AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಪ್ಪಟ್ಟು ದರ ವಸೂಲಿ: ಕಾರ್ಯಾಚರಣೆಗಿಳಿದ ಆರ್​ಟಿಒ ಅಧಿಕಾರಿಗಳು, ಹಲವು ಬಸ್​ಗಳಿಗೆ ದಂಡ

ಖಾಸಗಿ ಬಸ್​ಗ ದುಪ್ಪಟ್ಟು ದರ ವಸೂಲಿ ಆರೋಪ ಹಿನ್ನೆಲೆ ಖಾಸಗಿ ಬಸ್​ಗಳನ್ನು ನಿಲ್ಲಿಸಿ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿಯಿಂದ ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಟಿಕೆಟ್​ಗಳ ಪರಿಶೀಲನೆ ಮಾಡಲಾಗಿದೆ.

ದುಪ್ಪಟ್ಟು ದರ ವಸೂಲಿ: ಕಾರ್ಯಾಚರಣೆಗಿಳಿದ ಆರ್​ಟಿಒ ಅಧಿಕಾರಿಗಳು, ಹಲವು ಬಸ್​ಗಳಿಗೆ ದಂಡ
ಆರ್ ಟಿ ಒ ಅಧಿಕಾರಿಗಳಿಂದ ಪರಿಶೀಲನೆ
TV9 Web
| Edited By: |

Updated on:Oct 22, 2022 | 10:22 PM

Share

ಬೆಂಗಳೂರು: ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಹೀಗಾಗಿ ಆರ್​ಟಿಒ ಅಧಿಕಾರಿಗಳು ಪ್ರಯಾಣಿಕರ ಟಿಕೆಟ್​ ಪರಿಶೀಲನೆ ಮಾಡುತ್ತಿದ್ದಾರೆ. ಖಾಸಗಿ ಬಸ್​ ದುಪ್ಪಟ್ಟು ದರ ವಸೂಲಿ ಆರೋಪ ಹಿನ್ನೆಲೆ ಖಾಸಗಿ ಬಸ್​ಗಳನ್ನು ನಿಲ್ಲಿಸಿ, ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿಯಿಂದ ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಟಿಕೆಟ್​ಗಳ ಪರಿಶೀಲನೆ ಮಾಡಲಾಗಿದೆ. ಖಾಸಗಿ (VRL) ಟ್ರಾವೆಲ್ಸ್​ನಲ್ಲಿ ಟಕೆಟ್ ದರ ಹೆಚ್ಚಳವಾಗಿದ್ದು, ಬೆಂಗಳೂರಿನಿಂದ ಸಿಂದಗಿಗೆ ರೂ. 1550 ತೆಗೆದುಕೊಂಡಿದ್ದಾರೆ. ಬಿಜಾಪುರ 800 ರೂ ತೆಗದುಕೊಳ್ಳಲಾಗುತ್ತಿದೆ. ಬಿಜಾಪುರಕ್ಕೆ 1800 ರೂ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರನ್ನ ಪ್ರಶ್ನೆ ಮಾಡಿ, ಆರ್​ಟಿಒ ಅಧಿಕಾರಿಗಳು ಪೆನಾಲ್ಟಿ ಹಾಕಿ ಕೇಸ್ ಬರೆಯುತ್ತಿದ್ದಾರೆ.

ಆರೆಂಜ್ ಟ್ರಾವೆಲ್ಸ್​ ವಿರುದ್ಧ RTO ಅಧಿಕಾರಿಗಳು ಕೇಸ್

ಆರೆಂಜ್ ಟ್ರಾವೆಲ್ಸ್​ನಂತಹ ಇತರೆ ಖಾಸಗಿ ಟ್ರಾವೆಲ್ಸ್​ಗಳು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಆರ್​ಟಿಒ ಅಧಿಕಾರಿಗಳು ದಂಡ ವಿಧಿಸಿ ಕೇಸ್ ಹಾಕುತ್ತಿದ್ದಾರೆ. ಸಾಮಾನ್ಯ ದಿನದಲ್ಲಿ ಟಿಕೆಟ್ ದರ 700 ರೂ.ನಿಂದ 800 ರೂ. ಆದರೆ ಇಂದು 2,700 ರೂಪಾಯಿ ಪಡೆಯುತ್ತಿದ್ದಾರೆ. ಹೀಗಾಗಿ ಚಾಲಕನನ್ನು ಕರೆದು ದಾಖಲೆ ಪರಿಶೀಲಿಸಿದ್ದು, ಆರೆಂಜ್ ಟ್ರಾವೆಲ್ಸ್​ ವಿರುದ್ಧ RTO ಅಧಿಕಾರಿಗಳು ಕೇಸ್​ ಹಾಕಿದ್ದಾರೆ. ಬೆಂಗಳೂರಿನ ರೇಸ್​ಕೋರ್ಸ್​ ರಸ್ತೆಯಲ್ಲಿ ಅಧಿಕಾರಿಗಳಿಂದ ತಪಾಸಣೆ ನಡೆಯುತ್ತಿದೆ.

ಬೆಂಗಳೂರಿನ ಮೆಜೆಸ್ಟಿಕ್​ಗೆ ಹರಿದು ಬಂದ ಜನಸಾಗರ

ಇನ್ನು ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಇರುವುದರಿಂದ ತಮ್ಮ ಊರುಗಳಿಗೆ ಜನರು ತೆರಳುತ್ತಿದ್ದು, ಬೆಂಗಳೂರಿನ ಮೆಜೆಸ್ಟಿಕ್​ಗೆ ಜನಸಾಗರ ಹರಿದು ಬರುತ್ತಿದೆ. ತಮ್ಮ ಊರುಗಳಿಗೆ ತೆರಳಲು ಜನರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಇತರೆ ಬಸ್​​ ನಿಲ್ದಾಣಗಳಿಗೂ ಜನ ಬರುತ್ತಿದ್ದಾರೆ. ಕಲಾಸಿಪಾಳ್ಯ ಬಸ್​ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣ, ಗೊರಗುಂಟೆಪಾಳ್ಯ, ಯಶವಂತಪುರ, ಬಾಪೂಜಿನಗರ ಸ್ಯಾಟಲೈಟ್​​​ ಬಸ್​​ ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:14 pm, Sat, 22 October 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ