AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಪ್ಪಟ್ಟು ದರ ವಸೂಲಿ: ಕಾರ್ಯಾಚರಣೆಗಿಳಿದ ಆರ್​ಟಿಒ ಅಧಿಕಾರಿಗಳು, ಹಲವು ಬಸ್​ಗಳಿಗೆ ದಂಡ

ಖಾಸಗಿ ಬಸ್​ಗ ದುಪ್ಪಟ್ಟು ದರ ವಸೂಲಿ ಆರೋಪ ಹಿನ್ನೆಲೆ ಖಾಸಗಿ ಬಸ್​ಗಳನ್ನು ನಿಲ್ಲಿಸಿ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿಯಿಂದ ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಟಿಕೆಟ್​ಗಳ ಪರಿಶೀಲನೆ ಮಾಡಲಾಗಿದೆ.

ದುಪ್ಪಟ್ಟು ದರ ವಸೂಲಿ: ಕಾರ್ಯಾಚರಣೆಗಿಳಿದ ಆರ್​ಟಿಒ ಅಧಿಕಾರಿಗಳು, ಹಲವು ಬಸ್​ಗಳಿಗೆ ದಂಡ
ಆರ್ ಟಿ ಒ ಅಧಿಕಾರಿಗಳಿಂದ ಪರಿಶೀಲನೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 22, 2022 | 10:22 PM

Share

ಬೆಂಗಳೂರು: ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಹೀಗಾಗಿ ಆರ್​ಟಿಒ ಅಧಿಕಾರಿಗಳು ಪ್ರಯಾಣಿಕರ ಟಿಕೆಟ್​ ಪರಿಶೀಲನೆ ಮಾಡುತ್ತಿದ್ದಾರೆ. ಖಾಸಗಿ ಬಸ್​ ದುಪ್ಪಟ್ಟು ದರ ವಸೂಲಿ ಆರೋಪ ಹಿನ್ನೆಲೆ ಖಾಸಗಿ ಬಸ್​ಗಳನ್ನು ನಿಲ್ಲಿಸಿ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿಯಿಂದ ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಟಿಕೆಟ್​ಗಳ ಪರಿಶೀಲನೆ ಮಾಡಲಾಗಿದೆ. ಖಾಸಗಿ (VRL) ಟ್ರಾವೆಲ್ಸ್​ನಲ್ಲಿ ಟಕೆಟ್ ದರ ಹೆಚ್ಚಳವಾಗಿದ್ದು, ಬೆಂಗಳೂರಿನಿಂದ ಸಿಂದಗಿಗೆ ರೂ. 1550 ತೆಗೆದುಕೊಂಡಿದ್ದಾರೆ. ಬಿಜಾಪುರ 800 ರೂ ತೆಗದುಕೊಳ್ಳಲಾಗುತ್ತಿದೆ. ಬಿಜಾಪುರಕ್ಕೆ 1800 ರೂ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರನ್ನ ಪ್ರಶ್ನೆ ಮಾಡಿ, ಆರ್​ಟಿಒ ಅಧಿಕಾರಿಗಳು ಪೆನಾಲ್ಟಿ ಹಾಕಿ ಕೇಸ್ ಬರೆಯುತ್ತಿದ್ದಾರೆ.

ಆರೆಂಜ್ ಟ್ರಾವೆಲ್ಸ್​ ವಿರುದ್ಧ RTO ಅಧಿಕಾರಿಗಳು ಕೇಸ್

ಆರೆಂಜ್ ಟ್ರಾವೆಲ್ಸ್​ನಂತಹ ಇತರೆ ಖಾಸಗಿ ಟ್ರಾವೆಲ್ಸ್​ಗಳು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಆರ್​ಟಿಒ ಅಧಿಕಾರಿಗಳು ದಂಡ ವಿಧಿಸಿ ಕೇಸ್ ಹಾಕುತ್ತಿದ್ದಾರೆ. ಸಾಮಾನ್ಯ ದಿನದಲ್ಲಿ ಟಿಕೆಟ್ ದರ 700 ರೂ.ನಿಂದ 800 ರೂ. ಆದರೆ ಇಂದು 2,700 ರೂಪಾಯಿ ಪಡೆಯುತ್ತಿದ್ದಾರೆ. ಹೀಗಾಗಿ ಚಾಲಕನನ್ನು ಕರೆದು ದಾಖಲೆ ಪರಿಶೀಲಿಸಿದ್ದು, ಆರೆಂಜ್ ಟ್ರಾವೆಲ್ಸ್​ ವಿರುದ್ಧ RTO ಅಧಿಕಾರಿಗಳು ಕೇಸ್​ ಹಾಕಿದ್ದಾರೆ. ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಅಧಿಕಾರಿಗಳಿಂದ ತಪಾಸಣೆ ನಡೆಯುತ್ತಿದೆ.

ಬೆಂಗಳೂರಿನ ಮೆಜೆಸ್ಟಿಕ್​ಗೆ ಹರಿದು ಬಂದ ಜನಸಾಗರ

ಇನ್ನು ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಇರುವುದರಿಂದ ತಮ್ಮ ಊರುಗಳಿಗೆ ಜನರು ತೆರಳುತ್ತಿದ್ದು, ಬೆಂಗಳೂರಿನ ಮೆಜೆಸ್ಟಿಕ್​ಗೆ ಜನಸಾಗರ ಹರಿದು ಬರುತ್ತಿದೆ. ತಮ್ಮ ಊರುಗಳಿಗೆ ತೆರಳಲು ಜನರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಇತರೆ ಬಸ್​​ ನಿಲ್ದಾಣಗಳಿಗೂ ಜನ ಬರುತ್ತಿದ್ದಾರೆ. ಕಲಾಸಿಪಾಳ್ಯ ಬಸ್​ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣ, ಗೊರಗುಂಟೆಪಾಳ್ಯ, ಯಶವಂತಪುರ, ಬಾಪೂಜಿನಗರ ಸ್ಯಾಟಲೈಟ್​​​ ಬಸ್​​ ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:14 pm, Sat, 22 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!