AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI, ಸಹಾಯ ಪ್ರಾಧ್ಯಾಪಕರ ನೇಮಕಾತಿ ಬಳಿಕ RTO ಮೋಟಾರು ವಾಹನ ನಿರೀಕ್ಷಕರ ನೇಮಕಾತಿಯಲ್ಲಿ ಅಕ್ರಮ ಆರೋಪ!

ಕೆಪಿಎಸ್​ಸಿ 2016ರಲ್ಲಿ ನೇರ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಿತ್ತು. ವಿದ್ಯಾರ್ಹತೆ, ದೈಹಿಕ ಪರೀಕ್ಷೆ, ಹೆವಿ ಡಿಎಲ್ ಕಡ್ಡಾಯಗೊಳಿಸಿತ್ತು. ಸೇವಾನುಭವ ಹೊಂದಿರದ, ದೈಹಿಕ ಪರೀಕ್ಷೆಯಲ್ಲಿ ಆಯ್ಕೆ ಆಗದವರನ್ನ ರಿಜೆಕ್ಟ್ ಮಾಡಿತ್ತು.

PSI, ಸಹಾಯ ಪ್ರಾಧ್ಯಾಪಕರ ನೇಮಕಾತಿ ಬಳಿಕ RTO ಮೋಟಾರು ವಾಹನ ನಿರೀಕ್ಷಕರ ನೇಮಕಾತಿಯಲ್ಲಿ ಅಕ್ರಮ ಆರೋಪ!
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:May 04, 2022 | 11:06 AM

Share

ಬೆಂಗಳೂರು: ಪಿಎಸ್ಐ (PSI), ಸಹಾಯ ಪ್ರಾಧ್ಯಾಪಕರ ನೇಮಕಾತಿ ಬಳಿಕ ಆರ್ಟಿಓ (RTO) ಮೋಟಾರು ವಾಹನ ನಿರೀಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಕೆಪಿಎಸ್ಸಿ ಹಾಗೂ ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದ್ದು, ಕೆಪಿಎಸ್ಸಿಯಿಂದ 144 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಆಗಿದೆ. 92 ಅನರ್ಹರನ್ನು ಒಳಗೊಂಡ 144 ಜನರ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ಆದರೆ ಕಳೆದ ವಾರ ಮತ್ತೆ ಬಿಡುಗಡೆ ಮಾಡಿದ ತಾತ್ಕಾಲಿಕ ನೇಮಕ ಪಟ್ಟಿಯಲ್ಲಿ ರಿಜೆಕ್ಟ್ ಆದ 92 ಅಭ್ಯರ್ಥಿಗಳ ಹೆಸರು ನಮೂದಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಕೆಪಿಎಸ್​ಸಿ 2016ರಲ್ಲಿ ನೇರ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಿತ್ತು. ವಿದ್ಯಾರ್ಹತೆ, ದೈಹಿಕ ಪರೀಕ್ಷೆ, ಹೆವಿ ಡಿಎಲ್ ಕಡ್ಡಾಯಗೊಳಿಸಿತ್ತು. ಸೇವಾನುಭವ ಹೊಂದಿರದ, ದೈಹಿಕ ಪರೀಕ್ಷೆಯಲ್ಲಿ ಆಯ್ಕೆ ಆಗದವರನ್ನ ರಿಜೆಕ್ಟ್ ಮಾಡಿತ್ತು. ಸ್ವತಃ ಕೆಪಿಎಸ್​ಸಿ 2019 ರಲ್ಲಿ ತಾತ್ಕಾಲಿಕ ನೇಮಕ ಪಟ್ಟಿಯಲ್ಲಿ ಅನರ್ಹ ಅಭ್ಯರ್ಥಿಗಳನ್ನ ಹೆಸರು ಉಲ್ಲೇಖ ಮಾಡಿತ್ತು.ಆದರೆ ಕಳೆದ ವಾರ ಮತ್ತೆ ಬಿಡುಗಡೆ ಮಾಡಿದ ತಾತ್ಕಾಲಿಕ ನೇಮಕ ಪಟ್ಟಿಯಲ್ಲಿ ರಿಜೆಕ್ಟ್ ಆದ 92 ಅಭ್ಯರ್ಥಿಗಳ ಹೆಸರು ಕಂಡುಬಂದಿದೆ. ಹೀಗಾಗಿ ಇದರಲ್ಲಿ ಅಕ್ರಮ ನಡೆದಿದೆ ಎಂದು ಅಂತ ಅಭ್ಯರ್ಥಿಗಳು ಮಾಡುತ್ತಿದ್ದಾರೆ.

ಇನ್ನು ಪಿಎಸ್​ಐ ನೇಮಕಾತಿಯಲ್ಲಿ ನಡೆದ ಅಕ್ರಮ ದಿನಕ್ಕೊಂದು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಸಚಿವ ಅಶ್ವತ್ಥ್ ನಾರಾಯಣ ಅವರ ಹೆಸರು ಕೇಳಿಬಂದಿದೆ. ಕಿಂಗ್​ಪಿನ್​ಗಳ ಜತೆ ಮಧ್ಯವರ್ತಿಗಳಾಗಿ ಕೆಲವು ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಪೊಲೀಸ್ ಇಲಾಖೆಯ ಕೆಲವು ಹಿರಿಯ ಅಧಿಕಾರಿಗಳಿಂದಲೇ ಈ ಅಕ್ರಮ ಡೀಲ್​ ನಡೆದಿರುವ ಅನುಮಾನ ಹೆಚ್ಚಾಗಿದೆ. ಕಿಂಗ್​ಪಿನ್​ ರುದ್ರಗೌಡ ಪಾಟೀಲ್ ಅಭ್ಯರ್ಥಿ ಪರ ​ಹಣ ಸಂದಾಯ ಮಾಡಿದ್ದಾನೆ. ಸದ್ಯ ಓರ್ವ ಅಧಿಕಾರಿ ಕರೆದು ಸಿಐಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ

ಗ್ಯಾಂಗ್​ ರೇಪ್​​ ಆಗಿದೆ ಎಂದು ದೂರು ಕೊಡಲು ಹೋದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪೊಲೀಸ್​ ಅಧಿಕಾರಿ

ಐದು ಕೆಜಿಯ ಕೇಕ್ ಕತ್ತರಿಸಿ ಸಾಕು ಕುರಿಯ ಹುಟ್ಟುಹಬ್ಬ ಆಚರಿಸಿದ ಕುರಿ ವ್ಯಾಪಾರಿ; ಫೋಟೋಗಳು ಇಲ್ಲಿವೆ

Published On - 10:59 am, Wed, 4 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ