೇಕ ಬಿರಾದಾರ

Updated on:Aug 14, 2023 | 2:00 PM

ಬೆಂಗಳೂರು (ಆ.14) : ರಾಜ್ಯದಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್​ ಬಾಕಿ ಉಳಿದ ಹಿನ್ನೆಲೆಯಲ್ಲಿ ಗುತ್ತಿಗೆದಾರರು (Contractors) ಸರ್ಕಾರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್ (Congress)​ ಸರ್ಕಾರದ ವಿರುದ್ಧ ಬಿಜೆಪಿ (BJP) ನಾಯಕರು ವಾಗ್ದಾಳಿ ಮಾಡಲು ಶುರುಹಚ್ಚಿಕೊಂಡಿದ್ದಾರೆ. ಅಲ್ಲದೇ ಬಾಕಿ ಇರುವ ಬಿಲ್​ ಜಾರಿಗಾಗಿ ಸಚಿವರು ಕಮೀಷನ್​ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಮೊದಲು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರು, ಇದೀಗ ನಮಗೆ ಯಾವುದೇ ರೀತಿಯ ಭಯ, ಒತ್ತಡ ಇಲ್ಲ. ನಮ್ಮ ಬಿಲ್​ ಬರುವ ತನಕ ಹೋರಾಟ ಮುಂದುವರಿಸುತ್ತೇವೆ. ಕಮಿಷನ್ ಆರೋಪ ಮಾಡಿರೋದು ಮಧ್ಯವರ್ತಿಗಳು. ನಾವು ಯಾವುದೇ ರೀತಿ ಆರೋಪ ಮಾಡಿಲ್ಲ. ಯಾರೋ ಮಧ್ಯವರ್ತಿಗಳು ಈ ಕೆಲಸ ಮಾಡಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಮಂಜುನಾಥ್​ ಹೇಳುವ ಮೂಲಕ ಯೂಟರ್ನ್ ಹೊಡೆದಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರ ತನಿಖೆಗೆ ಆದೇಶ ನೀಡಿದೆ. ಎಸ್​​ಐಟಿ ತಂಡದ ಮೂಲಕ ತನಿಖೆಗೆ ಮುಂದಾಗಿದೆ. ಅವತ್ತು ಕೆಲ ಗುತ್ತಿಗೆದಾರರು ಆವೇಶದಿಂದ ನನ್ನ ಜೊತೆ ಕೂಗಾಡಿದರು. ನಾವು ಹೀಗೆ ಇದ್ದರೇ ಬಿಲ್ ಬರಲ್ಲ ಅಂತ ಕೆಲವರು ಈ ರೀತಿ ಹೇಳಿದ್ದಾರೆ. ಆದರೆ ನಾವು ಎಲ್ಲಿಯೂ ಗಲಾಟೆ ಮಾಡದೇ ಬೆಂಗಳೂರಿನ 28 ಜನ ಶಾಸಕರಿಗೆ ಮನವಿ ನೀಡುತ್ತೇವೆ. ಚುನಾವಣೆ ವೇಳೆ ಅವರಿಗಾಗಿ ನಾವು ಕೆಲಸ ಮಾಡಿದ್ದೇವೆ. ಆದರೆ ಇದೀಗ ಅದು ರಾಜಕೀಯ ತಿರುವು ಪಡೆದುಕೊಂಡಿದೆ ಎಂದರು.

ಇದನ್ನೂ ಓದಿ: ಗುತ್ತಿಗೆದಾರರ ಆರೋಪ ಸುಳ್ಳು ಅನ್ನೋದಾದರೆ ಪ್ರಮಾಣ ಮಾಡಲಿ: ಡಿಕೆ ಶಿವಕುಮಾರ್​ಗೆ ಸವಾಲು ಹಾಕಿದ ಮಾಜಿ ಶಾಸಕ ಸಿಟಿ ರವಿ

ಈ ಘಟನೆಯಿಂದ ನಾವು ಬಿಜೆಪಿ ಪರ ಎಂದು ಚರ್ಚೆಯಾಗಿತ್ತು. ಆದರೆ ನಾವು ಯಾವ ಪಕ್ಷದ ಪರ ಅಲ್ಲ. ನಮ್ಮ ಹಕ್ಕನ್ನು ಕೇಳೋಕೆ ಹೋಗಿದ್ದು ರಾಜಕೀಯ ಬಣ್ಣ ಪಡೆಯಿತು. ಈ ಹಿಂದೆ ಕೆಂಪಣ್ಣ ಅವರು ಬಿಜೆಪಿ ಮೇಲೆ ಕಮಿಷನ್ ಆರೋಪ ಮಾಡಿದರು. ಆಗ ನಾವೂ ಕೂಡ ಅವರ ಬೆಂಬಲಕ್ಕೆ ನಿಂತಿದ್ವಿ. ಆಗ ನಾವೂ ಕಾಂಗ್ರೆಸ್ ಪರ ಇದ್ವಾ? ನಾವು ಯಾರ ಬಳಿಯೂ ಕಮಿಷನ್ ಪ್ರಸ್ತಾಪ ಮಾಡಿಲ್ಲ. ನಮ್ಮ ಕಷ್ಟಗಳನ್ನ ಹೇಳಿಕೊಂಡಿದ್ದೇವೆ. ಯಾರ ಮೇಲೆಯೂ ನಾವು ಆರೋಪ ಮಾಡಿಲ್ಲ ಎಂದು ತಿಳಿಸಿದರು.

ಡಿಸಿಎಂ ಭೇಟಿ ಬಳಿಕ ಡೆಡ್ ಲೈನ್ ಕೊಡುತ್ತೇವೆ

SIT ತನಿಖೆ ತನಿಖೆ ಮಾಡಿದ ಬಳಿಕ ಬಿಲ್ ಕೊಡುತ್ತೇವೆ ಅನ್ನೋದು ಸರಿಯಲ್ಲ. ಈ ನಡೆಗೆ ನಮ್ಮ ಒಪ್ಪಿಗೆ ಇಲ್ಲ. ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಕೊರತೆ ಇದೆ. ಅಧಿಕಾರಿಗಳು ಸರಿಯಾಗಿ ಮಾಹಿತಿ ಒದಗಿಸುತ್ತಿಲ್ಲ. ಉಪ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತೇವೆ. ಅವರು ಏನು ಸಲಹೆ ಕೊಡುತ್ತಾರೆ ನೋಡಬೇಕು. ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಳಿಕ ಡೆಡ್ ಲೈನ್ ಕೊಡುತ್ತೇವೆ. ಡೆಡ್ ಲೈನ್ ಮೀರಿದರೇ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Mon, 14 August 23

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!