AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಪ್ಪಟ್ಟು ದರ ವಸೂಲಿ: ಕಾರ್ಯಾಚರಣೆಗಿಳಿದ ಆರ್​ಟಿಒ ಅಧಿಕಾರಿಗಳು, ಹಲವು ಬಸ್​ಗಳಿಗೆ ದಂಡ

ಖಾಸಗಿ ಬಸ್​ಗ ದುಪ್ಪಟ್ಟು ದರ ವಸೂಲಿ ಆರೋಪ ಹಿನ್ನೆಲೆ ಖಾಸಗಿ ಬಸ್​ಗಳನ್ನು ನಿಲ್ಲಿಸಿ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿಯಿಂದ ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಟಿಕೆಟ್​ಗಳ ಪರಿಶೀಲನೆ ಮಾಡಲಾಗಿದೆ.

ದುಪ್ಪಟ್ಟು ದರ ವಸೂಲಿ: ಕಾರ್ಯಾಚರಣೆಗಿಳಿದ ಆರ್​ಟಿಒ ಅಧಿಕಾರಿಗಳು, ಹಲವು ಬಸ್​ಗಳಿಗೆ ದಂಡ
ಆರ್ ಟಿ ಒ ಅಧಿಕಾರಿಗಳಿಂದ ಪರಿಶೀಲನೆ
TV9 Web
| Edited By: |

Updated on:Oct 22, 2022 | 10:22 PM

Share

ಬೆಂಗಳೂರು: ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಹೀಗಾಗಿ ಆರ್​ಟಿಒ ಅಧಿಕಾರಿಗಳು ಪ್ರಯಾಣಿಕರ ಟಿಕೆಟ್​ ಪರಿಶೀಲನೆ ಮಾಡುತ್ತಿದ್ದಾರೆ. ಖಾಸಗಿ ಬಸ್​ ದುಪ್ಪಟ್ಟು ದರ ವಸೂಲಿ ಆರೋಪ ಹಿನ್ನೆಲೆ ಖಾಸಗಿ ಬಸ್​ಗಳನ್ನು ನಿಲ್ಲಿಸಿ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿಯಿಂದ ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಟಿಕೆಟ್​ಗಳ ಪರಿಶೀಲನೆ ಮಾಡಲಾಗಿದೆ. ಖಾಸಗಿ (VRL) ಟ್ರಾವೆಲ್ಸ್​ನಲ್ಲಿ ಟಕೆಟ್ ದರ ಹೆಚ್ಚಳವಾಗಿದ್ದು, ಬೆಂಗಳೂರಿನಿಂದ ಸಿಂದಗಿಗೆ ರೂ. 1550 ತೆಗೆದುಕೊಂಡಿದ್ದಾರೆ. ಬಿಜಾಪುರ 800 ರೂ ತೆಗದುಕೊಳ್ಳಲಾಗುತ್ತಿದೆ. ಬಿಜಾಪುರಕ್ಕೆ 1800 ರೂ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರನ್ನ ಪ್ರಶ್ನೆ ಮಾಡಿ, ಆರ್​ಟಿಒ ಅಧಿಕಾರಿಗಳು ಪೆನಾಲ್ಟಿ ಹಾಕಿ ಕೇಸ್ ಬರೆಯುತ್ತಿದ್ದಾರೆ.

ಆರೆಂಜ್ ಟ್ರಾವೆಲ್ಸ್​ ವಿರುದ್ಧ RTO ಅಧಿಕಾರಿಗಳು ಕೇಸ್

ಆರೆಂಜ್ ಟ್ರಾವೆಲ್ಸ್​ನಂತಹ ಇತರೆ ಖಾಸಗಿ ಟ್ರಾವೆಲ್ಸ್​ಗಳು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಆರ್​ಟಿಒ ಅಧಿಕಾರಿಗಳು ದಂಡ ವಿಧಿಸಿ ಕೇಸ್ ಹಾಕುತ್ತಿದ್ದಾರೆ. ಸಾಮಾನ್ಯ ದಿನದಲ್ಲಿ ಟಿಕೆಟ್ ದರ 700 ರೂ.ನಿಂದ 800 ರೂ. ಆದರೆ ಇಂದು 2,700 ರೂಪಾಯಿ ಪಡೆಯುತ್ತಿದ್ದಾರೆ. ಹೀಗಾಗಿ ಚಾಲಕನನ್ನು ಕರೆದು ದಾಖಲೆ ಪರಿಶೀಲಿಸಿದ್ದು, ಆರೆಂಜ್ ಟ್ರಾವೆಲ್ಸ್​ ವಿರುದ್ಧ RTO ಅಧಿಕಾರಿಗಳು ಕೇಸ್​ ಹಾಕಿದ್ದಾರೆ. ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಅಧಿಕಾರಿಗಳಿಂದ ತಪಾಸಣೆ ನಡೆಯುತ್ತಿದೆ.

ಬೆಂಗಳೂರಿನ ಮೆಜೆಸ್ಟಿಕ್​ಗೆ ಹರಿದು ಬಂದ ಜನಸಾಗರ

ಇನ್ನು ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಇರುವುದರಿಂದ ತಮ್ಮ ಊರುಗಳಿಗೆ ಜನರು ತೆರಳುತ್ತಿದ್ದು, ಬೆಂಗಳೂರಿನ ಮೆಜೆಸ್ಟಿಕ್​ಗೆ ಜನಸಾಗರ ಹರಿದು ಬರುತ್ತಿದೆ. ತಮ್ಮ ಊರುಗಳಿಗೆ ತೆರಳಲು ಜನರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಇತರೆ ಬಸ್​​ ನಿಲ್ದಾಣಗಳಿಗೂ ಜನ ಬರುತ್ತಿದ್ದಾರೆ. ಕಲಾಸಿಪಾಳ್ಯ ಬಸ್​ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣ, ಗೊರಗುಂಟೆಪಾಳ್ಯ, ಯಶವಂತಪುರ, ಬಾಪೂಜಿನಗರ ಸ್ಯಾಟಲೈಟ್​​​ ಬಸ್​​ ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:14 pm, Sat, 22 October 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!